ಘಟನೆಯ ವಿವರ: ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಕನಮನೆ ಜಲಪಾತಕ್ಕೆ 27 ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಕೆಲ ಸಿಬ್ಬಂದಿ ಜೊತೆಗೆ ಪ್ರವಾಸಕ್ಕೆ ಬಂದಿದ್ದರು. ಜಲಪಾತದಲ್ಲಿ ಮಧ್ಯಾಹ್ನ ಈಜಲು ಹೋದಾಗ ನೀರಿನ ಸುಳಿಗೆ ಸಿಕ್ಕಿ ಕೊಚ್ಚಿ ಹೋಗಿ ಬಂಡೆಯೊಂದಕ್ಕೆ ತಲೆ ಅಪ್ಪಳಿಸಿದ ಪರಿಣಾಮ ತೀವ್ರ ಪೆಟ್ಟು ಬಿದ್ದಿದೆ. ಇವನನ್ನು ರಕ್ಷಿಸಲು ಸಮೀಪದಲ್ಲಿದ್ದವರು ಪ್ರಯತ್ನಿಸಿದರೂ ಸಹ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ.