<p><strong>ಶ್ರವಣಬೆಳಗೊಳ:</strong> ಲೇಖಕಿ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಲು ಮೈಸೂರಿಗೆ ಹೊರಟಿದ್ದ ಬಿಜೆಪಿ ತಾಲ್ಲೂಕು ಮಾಜಿ ಅಧ್ಯಕ್ಷ ಡಿ.ಎಂ.ರವಿ ದಮ್ಮನಿಂಗಳ ಅವರನ್ನು ಸೋಮವಾರ ಬೆಳಗ್ಗೆ ಶ್ರವಣಬೆಳಗೊಳ ಠಾಣೆ ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.</p>.<p>ಪ್ರತಿಭಟನೆ ನಡೆಸುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಷಯ ಅರಿತ ಪೊಲೀಸರು, ರವಿ ಅವರ ಗ್ರಾಮವಾದ ದಮ್ಮನಿಂಗಳದಲ್ಲಿ ವಶಕ್ಕೆ ಪಡೆದು ಬಳಿಕ ಠಾಣೆಗೆ ಕರೆತಂದು ಎರಡು ಗಂಟೆಗಳಿಗೂ ಹೆಚ್ಚು ಕಾಲ ಠಾಣೆಯಲ್ಲಿ ಕುಳ್ಳರಿಸಿದ್ದಾರೆ. </p>.<p>ಇದನ್ನು ವಿರೋಧಿಸಿ ಬಿಜೆಪಿ ಮುಖಂಡರು ಹಾಗೂ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬಳಿಕ ಅವರನ್ನು ಬಿಡುಗಡೆ ಮಾಡಿ ಕಳುಹಿಸಿದರು.</p>.<p>ಡಿ.ಎನ್.ರವಿ ಮಾತನಾಡಿ, ‘ದಸರಾ ಉದ್ಘಾಟನೆಗೆ ತೊಂದರೆ ನೀಡುತ್ತಾರೆ ಎನ್ನುವ ನೆಪವೊಡ್ಡಿ ಮನೆಯಲ್ಲಿ ಮಲಗಿದ್ದ ಹಿಂದೂ ಮುಖಂಡರನ್ನು ಸರ್ಕಾರ ಬಂಧಿಸುತ್ತಿರುವುದು ಅಮಾನವೀಯ’ ಎಂದು ಆರೋಪಿಸಿದರು.</p>.<p>‘ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಬಿಜೆಪಿ ಮುಖಂಡರನ್ನು, ಹಿಂದೂ ಹೋರಾಟಗಾರರನ್ನು ಬಂಧಿಸಿ ಭಾನು ಮುಷ್ತಾಕ್ ಅವರಿಂದ ಉದ್ಘಾಟನೆ ಮಾಡಿಸುವ ಪ್ರಮೇಯ ಅವಶ್ಯಕತೆ ಕಾಂಗ್ರೆಸ್ ಸರ್ಕಾರಕ್ಕೆ ಇರಲಿಲ್ಲ. ಇದು ಖಂಡನೀಯ’ ಎಂದರು.</p>.<p>ಬಿಜೆಪಿ ಮುಖಂಡ ಸಿ.ಆರ್.ಚಿದಾನಂದ ಮಾತನಾಡಿ, ‘ದಸರಾ ಮಹೋತ್ಸವಕ್ಕೆ ಬಿಜೆಪಿ ಮುಖಂಡರು ಹಾಗೂ ಹಿಂದೂ ಕಾರ್ಯಕರ್ತರು ಹೋಗುವುದನ್ನು ತಡೆಯುವ ನಡೆ ಖಂಡನೀಯ. ಇದಕ್ಕೆ ತಕ್ಕ ಉತ್ತರ ಕೊಡಲಾಗುವುದು’ ಎಂದು ಎಚ್ಚರಿಸಿದರು.</p>.<p>ಮುಖಂಡರಾದ ರೂಪೇಶ್, ಮಂಜು ಗುರಿಗಾರನಹಳ್ಳಿ, ಕುಮಾರ್, ಸಾಗರ್ ಗೌಡ, ಮಂಜುನಾಥ್, ಚಂದ್ರರಾಜ್, ರಾಜೇಶ್, ಮಂಜು ಬೋವಿ, ಸ್ವಾಮಿ, ರಾಜೇಶ್, ನವೀನ್, ಸಣ್ಣಿ ಮುಂತಾದವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರವಣಬೆಳಗೊಳ:</strong> ಲೇಖಕಿ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಲು ಮೈಸೂರಿಗೆ ಹೊರಟಿದ್ದ ಬಿಜೆಪಿ ತಾಲ್ಲೂಕು ಮಾಜಿ ಅಧ್ಯಕ್ಷ ಡಿ.ಎಂ.ರವಿ ದಮ್ಮನಿಂಗಳ ಅವರನ್ನು ಸೋಮವಾರ ಬೆಳಗ್ಗೆ ಶ್ರವಣಬೆಳಗೊಳ ಠಾಣೆ ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.</p>.<p>ಪ್ರತಿಭಟನೆ ನಡೆಸುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಷಯ ಅರಿತ ಪೊಲೀಸರು, ರವಿ ಅವರ ಗ್ರಾಮವಾದ ದಮ್ಮನಿಂಗಳದಲ್ಲಿ ವಶಕ್ಕೆ ಪಡೆದು ಬಳಿಕ ಠಾಣೆಗೆ ಕರೆತಂದು ಎರಡು ಗಂಟೆಗಳಿಗೂ ಹೆಚ್ಚು ಕಾಲ ಠಾಣೆಯಲ್ಲಿ ಕುಳ್ಳರಿಸಿದ್ದಾರೆ. </p>.<p>ಇದನ್ನು ವಿರೋಧಿಸಿ ಬಿಜೆಪಿ ಮುಖಂಡರು ಹಾಗೂ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬಳಿಕ ಅವರನ್ನು ಬಿಡುಗಡೆ ಮಾಡಿ ಕಳುಹಿಸಿದರು.</p>.<p>ಡಿ.ಎನ್.ರವಿ ಮಾತನಾಡಿ, ‘ದಸರಾ ಉದ್ಘಾಟನೆಗೆ ತೊಂದರೆ ನೀಡುತ್ತಾರೆ ಎನ್ನುವ ನೆಪವೊಡ್ಡಿ ಮನೆಯಲ್ಲಿ ಮಲಗಿದ್ದ ಹಿಂದೂ ಮುಖಂಡರನ್ನು ಸರ್ಕಾರ ಬಂಧಿಸುತ್ತಿರುವುದು ಅಮಾನವೀಯ’ ಎಂದು ಆರೋಪಿಸಿದರು.</p>.<p>‘ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಬಿಜೆಪಿ ಮುಖಂಡರನ್ನು, ಹಿಂದೂ ಹೋರಾಟಗಾರರನ್ನು ಬಂಧಿಸಿ ಭಾನು ಮುಷ್ತಾಕ್ ಅವರಿಂದ ಉದ್ಘಾಟನೆ ಮಾಡಿಸುವ ಪ್ರಮೇಯ ಅವಶ್ಯಕತೆ ಕಾಂಗ್ರೆಸ್ ಸರ್ಕಾರಕ್ಕೆ ಇರಲಿಲ್ಲ. ಇದು ಖಂಡನೀಯ’ ಎಂದರು.</p>.<p>ಬಿಜೆಪಿ ಮುಖಂಡ ಸಿ.ಆರ್.ಚಿದಾನಂದ ಮಾತನಾಡಿ, ‘ದಸರಾ ಮಹೋತ್ಸವಕ್ಕೆ ಬಿಜೆಪಿ ಮುಖಂಡರು ಹಾಗೂ ಹಿಂದೂ ಕಾರ್ಯಕರ್ತರು ಹೋಗುವುದನ್ನು ತಡೆಯುವ ನಡೆ ಖಂಡನೀಯ. ಇದಕ್ಕೆ ತಕ್ಕ ಉತ್ತರ ಕೊಡಲಾಗುವುದು’ ಎಂದು ಎಚ್ಚರಿಸಿದರು.</p>.<p>ಮುಖಂಡರಾದ ರೂಪೇಶ್, ಮಂಜು ಗುರಿಗಾರನಹಳ್ಳಿ, ಕುಮಾರ್, ಸಾಗರ್ ಗೌಡ, ಮಂಜುನಾಥ್, ಚಂದ್ರರಾಜ್, ರಾಜೇಶ್, ಮಂಜು ಬೋವಿ, ಸ್ವಾಮಿ, ರಾಜೇಶ್, ನವೀನ್, ಸಣ್ಣಿ ಮುಂತಾದವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>