ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ ತನಿಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡಬಾರದು: ಡಿಕೆಶಿ

Last Updated 8 ಮೇ 2022, 13:23 IST
ಅಕ್ಷರ ಗಾತ್ರ

ಅರಕಲಗೂಡು: ‘ಪಿಎಸ್‌ಐ ನೇಮಕಾತಿ ಅಕ್ರಮ ತನಿಖೆಯಲ್ಲಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹಸ್ತಕ್ಷೇಪ ಮಾಡಬಾರದು. ಸತ್ಯಾಂಶ ಮುಚ್ಚಿಡದೆ ಪ್ರಕರಣದಲ್ಲಿ ಭಾಗಿಯಾದವರ ಹೆಸರನ್ನು ಸಿಐಡಿ ಬಹಿರಂಗಪಡಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್ ಆಗ್ರಹಿಸಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಹೈಕೋರ್ಟ್ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಯಾಗಬೇಕು’ ಎಂದು ಒತ್ತಾಯಿಸಿದರು.

ಸಚಿವ ಡಾ.ಅಶ್ವತ್ಥನಾರಾಯಣ ಸಂಬಂಧಿ ಭಾಗಿಯಾಗಿರುವ ಕುರಿತು ಪ್ರಸ್ತಾಪಿಸಿ, ‘ಯಾರಾದರೂಲಂಚ ಪಡೆದವನು ಪಡೆದಿದ್ದಾನೆ ಅಂತ ಹೇಳುತ್ತಾನೆಯೇ? ಲಂಚ ಕೊಟ್ಟವನು ಲಂಚ ಕೊಟ್ಟಿದ್ದೀನಿ ಅಂತ ಹೇಳುತ್ತಾನೆಯೇ? ಈಗೆಲ್ಲಾ ಆಚೆ ಬಂದಿಲ್ವಾ? ಜೈಲಿಗೆ ಹಾಕಿರುವಹುಡುಗರನ್ನು ಕೇಳಿ’ ಎಂದು ಗುಡುಗಿದರು.

ಅಕ್ರಮದ ಮೂಲ ಹುಡುಕಿ ಹೋದರೆ ಸರ್ಕಾರವೇಉಳಿಯುವುದಿಲ್ಲ ಎಂಬ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ, ‘ಕುಮಾರಸ್ವಾಮಿ ಹೇಳಿರುವುದರಲ್ಲಿ ಸತ್ಯಕಾಣುತ್ತಿದೆ. ಅಕ್ರಮದಲ್ಲಿ ಕಿಂಗ್‌ಪಿನ್‌ ಇರೋದು ಸತ್ಯ. ಆ‌ ಕಿಂಗ್‌ಪಿನ್‌ಕೆಲವರನ್ನು ಬಿಡಿಸುತ್ತಿದ್ದಾರೆ. ಅಧಿಕಾರಿಗಳು ಮತ್ತು ಪೊಲೀಸ್ಕಾನ್‌ಸ್ಟೆಬಲ್‌ಗಳನ್ನು ಮಾತ್ರ ಬಂಧಿಸುತ್ತಿದ್ದಾರೆ. ಮಂತ್ರಿಗಳ ರಕ್ಷಣೆ ಇಲ್ಲದೆ ಈ ಹಗರಣ ಆಗಲು ಸಾಧ್ಯವಿಲ್ಲ.ಗೃಹ ಸಚಿವ, ಡಾ.ಅಶ್ವತ್ಥನಾರಾಯಣ ಫೋನ್ ಮಾಡಿ ಕೆಲವರನ್ನು ಬಿಡಿಸಿದ್ದಾರೆ’ ಎಂದು ಆರೋಪಿಸಿದರು.

ತಿಹಾರ್‌ ಜೈಲಿಗೆಡಿ.ಕೆ.ಶಿವಕುಮಾರ್ ಪುಸ್ತಕ ಓದಲು ಹೋಗಿದ್ರಾ ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ತಿರುಗೇಟು ನೀಡಿ, ‘ಯಡಿಯೂರಪ್ಪ, ಅಮಿತ್ ಶಾ ಹಾಗೂ ಅವರ ಪಕ್ಷ ಶಾಸಕರು, ಮಾಜಿಸಚಿವರು ಜೈಲಿಗೆ ಏಕೆ ಹೋಗಿದ್ದರು? ಯಾವ ವಚನ ಓದಲು ಹೋಗಿದ್ದರು? ಅವರರೀತಿ ನಾನು ಯಾವುದೇ ಆರೋಪಗಳನ್ನು ಹೊತ್ತು ಹೋಗಿಲ್ಲ. ರಾಜಕೀಯ ಷಡ್ಯಂತ್ರ ರೂಪಿಸಿ ಕಳುಹಿಸಿದ್ದರು’ ಎಂದು ಕಿಡಿಕಾರಿದರು.

‘ಸರ್ಕಾರಿ ಹುದ್ದೆಗೆ ಎಷ್ಟು ಹಣ ನಡೆಯುತ್ತಿದೆ ಎಂಬುದರ ಕುರಿತು ‘ಕಾಸಿದರಷ್ಟೇಸರ್ಕಾರಿ ಹುದ್ದೆ’ ಎಂಬ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿರುವ ವರದಿ ಓದಿದರೆ ಗೊತ್ತಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT