ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಅವರು, ‘2020-21 ನೇ ಸಾಲಿನಲ್ಲಿ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆಯೊಂದಿಗೆ ರಾಜ್ಯದಲ್ಲಿ 3 ಲಕ್ಷ ಟನ್ ರಾಗಿ ಖರೀದಿಸಲು ಅನುಮತಿ ನೀಡಿದೆ. ಅದರಂತೆ ಜಿಲ್ಲೆಯಲ್ಲಿ ಹಾಸನ, ಬೇಲೂರ, ಹೊಳೆನರಸೀಪುರ, ಬಾಣಾವರ, ಗಂಡಸಿ, ಜೆ.ಸಿ.ಪುರ, ಜಾವಗಲ್ ಹಾಗೂ ಚನ್ನರಾಯಪಟ್ಟಣದಲ್ಲಿ ಖರೀದಿ ಕೇಂದ್ರ ತೆರೆಯಬೇಕು’ ಎಂದು ಸೂಚನೆ ನೀಡಿದರು.
ಉತ್ಪಾದನೆಗೆ ಅನುಗುಣವಾಗಿ ಪ್ರತಿ ರೈತರಿಂದ ಎಕರೆಗೆ 10 ಕ್ವಿಂಟಲ್ನಂತೆ ಗರಿಷ್ಠ 50 ಕ್ವಿಂಟಲ್ ರಾಗಿಯನ್ನು ಮಾತ್ರ ಖರೀದಿಸಬೇಕು. ಜ. 31ರವರೆಗೆ ರೈತರ ನೋಂದಣಿಗೆ ಅವಕಾಶವಿದ್ದು, ಡಿ. 15ರಿಂದ ಮಾರ್ಚ್ 15ರವರೆಗೆ ಖರೀದಿ ನಡೆಯಲಿದೆ ಎಂದರು.