ಹೇಮಾವತಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ಹೇಮಾವತಿ ಜಲಾಶಯ ಅವಧಿಗೆ ಮುನ್ನ ಭರ್ತಿಯಾಗಿರುವುದು ಸಂತಸ. 6.50 ಲಕ್ಷ ಎಕರೆ ಲಕ್ಷ ಅಚ್ಚುಕಟ್ಟು ಪ್ರದೇಶ ಹೊಂದಿದೆ. ಸಕಲೇಶಪುರ ತಾಲ್ಲೂಕಿನಲ್ಲಿ ವಾಡಿಕೆಗಿಂತ 4 ಪಟ್ಟು ಹೆಚ್ಚು ಮಳೆಯಾಗಿದೆ. ಇದರಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ರಸ್ತೆಗಳು ಹಾನಿಯಾಗಿವೆ. ಹಾಗಾಗಿ ರಾಷ್ಟ್ರೀಯ ನೀತಿ ಎಂದು ಪರಿಗಣಿಸಿ, ತಾಲ್ಲೂಕುವಾರು ಬೆಳೆ ಪರಿಹಾರ ಹಾಗೂ ರಸ್ತೆ ಅಭಿವೃದ್ಧಿಗಾಗಿ ತಲಾ ₹100 ಕೋಟಿ ಮೀಸಲಿಡಬೇಕು ಎಂದು ಆಗ್ರಹಿಸಿದರು.