<p><strong>ಬೇಲೂರು</strong>: ತಾಲ್ಲೂಕಿನ 8 ಸ್ಥಳಗಳಲ್ಲಿ ಹಿಂದೂ ಸಮಾಜೋತ್ಸವವನ್ನು ಪಕ್ಷಾತೀತವಾಗಿ ಆಯೋಜಿಸಲಾಗಿದೆ ಎಂದು, ಹಿಂದೂ ಸಮಾಜೋತ್ಸವವ ಆಚರಣಾ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಬೆಣ್ಣೂರು ರೇಣುಕುಮಾರ್ ತಿಳಿಸಿದರು.</p>.<p>‘ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಆಚರಣೆ ಅಂಗವಾಗಿ ಸಾಮಾಜಿಕ ಪರಿವರ್ತನೆ, ಧಾರ್ಮಿಕ ಪ್ರಜ್ಞೆ ಬಲಗೊಳಿಸಲು ಹಿಂದೂ ಸಮಾಜೋತ್ಸವವನ್ನು ಆಯೋಜಿಸಲಾಗುತ್ತಿದೆ. ಈ ಉತ್ಸವದಂದು ವಿವಿಧ ಕಲಾತಂಡಗಳೊಂದಿಗೆ ಶೋಭಾಯಾತ್ರೆ ನಡೆಸಲಾಗುವುದು’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಜ. 19ರಂದು ಅರೇಹಳ್ಳಿ, 24ರಂದು ಗೆಂಡೇಹಳ್ಳಿ, 27ರಂದು ಬೇಲೂರು, ಫೆ. 1ರಂದು ನಾಗೇನಹಳ್ಳಿಯಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದ್ದು, ಬಿಕ್ಕೋಡು, ನಾರ್ವೆ, ಹಳೇಬೀಡು, ಹಗರೆಗೆ ದಿನಾಂಕ ನಿಗದಿಪಡಿಸಬೇಕಿದೆ’ ಎಂದರು.</p>.<p>‘ಹಿಂದೂ ಸಮಾಜ ವಿಭಜನೆಯಾಗಿ ಏಕತೆ ಕುಂಠಿತವಾಗುತ್ತಿದ್ದು, ಇದನ್ನು ಮನಗಂಡು ಸಮಾಜವನ್ನು ಮತ್ತೆ ಒಂದುಗೂಡಿಸುವ ಕೆಲಸ ಮಾಡಲಾಗುತ್ತಿದೆ. ಎಲ್ಲಾ ಜಾತಿಯವರನ್ನು ಒಂದೇ ವೇದಿಕೆಗೆ ತರುವುದು ಮತ್ತು ಜಾತಿಯತೆಯನ್ನು ಹೋಗಲಾಡಿಸುವುದು ಇದರ ಉದ್ದೇಶವಾಗಿದೆ’ ಎಂದರು.</p>.<p>ಹಿಂದೂ ಸಮಾಜೋತ್ಸವವ ಆಚರಣಾ ಸಮಿತಿ ತಾಲ್ಲೂಕು ಘಟಕದ ಉಪಾಧ್ಯಕ್ಷರಾದ ಜಿ.ಕೆ.ಕುಮಾರ್, ಮೋಹನ್, ರಮೇಶ್, ರೇಖಾ ಬಸವರಾಜು ಹಾಗೂ ನಗರಾಧ್ಯಕ್ಷ ಭರತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ತಾಲ್ಲೂಕಿನ 8 ಸ್ಥಳಗಳಲ್ಲಿ ಹಿಂದೂ ಸಮಾಜೋತ್ಸವವನ್ನು ಪಕ್ಷಾತೀತವಾಗಿ ಆಯೋಜಿಸಲಾಗಿದೆ ಎಂದು, ಹಿಂದೂ ಸಮಾಜೋತ್ಸವವ ಆಚರಣಾ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಬೆಣ್ಣೂರು ರೇಣುಕುಮಾರ್ ತಿಳಿಸಿದರು.</p>.<p>‘ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಆಚರಣೆ ಅಂಗವಾಗಿ ಸಾಮಾಜಿಕ ಪರಿವರ್ತನೆ, ಧಾರ್ಮಿಕ ಪ್ರಜ್ಞೆ ಬಲಗೊಳಿಸಲು ಹಿಂದೂ ಸಮಾಜೋತ್ಸವವನ್ನು ಆಯೋಜಿಸಲಾಗುತ್ತಿದೆ. ಈ ಉತ್ಸವದಂದು ವಿವಿಧ ಕಲಾತಂಡಗಳೊಂದಿಗೆ ಶೋಭಾಯಾತ್ರೆ ನಡೆಸಲಾಗುವುದು’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಜ. 19ರಂದು ಅರೇಹಳ್ಳಿ, 24ರಂದು ಗೆಂಡೇಹಳ್ಳಿ, 27ರಂದು ಬೇಲೂರು, ಫೆ. 1ರಂದು ನಾಗೇನಹಳ್ಳಿಯಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದ್ದು, ಬಿಕ್ಕೋಡು, ನಾರ್ವೆ, ಹಳೇಬೀಡು, ಹಗರೆಗೆ ದಿನಾಂಕ ನಿಗದಿಪಡಿಸಬೇಕಿದೆ’ ಎಂದರು.</p>.<p>‘ಹಿಂದೂ ಸಮಾಜ ವಿಭಜನೆಯಾಗಿ ಏಕತೆ ಕುಂಠಿತವಾಗುತ್ತಿದ್ದು, ಇದನ್ನು ಮನಗಂಡು ಸಮಾಜವನ್ನು ಮತ್ತೆ ಒಂದುಗೂಡಿಸುವ ಕೆಲಸ ಮಾಡಲಾಗುತ್ತಿದೆ. ಎಲ್ಲಾ ಜಾತಿಯವರನ್ನು ಒಂದೇ ವೇದಿಕೆಗೆ ತರುವುದು ಮತ್ತು ಜಾತಿಯತೆಯನ್ನು ಹೋಗಲಾಡಿಸುವುದು ಇದರ ಉದ್ದೇಶವಾಗಿದೆ’ ಎಂದರು.</p>.<p>ಹಿಂದೂ ಸಮಾಜೋತ್ಸವವ ಆಚರಣಾ ಸಮಿತಿ ತಾಲ್ಲೂಕು ಘಟಕದ ಉಪಾಧ್ಯಕ್ಷರಾದ ಜಿ.ಕೆ.ಕುಮಾರ್, ಮೋಹನ್, ರಮೇಶ್, ರೇಖಾ ಬಸವರಾಜು ಹಾಗೂ ನಗರಾಧ್ಯಕ್ಷ ಭರತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>