<p><strong>ಬೇಲೂರು</strong>: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಜವಾಬ್ದಾರಿಯುತ ನಡೆ ಅತ್ಯಂತ ಮುಖ್ಯ ಎಂದು ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಬಿಜಿಎಸ್ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ, ಗುರುವಂದನೆ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ತಂದೆ, ತಾಯಿ ಜನ್ಮ ನೀಡುತ್ತಾರೆ. ಆದರೆ ಗುರು ಜೀವನದ ದಾರಿಯನ್ನು ತೋರಿಸುತ್ತಾರೆ. ಇಂದಿನ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ಅಗತ್ಯವಿದೆ. ಪೋಷಕರು ಮಕ್ಕಳಿಗಾಗಿ ಅಪಾರ ತ್ಯಾಗ ಮಾಡುತ್ತಿರುವುದನ್ನು ಸ್ಮರಿಸಿ, ಅವರ ಕನಸುಗಳನ್ನು ನನಸಾಗಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ’ ಎಂದರು.</p>.<p>ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಡಳಿತಾಧಿಕಾರಿ ಎ.ಬಿ.ಶಿವರಾಮು ಮಾತನಾಡಿ, ‘ನಮ್ಮ ಸಂಸ್ಥೆಯಲ್ಲಿ ಪ್ರೀ-ಕೆಜಿ ಹಂತದಿಂದ ಪಿಎಚ್ಡಿ ಮಟ್ಟದವರೆಗೆ ಶಿಕ್ಷಣದ ಅವಕಾಶ ಒದಗಿಸಲಾಗುತ್ತಿದೆ. 120 ಪಿಯು ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, 28,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ’ ಎಂದರು.</p>.<p>ಪ್ರಾಂಶುಪಾಲ ದಿವ್ಯ ಕುಮಾರ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಜವಾಬ್ದಾರಿಯುತ ನಡೆ ಅತ್ಯಂತ ಮುಖ್ಯ ಎಂದು ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಬಿಜಿಎಸ್ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ, ಗುರುವಂದನೆ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ತಂದೆ, ತಾಯಿ ಜನ್ಮ ನೀಡುತ್ತಾರೆ. ಆದರೆ ಗುರು ಜೀವನದ ದಾರಿಯನ್ನು ತೋರಿಸುತ್ತಾರೆ. ಇಂದಿನ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ಅಗತ್ಯವಿದೆ. ಪೋಷಕರು ಮಕ್ಕಳಿಗಾಗಿ ಅಪಾರ ತ್ಯಾಗ ಮಾಡುತ್ತಿರುವುದನ್ನು ಸ್ಮರಿಸಿ, ಅವರ ಕನಸುಗಳನ್ನು ನನಸಾಗಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ’ ಎಂದರು.</p>.<p>ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಡಳಿತಾಧಿಕಾರಿ ಎ.ಬಿ.ಶಿವರಾಮು ಮಾತನಾಡಿ, ‘ನಮ್ಮ ಸಂಸ್ಥೆಯಲ್ಲಿ ಪ್ರೀ-ಕೆಜಿ ಹಂತದಿಂದ ಪಿಎಚ್ಡಿ ಮಟ್ಟದವರೆಗೆ ಶಿಕ್ಷಣದ ಅವಕಾಶ ಒದಗಿಸಲಾಗುತ್ತಿದೆ. 120 ಪಿಯು ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, 28,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ’ ಎಂದರು.</p>.<p>ಪ್ರಾಂಶುಪಾಲ ದಿವ್ಯ ಕುಮಾರ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>