<p><strong>ಬೇಲೂರು:</strong> ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಹೆಚ್ಚಾಗಬೇಕಿದೆ ಎಂದು ಯಸಳೂರು ಬೃಹನ್ಮಠದ ಚನ್ನಸಿದ್ದೇಶ್ವರ ಸ್ವಾಮೀಜಿ ಹೇಳಿದರು.</p>.<p>ಪುಷ್ಪಗಿರಿ ಮಠದ ಕಾರ್ಯದರ್ಶಿ ಗ್ರಾನೈಟ್ ರಾಜಶೇಖರ್ ಅಭಿಮಾನಿಗಳ ಬಳಗದಿಂದ ಸೋಮವಾರ ಇಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಯುವಕರು ಹಾಗೂ ಆರೋಗ್ಯವಂತರು ವರ್ಷಕ್ಕೊಮ್ಮೆ ರಕ್ತದಾನ ಮಾಡಿದರೂ ಆರೋಗ್ಯ ವೃದ್ಧಿಯಾಗುವ ಜೊತೆಗೆ, ಬೇರೆ ಜೀವ ಉಳಿಸಲು ಸಹಕಾರಿಯಾಗುತ್ತದೆ. ರಾಜಶೇಖರ್ ಅಭಿಮಾನಿಗಳು ರಕ್ತದಾನ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದರು.</p>.<p>ಗ್ರಾನೈಟ್ ರಾಜಶೇಖರ್ ಮಾತನಾಡಿ, ಮನುಷ್ಯ ಹುಟ್ಟು-ಸಾವಿನ ಮಧ್ಯೆ ಸಮಾಜಕ್ಕೆ ಯಾವುದಾದರೂ ಒಂದು ರೂಪದಲ್ಲಿ ಸೇವೆ ಸಲ್ಲಿಸಬೇಕು ಎಂದರು.</p>.<p>ಚಿಕ್ಕಮಗಳೂರಿನ ಬಸವತತ್ವಪೀಠದ ಬಸವಮರುಳಸಿದ್ದೇಶ್ವರ ಸ್ವಾಮೀಜಿ, ಪುರಸಭೆ ಅಧ್ಯಕ್ಷ ಅಕ್ರಂ ಷರೀಪ್ ಮಾತನಾಡಿದರು.</p>.<p>ರೆಡ್ ಕ್ರಾಸ್ ಘಟಕದ ತಾಲ್ಲೂಕು ಸಭಾಪತಿ ವೈ.ಎಸ್.ಸಿದ್ದೇಗೌಡ, ವೀರಶೈವ–ಲಿಂಗಾಯತ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ವೀಪುಸಂತೋಷ್, ಪ್ರಮುಖರಾದ ಗೆಂಡೇಹಳ್ಳಿ ಚೇತನ್, ಶೋಭಾಗಣೇಶ್, ಜಗದೀಶ್, ಭರತ್, ಸುರೇಶ್, ಗೋವಿನಹಳ್ಳಿ ರವಿ, ಮಸಾಲೆ ಮಂಜು, ಉಪನ್ಯಾಸಕ ಲಕ್ಷ್ಮಿನಾರಾಯಣ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-36-678962325</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು:</strong> ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಹೆಚ್ಚಾಗಬೇಕಿದೆ ಎಂದು ಯಸಳೂರು ಬೃಹನ್ಮಠದ ಚನ್ನಸಿದ್ದೇಶ್ವರ ಸ್ವಾಮೀಜಿ ಹೇಳಿದರು.</p>.<p>ಪುಷ್ಪಗಿರಿ ಮಠದ ಕಾರ್ಯದರ್ಶಿ ಗ್ರಾನೈಟ್ ರಾಜಶೇಖರ್ ಅಭಿಮಾನಿಗಳ ಬಳಗದಿಂದ ಸೋಮವಾರ ಇಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಯುವಕರು ಹಾಗೂ ಆರೋಗ್ಯವಂತರು ವರ್ಷಕ್ಕೊಮ್ಮೆ ರಕ್ತದಾನ ಮಾಡಿದರೂ ಆರೋಗ್ಯ ವೃದ್ಧಿಯಾಗುವ ಜೊತೆಗೆ, ಬೇರೆ ಜೀವ ಉಳಿಸಲು ಸಹಕಾರಿಯಾಗುತ್ತದೆ. ರಾಜಶೇಖರ್ ಅಭಿಮಾನಿಗಳು ರಕ್ತದಾನ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದರು.</p>.<p>ಗ್ರಾನೈಟ್ ರಾಜಶೇಖರ್ ಮಾತನಾಡಿ, ಮನುಷ್ಯ ಹುಟ್ಟು-ಸಾವಿನ ಮಧ್ಯೆ ಸಮಾಜಕ್ಕೆ ಯಾವುದಾದರೂ ಒಂದು ರೂಪದಲ್ಲಿ ಸೇವೆ ಸಲ್ಲಿಸಬೇಕು ಎಂದರು.</p>.<p>ಚಿಕ್ಕಮಗಳೂರಿನ ಬಸವತತ್ವಪೀಠದ ಬಸವಮರುಳಸಿದ್ದೇಶ್ವರ ಸ್ವಾಮೀಜಿ, ಪುರಸಭೆ ಅಧ್ಯಕ್ಷ ಅಕ್ರಂ ಷರೀಪ್ ಮಾತನಾಡಿದರು.</p>.<p>ರೆಡ್ ಕ್ರಾಸ್ ಘಟಕದ ತಾಲ್ಲೂಕು ಸಭಾಪತಿ ವೈ.ಎಸ್.ಸಿದ್ದೇಗೌಡ, ವೀರಶೈವ–ಲಿಂಗಾಯತ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ವೀಪುಸಂತೋಷ್, ಪ್ರಮುಖರಾದ ಗೆಂಡೇಹಳ್ಳಿ ಚೇತನ್, ಶೋಭಾಗಣೇಶ್, ಜಗದೀಶ್, ಭರತ್, ಸುರೇಶ್, ಗೋವಿನಹಳ್ಳಿ ರವಿ, ಮಸಾಲೆ ಮಂಜು, ಉಪನ್ಯಾಸಕ ಲಕ್ಷ್ಮಿನಾರಾಯಣ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-36-678962325</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>