<p><strong>ಬೇಲೂರು:</strong> ಪಡುವಳಲು ದೊಡ್ಡಕೆರೆ ಏರಿ ಎತ್ತರ ಮಾಡಿ ಕೆರೆ ಮುಂದಿನ ಕಾಲುವೆಯನ್ನು ₹30ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು.</p>.<p>ತಾಲ್ಲೂಕಿನ ಬಿಕ್ಕೋಡು ಹೋಬಳಿಯ ಪಡುವಳಲು ಗ್ರಾಮದಲ್ಲಿ ಸೋಮವಾರ ಕೆರೆ ಏರಿ ಕಾಲುವೆ ದುರಸ್ತಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಕಳೆದ ಒಂದೂವರೆ ವರ್ಷದ ಹಿಂದೆ ಈ ಗ್ರಾಮಕ್ಕೆ ಬಂದಾಗ ಮಳೆ ಹೆಚ್ಚಾಗಿ ಕೆರೆ ತುಂಬಿ ಏರಿ ಮೇಲೆ ನೀರು ಹರಿದು ಬಿರುಕು ಬಿಡುವಂತಾಗಿತ್ತು, ನಾಲೆಯಲ್ಲಿ ನೀರು ತುಂಬಿ ಜಲಾವೃತಗೊಂಡಿತ್ತು, ಅದನ್ನು ವೀಕ್ಷಣೆ ಮಾಡಿ ಆದಷ್ಟು ಬೇಗ ಶಾಶ್ವತ ಪರಿಹಾರ ದೊರಕಿಸಿಕೊಡುವುದಾಗಿ ಮಾತು ನೀಡಿದ್ದೆ, ಅದರಂತೆ ಇಂದು ಈ ಕೆರೆ ಏರಿ ಅಬಿವೃದ್ಧಿ ಹಾಗೂ 120ಮೀಟರ್ ನಾಲೆ ಕಾಂಕ್ರೀಟ್ ಕಾಮಗಾರಿಗೆ ಭೂಮಿ ಪೂಜೆ ಮಾಡಿದ್ದೆನೆ’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಸದಸ್ಯ ಉದಯ್ ಕುಮಾರ್, ಹರೀಶ್, ಗುತ್ತಿಗೆದಾರ ಗೋಪಾಲ್, ವಾಟೆಹೊಳೆ ಜಲಾಶಯದ ಸಹಾಯಕ ಎಂಜಿನಿಯರ್ ಸಂದೀಪ್, ಗ್ರಾಮಸ್ಥರಾದ ಮಲ್ಲೇಶ್, ಕಿರಣ್, ಚಂದನ್, ಭಾರತಿ, ಚಂದ್ರು, ತೀರ್ಥ, ಭೊಜೇಶ್, ಬಸವರಾಜು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು:</strong> ಪಡುವಳಲು ದೊಡ್ಡಕೆರೆ ಏರಿ ಎತ್ತರ ಮಾಡಿ ಕೆರೆ ಮುಂದಿನ ಕಾಲುವೆಯನ್ನು ₹30ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು.</p>.<p>ತಾಲ್ಲೂಕಿನ ಬಿಕ್ಕೋಡು ಹೋಬಳಿಯ ಪಡುವಳಲು ಗ್ರಾಮದಲ್ಲಿ ಸೋಮವಾರ ಕೆರೆ ಏರಿ ಕಾಲುವೆ ದುರಸ್ತಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಕಳೆದ ಒಂದೂವರೆ ವರ್ಷದ ಹಿಂದೆ ಈ ಗ್ರಾಮಕ್ಕೆ ಬಂದಾಗ ಮಳೆ ಹೆಚ್ಚಾಗಿ ಕೆರೆ ತುಂಬಿ ಏರಿ ಮೇಲೆ ನೀರು ಹರಿದು ಬಿರುಕು ಬಿಡುವಂತಾಗಿತ್ತು, ನಾಲೆಯಲ್ಲಿ ನೀರು ತುಂಬಿ ಜಲಾವೃತಗೊಂಡಿತ್ತು, ಅದನ್ನು ವೀಕ್ಷಣೆ ಮಾಡಿ ಆದಷ್ಟು ಬೇಗ ಶಾಶ್ವತ ಪರಿಹಾರ ದೊರಕಿಸಿಕೊಡುವುದಾಗಿ ಮಾತು ನೀಡಿದ್ದೆ, ಅದರಂತೆ ಇಂದು ಈ ಕೆರೆ ಏರಿ ಅಬಿವೃದ್ಧಿ ಹಾಗೂ 120ಮೀಟರ್ ನಾಲೆ ಕಾಂಕ್ರೀಟ್ ಕಾಮಗಾರಿಗೆ ಭೂಮಿ ಪೂಜೆ ಮಾಡಿದ್ದೆನೆ’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಸದಸ್ಯ ಉದಯ್ ಕುಮಾರ್, ಹರೀಶ್, ಗುತ್ತಿಗೆದಾರ ಗೋಪಾಲ್, ವಾಟೆಹೊಳೆ ಜಲಾಶಯದ ಸಹಾಯಕ ಎಂಜಿನಿಯರ್ ಸಂದೀಪ್, ಗ್ರಾಮಸ್ಥರಾದ ಮಲ್ಲೇಶ್, ಕಿರಣ್, ಚಂದನ್, ಭಾರತಿ, ಚಂದ್ರು, ತೀರ್ಥ, ಭೊಜೇಶ್, ಬಸವರಾಜು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>