<p><strong>ಬೇಲೂರು:</strong> ಇತಿಹಾಸ ಪ್ರಸಿದ್ಧ ಇಲ್ಲಿನ ಚನ್ನಕೇಶವ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಭರದಿಂದ ನಡೆದಿವೆ. ಮಂಗಳವಾರ ದಿವ್ಯ ಬ್ರಹ್ಮರಥೋತ್ಸವ ಹಾಗೂ ಬುಧವಾರ ನಾಡಿನ ದಿವ್ಯರಥೋತ್ಸವ ಜರುಗಲಿವೆ.</p>.<p>ಶಾಸಕ ಎಚ್.ಕೆ.ಸುರೇಶ್, ಉಪ ವಿಭಾಗಾಧಿಕಾರಿ ಮಂಜುನಾಥ್, ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ನೇತೃತ್ವದಲ್ಲಿ, ದೇಗುಲದ ಅಧಿಕಾರಿಗಳು ಹಾಗೂ ಅರ್ಚಕರ ಸಹಭಾಗಿತ್ವದಲ್ಲಿ ಈ ಬಾರಿಯ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಮಂದಾಗಿದ್ದು, ಯಾವುದೇ ಸಮಸ್ಯೆ ಆಗದಂತೆ ನಿಗಾ ವಹಿಸಲಾಗಿದೆ.</p>.<p>ಪಟ್ಟಣದಲ್ಲೆಡೆ ಹಾಗೂ ಚನ್ನಕೇಶವ ದೇಗುಲಕ್ಕೆ ವಿದ್ಯುತ್ ಅಲಂಕಾರ ಮಾಡಲಾಗಿದೆ. ದೇಗುಲಕ್ಕೆ ಆಕರ್ಷಣಿಯವಾದ ಹೂವಿನ ಅಲಂಕಾರ ಮಾಡಲಾಗಿದೆ. ರಥವನ್ನು</p>.<p>ಕಲ್ಯಾಣಿಯನ್ನು ಸ್ಚಚ್ಛಗೊಳಿಸಿ ಶುದ್ಧ ಮಾಡಲಾಗಿದ್ದು, ಕಲ್ಯಾಣಿ ಬಳಿ ಸ್ನಾನಘಟ್ಟ ನಿರ್ಮಿಸಲಾಗಿದೆ. ಮಹಿಳೆಯರು ಉಡುಪು ಬದಲಾವಣೆ ಗೃಹಗಳನ್ನು ನಿರ್ಮಿಸಲಾಗಿದೆ. ವಿವಿಧ ಕಡೆಗಳಲ್ಲಿ ಮೊಬೈಲ್ ಶೌಚಾಲಯಗಳನ್ನು ಹಾಕಲಾಗಿದೆ. ಮೂಲಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ.</p>.<p>ಸೋಮವಾರದಿಂದ ಬುಧವಾರದವರೆಗೆ ದೇಗುಲದ ಹಿಂಭಾಗದ ಜಾಗದಲ್ಲಿ ಉಚಿತ ಪಾರ್ಕಿಂಗ್ ಮಾಡಲಾಗಿದೆ. ವಿಶೇಷ ದರ್ಶನಕ್ಕೆ ₹200 ಟಿಕೆಟ್ ನಿಗದಿಪಡಿಸಲಾಗಿದ್ದು, ಸಾಮಾನ್ಯ ದರ್ಶನ ಮತ್ತು ವಿಐಪಿ ದರ್ಶನಕ್ಕೆ ತೊಂದರೆ ಆಗದಂತೆ ಶಿಷ್ಟಾಚಾರ ಸಿಬ್ಬಂದಿ ನೇಮಿಸಲಾಗಿದೆ. ಕಲ್ಯಾಣಿಯಲ್ಲಿ ಸ್ನಾನ ಮಾಡಲು ಹೋಗುವವರು, ನೀರಿಗೆ ಜಿಗಿಯಬಾರದು ಎಂದು ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ಮನವಿ ಮಾಡಿದರು.</p>.<p>ಬಂದೋಬಸ್ತ್ಗಾಗಿ ಸುಮಾರು 350 ಪೊಲೀಸ ಸಿಬ್ಬಂದಿ ನಿಯೋಜಿಸಲಾಗುತ್ತಿದೆ. 48 ಕಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪಟ್ಟಣದ ವಿವಿಧ ಭಾಗಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.</p>.<p>ರಥ ಸಾಗುವ ನಾಲ್ಕು ಹಾಗೂ ಉತ್ಸವಗಳು ಸಾಗುವ ಎಂಟು ಬೀದಿಗಳಲ್ಲಿ ಸುಗಮ ಸಂಚಾರಕ್ಕಾಗಿ ವಾಹನಗಳ ಸಂಚಾರ, ಪಾರ್ಕಿಂಗ್ ಹಾಗೂ ಜಾತ್ರೆ ಸಮಯದಲ್ಲಿ ಹಾಕುವ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ರೇವಣ್ಣ ತಿಳಿಸಿದರು.</p>.<h2>ಖಾಜಿಗಳ ಮುಜುರೆ (ವಂದನೆ)</h2><p>ದೊಡ್ಡಮೆದೂರಿನ ಖಾಜಿಯವರುಬ್ರಹ್ಮ ರಥೋತ್ಸವದಂದು ದೇಗುಲದ ಆವರಣದಲ್ಲಿ ಚನ್ನಕೇಶವನಿಗೆ ಉರ್ದು ಭಾಷೆಯಲ್ಲಿ ವಂದನೆ ಸಲ್ಲಿಸುವ ವಾಡಿಕೆ ಇರುವ ಬಗ್ಗೆ ದೇಗುಲದ ಕೈಪಿಡಿಯಲ್ಲಿದೆ ಎನ್ನಲಾಗುತ್ತದೆ.</p><p>‘ಕಳೆದ ಬಾರಿಯಂತೆ ಈ ಬಾರಿಯೂ ದೇಗುಲದ ಆವರಣದಲ್ಲಿ ವಂದನೆ ಸಲ್ಲಿಸಲು ದೇಗುಲದ ಆಡಳಿತದಿಂದ ಆಹ್ವಾನ ಬಂದಿದ್ದು, ಮಂಗಳವಾರ ದೇವಸ್ಥಾನಕ್ಕೆ ಬಂದು ವಂದನೆ ಸಲ್ಲಿಸ ಲಾಗುತ್ತದೆ’ ಎಂದು ದೊಡ್ಡಮೆದೂರಿನ ಸೈಯ್ಯದ್ ಸಜ್ಜಾದ್ ಬಾಷಾ ಖಾದ್ರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು:</strong> ಇತಿಹಾಸ ಪ್ರಸಿದ್ಧ ಇಲ್ಲಿನ ಚನ್ನಕೇಶವ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಭರದಿಂದ ನಡೆದಿವೆ. ಮಂಗಳವಾರ ದಿವ್ಯ ಬ್ರಹ್ಮರಥೋತ್ಸವ ಹಾಗೂ ಬುಧವಾರ ನಾಡಿನ ದಿವ್ಯರಥೋತ್ಸವ ಜರುಗಲಿವೆ.</p>.<p>ಶಾಸಕ ಎಚ್.ಕೆ.ಸುರೇಶ್, ಉಪ ವಿಭಾಗಾಧಿಕಾರಿ ಮಂಜುನಾಥ್, ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ನೇತೃತ್ವದಲ್ಲಿ, ದೇಗುಲದ ಅಧಿಕಾರಿಗಳು ಹಾಗೂ ಅರ್ಚಕರ ಸಹಭಾಗಿತ್ವದಲ್ಲಿ ಈ ಬಾರಿಯ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಮಂದಾಗಿದ್ದು, ಯಾವುದೇ ಸಮಸ್ಯೆ ಆಗದಂತೆ ನಿಗಾ ವಹಿಸಲಾಗಿದೆ.</p>.<p>ಪಟ್ಟಣದಲ್ಲೆಡೆ ಹಾಗೂ ಚನ್ನಕೇಶವ ದೇಗುಲಕ್ಕೆ ವಿದ್ಯುತ್ ಅಲಂಕಾರ ಮಾಡಲಾಗಿದೆ. ದೇಗುಲಕ್ಕೆ ಆಕರ್ಷಣಿಯವಾದ ಹೂವಿನ ಅಲಂಕಾರ ಮಾಡಲಾಗಿದೆ. ರಥವನ್ನು</p>.<p>ಕಲ್ಯಾಣಿಯನ್ನು ಸ್ಚಚ್ಛಗೊಳಿಸಿ ಶುದ್ಧ ಮಾಡಲಾಗಿದ್ದು, ಕಲ್ಯಾಣಿ ಬಳಿ ಸ್ನಾನಘಟ್ಟ ನಿರ್ಮಿಸಲಾಗಿದೆ. ಮಹಿಳೆಯರು ಉಡುಪು ಬದಲಾವಣೆ ಗೃಹಗಳನ್ನು ನಿರ್ಮಿಸಲಾಗಿದೆ. ವಿವಿಧ ಕಡೆಗಳಲ್ಲಿ ಮೊಬೈಲ್ ಶೌಚಾಲಯಗಳನ್ನು ಹಾಕಲಾಗಿದೆ. ಮೂಲಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ.</p>.<p>ಸೋಮವಾರದಿಂದ ಬುಧವಾರದವರೆಗೆ ದೇಗುಲದ ಹಿಂಭಾಗದ ಜಾಗದಲ್ಲಿ ಉಚಿತ ಪಾರ್ಕಿಂಗ್ ಮಾಡಲಾಗಿದೆ. ವಿಶೇಷ ದರ್ಶನಕ್ಕೆ ₹200 ಟಿಕೆಟ್ ನಿಗದಿಪಡಿಸಲಾಗಿದ್ದು, ಸಾಮಾನ್ಯ ದರ್ಶನ ಮತ್ತು ವಿಐಪಿ ದರ್ಶನಕ್ಕೆ ತೊಂದರೆ ಆಗದಂತೆ ಶಿಷ್ಟಾಚಾರ ಸಿಬ್ಬಂದಿ ನೇಮಿಸಲಾಗಿದೆ. ಕಲ್ಯಾಣಿಯಲ್ಲಿ ಸ್ನಾನ ಮಾಡಲು ಹೋಗುವವರು, ನೀರಿಗೆ ಜಿಗಿಯಬಾರದು ಎಂದು ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ಮನವಿ ಮಾಡಿದರು.</p>.<p>ಬಂದೋಬಸ್ತ್ಗಾಗಿ ಸುಮಾರು 350 ಪೊಲೀಸ ಸಿಬ್ಬಂದಿ ನಿಯೋಜಿಸಲಾಗುತ್ತಿದೆ. 48 ಕಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪಟ್ಟಣದ ವಿವಿಧ ಭಾಗಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.</p>.<p>ರಥ ಸಾಗುವ ನಾಲ್ಕು ಹಾಗೂ ಉತ್ಸವಗಳು ಸಾಗುವ ಎಂಟು ಬೀದಿಗಳಲ್ಲಿ ಸುಗಮ ಸಂಚಾರಕ್ಕಾಗಿ ವಾಹನಗಳ ಸಂಚಾರ, ಪಾರ್ಕಿಂಗ್ ಹಾಗೂ ಜಾತ್ರೆ ಸಮಯದಲ್ಲಿ ಹಾಕುವ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ರೇವಣ್ಣ ತಿಳಿಸಿದರು.</p>.<h2>ಖಾಜಿಗಳ ಮುಜುರೆ (ವಂದನೆ)</h2><p>ದೊಡ್ಡಮೆದೂರಿನ ಖಾಜಿಯವರುಬ್ರಹ್ಮ ರಥೋತ್ಸವದಂದು ದೇಗುಲದ ಆವರಣದಲ್ಲಿ ಚನ್ನಕೇಶವನಿಗೆ ಉರ್ದು ಭಾಷೆಯಲ್ಲಿ ವಂದನೆ ಸಲ್ಲಿಸುವ ವಾಡಿಕೆ ಇರುವ ಬಗ್ಗೆ ದೇಗುಲದ ಕೈಪಿಡಿಯಲ್ಲಿದೆ ಎನ್ನಲಾಗುತ್ತದೆ.</p><p>‘ಕಳೆದ ಬಾರಿಯಂತೆ ಈ ಬಾರಿಯೂ ದೇಗುಲದ ಆವರಣದಲ್ಲಿ ವಂದನೆ ಸಲ್ಲಿಸಲು ದೇಗುಲದ ಆಡಳಿತದಿಂದ ಆಹ್ವಾನ ಬಂದಿದ್ದು, ಮಂಗಳವಾರ ದೇವಸ್ಥಾನಕ್ಕೆ ಬಂದು ವಂದನೆ ಸಲ್ಲಿಸ ಲಾಗುತ್ತದೆ’ ಎಂದು ದೊಡ್ಡಮೆದೂರಿನ ಸೈಯ್ಯದ್ ಸಜ್ಜಾದ್ ಬಾಷಾ ಖಾದ್ರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>