<p><strong>ಬೇಲೂರು</strong>: ವಿಧಾನಸಭೆ ಅಧಿವೇಶನದಲ್ಲಿ ಬಜೆಟ್ ಮೇಲೆ ಶಾಸಕ ಎಚ್.ಕೆ.ಸುರೇಶ್ ಶುಕ್ರವಾರ ಮಾತನಾಡಿ, ತಾಲ್ಲೂಕಿನ ಸಮಗ್ರ ಅಭಿವೃದ್ದಿಗಾಗಿ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದರು.</p><p> ಹೊಯ್ಸಳೋತ್ಸವವನ್ನು ಬೇಲೂರು- ಹಳೇಬೀಡಿನಲ್ಲಿ ಪ್ರತಿವರ್ಷ ಆಚರಿಸಬೇಕು. ತಾಲ್ಲೂಕಿನಲ್ಲಿ ಕಾಡಾನೆ ದಾಳಿಯಿಂದ ಇದುವರೆಗೆ 10ಜನ ಮೃತಪಟ್ಟಿದ್ದು, ಶಾಶ್ವತ ಪರಿಹಾರಕ್ಕಾಗಿ ಆನೆ ಕಾರಿಡಾರ್ ನಿರ್ಮಾಣ ಮಾಡಲು ₹1000 ಕೋಟಿ ಅನುದಾನ ಬಿಡುಗಡೆ ಮಾಡಬೇಕು . ಬೇಲೂರು ಘಟಕಕ್ಕೆ ಹೆಚ್ಚುವರಿ 30 ಬಸ್,ಹೆಚ್ಚಿನ ಸಿಬ್ಬಂದಿ ಒದಗಿಸುವಂತೆ ಮನವಿ ಮಾಡಿದರು.</p><p>ಬೇಲೂರಿನಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಬೇಕು. ಸಂಚಾರ ಪೋಲಿಸ್ ಠಾಣೆಯನ್ನು ಮಂಜೂರು ಮಾಡಬೇಕು. ಬಿಕ್ಕೋಡು ಗ್ರಾಮದಲ್ಲಿ 66/11 ಕೆ.ವಿ.ಎ, ಚನ್ನಾಪುರ (ಹನಿಕೆ) ಗ್ರಾಮದಲ್ಲಿ 66/11ಕೆ.ವಿ.ಎ, ಅಡಗೂರು ಗ್ರಾಮದಲ್ಲಿ 220/11 ಕೆ.ವಿ.ಎ, ಕೋಳಗುಂದ ಗ್ರಾಮದಲ್ಲಿ 110/11 ಕೆ.ವಿ.ಎ ವಿದ್ಯುತ್ ವಿತರಣಾ ಉಪಕೇಂದ್ರಗಳನ್ನು ಪ್ರಾರಂಭಿಸಬೇಕು. ಪ್ರಗತಿಪಥ ರಸ್ತೆ ಅಭಿವೃದ್ದಿ ಯೋಜನೆಯಲ್ಲಿ ಬೇಲೂರು ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂದು ಒತ್ತಾಯಿಸಿದರು.</p>.<p>ಜಾವಗಲ್, ಅರೇಹಳ್ಳಿ, ಹಗರೆ ಗ್ರಾಮಗಳಲ್ಲಿ ಕೆ.ಪಿ.ಎಸ್ ಶಾಲೆಗಳನ್ನು ಕೂಡಲೇ ಪ್ರಾರಂಭಿಸಬೇಕು. ಜಾವಗಲ್, ಬಿಕ್ಕೋಡು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೇಗೇರಿಸಬೇಕು. ಬೇಲೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸುಸಜ್ಜಿತವಾದ ಹೊಸ ಕಟ್ಟಡ ನಿರ್ಮಾಣ ಮಾಡಬೇಕು.</p>.<p>ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಕನಿಷ್ಠ ₹10,000 ವೇತನ ಹೆಚ್ಚಿಸಬೇಕು. ಅಡುಗೆ ಮಾಡುವವರಿಗೆ 5,000ರೂ ವೇತನ ಹೆಚ್ಚಿಸಬೇಕು. ಕ್ಷೇತ್ರದಲ್ಲಿ ನೂರಾರು ಅಂಗನವಾಡಿಗಳ ದುರಸ್ತಿ, ಕಾರ್ಯಕರ್ತೆಯರಿಗೆ ಕನಿಷ್ಡ ₹5,000ಕ್ಕೆ ಗೌರವಧನ ಹೆಚ್ಚಿಸಬೇಕು ಎಂದು ಕೇಳಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ವಿಧಾನಸಭೆ ಅಧಿವೇಶನದಲ್ಲಿ ಬಜೆಟ್ ಮೇಲೆ ಶಾಸಕ ಎಚ್.ಕೆ.ಸುರೇಶ್ ಶುಕ್ರವಾರ ಮಾತನಾಡಿ, ತಾಲ್ಲೂಕಿನ ಸಮಗ್ರ ಅಭಿವೃದ್ದಿಗಾಗಿ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದರು.</p><p> ಹೊಯ್ಸಳೋತ್ಸವವನ್ನು ಬೇಲೂರು- ಹಳೇಬೀಡಿನಲ್ಲಿ ಪ್ರತಿವರ್ಷ ಆಚರಿಸಬೇಕು. ತಾಲ್ಲೂಕಿನಲ್ಲಿ ಕಾಡಾನೆ ದಾಳಿಯಿಂದ ಇದುವರೆಗೆ 10ಜನ ಮೃತಪಟ್ಟಿದ್ದು, ಶಾಶ್ವತ ಪರಿಹಾರಕ್ಕಾಗಿ ಆನೆ ಕಾರಿಡಾರ್ ನಿರ್ಮಾಣ ಮಾಡಲು ₹1000 ಕೋಟಿ ಅನುದಾನ ಬಿಡುಗಡೆ ಮಾಡಬೇಕು . ಬೇಲೂರು ಘಟಕಕ್ಕೆ ಹೆಚ್ಚುವರಿ 30 ಬಸ್,ಹೆಚ್ಚಿನ ಸಿಬ್ಬಂದಿ ಒದಗಿಸುವಂತೆ ಮನವಿ ಮಾಡಿದರು.</p><p>ಬೇಲೂರಿನಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಬೇಕು. ಸಂಚಾರ ಪೋಲಿಸ್ ಠಾಣೆಯನ್ನು ಮಂಜೂರು ಮಾಡಬೇಕು. ಬಿಕ್ಕೋಡು ಗ್ರಾಮದಲ್ಲಿ 66/11 ಕೆ.ವಿ.ಎ, ಚನ್ನಾಪುರ (ಹನಿಕೆ) ಗ್ರಾಮದಲ್ಲಿ 66/11ಕೆ.ವಿ.ಎ, ಅಡಗೂರು ಗ್ರಾಮದಲ್ಲಿ 220/11 ಕೆ.ವಿ.ಎ, ಕೋಳಗುಂದ ಗ್ರಾಮದಲ್ಲಿ 110/11 ಕೆ.ವಿ.ಎ ವಿದ್ಯುತ್ ವಿತರಣಾ ಉಪಕೇಂದ್ರಗಳನ್ನು ಪ್ರಾರಂಭಿಸಬೇಕು. ಪ್ರಗತಿಪಥ ರಸ್ತೆ ಅಭಿವೃದ್ದಿ ಯೋಜನೆಯಲ್ಲಿ ಬೇಲೂರು ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂದು ಒತ್ತಾಯಿಸಿದರು.</p>.<p>ಜಾವಗಲ್, ಅರೇಹಳ್ಳಿ, ಹಗರೆ ಗ್ರಾಮಗಳಲ್ಲಿ ಕೆ.ಪಿ.ಎಸ್ ಶಾಲೆಗಳನ್ನು ಕೂಡಲೇ ಪ್ರಾರಂಭಿಸಬೇಕು. ಜಾವಗಲ್, ಬಿಕ್ಕೋಡು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೇಗೇರಿಸಬೇಕು. ಬೇಲೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸುಸಜ್ಜಿತವಾದ ಹೊಸ ಕಟ್ಟಡ ನಿರ್ಮಾಣ ಮಾಡಬೇಕು.</p>.<p>ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಕನಿಷ್ಠ ₹10,000 ವೇತನ ಹೆಚ್ಚಿಸಬೇಕು. ಅಡುಗೆ ಮಾಡುವವರಿಗೆ 5,000ರೂ ವೇತನ ಹೆಚ್ಚಿಸಬೇಕು. ಕ್ಷೇತ್ರದಲ್ಲಿ ನೂರಾರು ಅಂಗನವಾಡಿಗಳ ದುರಸ್ತಿ, ಕಾರ್ಯಕರ್ತೆಯರಿಗೆ ಕನಿಷ್ಡ ₹5,000ಕ್ಕೆ ಗೌರವಧನ ಹೆಚ್ಚಿಸಬೇಕು ಎಂದು ಕೇಳಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>