<p><strong>ಬೇಲೂರು</strong>: ‘ಯೇಸು, ಬೈಬಲ್ಗೆ ಸಂಬಂಧವಿರುವ ಎನ್ನಲಾಗುತ್ತಿರುವ ಪುಸ್ತಕಗಳನ್ನು ಬೇಲೂರು-ಹಾಸನ ರಸ್ತೆಯ ಉದ್ದಕ್ಕೂ ಎಸೆಯಲಾಗಿದ್ದು, ಮತಾಂತರಕ್ಕೆ ಪ್ರೇರೇಪಣೆ ನೀಡಲಾಗುತ್ತಿದೆ’ ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆಗೆ ಮಂದಾದರು.</p>.<p>ತಾಲ್ಲೂಕಿನ ಮಲ್ಲಿಕಾರ್ಜುನಪುರ ಗ್ರಾಮದ ಹೆದ್ದಾರಿಯ ಬದಿಯಲ್ಲಿ ಮಂಗಳವಾರ ಎಸೆದಿದ್ದ ಪುಸ್ತಕಗಳನ್ನು ವೀಕ್ಷಿಸಿದ ಬಜರಂಗದಳ ತಾಲ್ಲೂಕು ಘಟಕದ ಅಧ್ಯಕ್ಷ ಭರತ್, ‘ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿರುವ ಭಕ್ತರನ್ನು ಮತಾಂತರಕ್ಕೆ ಪ್ರೇರೇಪಿಸುವ ಉದ್ದೇಶದಿಂದ ಈ ಪುಸ್ತಕಗಳನ್ನು ಎಸೆಯಲಾಗಿದೆ. ಹುನ್ನಾರು ನಡೆಸುತ್ತಿರುವವರನ್ನು ಪೊಲೀಸ್ ಇಲಾಖೆ ಗುರುತಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ದಕ್ಷಿಣ ಪ್ರಾಂತ್ಯದ ಗೋ ರಕ್ಷಣಾ ಪ್ರಮುಖ್ ಶರತ್, ‘ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ, ಬಲವಂತದ, ಆಮಿಷದ ಅಥವಾ ವಂಚನೆಯ ಮತಾಂತರ ಪ್ರಕರಣಗಳು ಮುಂದುವರಿದಿವೆ’ ಎಂದು ದೂರಿದರು.</p>.<p>ಪುಸ್ತಕಗಳನ್ನು ಪೊಲೀಸ್ ಸಿಬ್ಬಂದಿ ಸಂಗ್ರಹಿಸಿದರು. </p>.<p>ಬಜರಂಗದಳದ ನಾಗೇಶ್, ಮೋಹನ್, ಶಂಕರ್, ದರ್ಶನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ‘ಯೇಸು, ಬೈಬಲ್ಗೆ ಸಂಬಂಧವಿರುವ ಎನ್ನಲಾಗುತ್ತಿರುವ ಪುಸ್ತಕಗಳನ್ನು ಬೇಲೂರು-ಹಾಸನ ರಸ್ತೆಯ ಉದ್ದಕ್ಕೂ ಎಸೆಯಲಾಗಿದ್ದು, ಮತಾಂತರಕ್ಕೆ ಪ್ರೇರೇಪಣೆ ನೀಡಲಾಗುತ್ತಿದೆ’ ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆಗೆ ಮಂದಾದರು.</p>.<p>ತಾಲ್ಲೂಕಿನ ಮಲ್ಲಿಕಾರ್ಜುನಪುರ ಗ್ರಾಮದ ಹೆದ್ದಾರಿಯ ಬದಿಯಲ್ಲಿ ಮಂಗಳವಾರ ಎಸೆದಿದ್ದ ಪುಸ್ತಕಗಳನ್ನು ವೀಕ್ಷಿಸಿದ ಬಜರಂಗದಳ ತಾಲ್ಲೂಕು ಘಟಕದ ಅಧ್ಯಕ್ಷ ಭರತ್, ‘ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿರುವ ಭಕ್ತರನ್ನು ಮತಾಂತರಕ್ಕೆ ಪ್ರೇರೇಪಿಸುವ ಉದ್ದೇಶದಿಂದ ಈ ಪುಸ್ತಕಗಳನ್ನು ಎಸೆಯಲಾಗಿದೆ. ಹುನ್ನಾರು ನಡೆಸುತ್ತಿರುವವರನ್ನು ಪೊಲೀಸ್ ಇಲಾಖೆ ಗುರುತಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ದಕ್ಷಿಣ ಪ್ರಾಂತ್ಯದ ಗೋ ರಕ್ಷಣಾ ಪ್ರಮುಖ್ ಶರತ್, ‘ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ, ಬಲವಂತದ, ಆಮಿಷದ ಅಥವಾ ವಂಚನೆಯ ಮತಾಂತರ ಪ್ರಕರಣಗಳು ಮುಂದುವರಿದಿವೆ’ ಎಂದು ದೂರಿದರು.</p>.<p>ಪುಸ್ತಕಗಳನ್ನು ಪೊಲೀಸ್ ಸಿಬ್ಬಂದಿ ಸಂಗ್ರಹಿಸಿದರು. </p>.<p>ಬಜರಂಗದಳದ ನಾಗೇಶ್, ಮೋಹನ್, ಶಂಕರ್, ದರ್ಶನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>