<p><strong>ಬೇಲೂರು (ಹಾಸನ):</strong> ‘ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಇಲ್ಲಿನ ತಾಲ್ಲೂಕು ಕಚೇರಿಯ ಶಿರಸ್ತೇದಾರ ತನ್ವೀರ್ ಅಹಮ್ಮದ್ ಅವರು ಗುರುವಾರ ಮಧ್ಯಾಹ್ನ ಮಧುಮೇಹದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಸಹೋದ್ಯೋಗಿಗಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.</p>.<p>‘15 ದಿನಗಳಿಂದ ತಹಶೀಲ್ದಾರ್ ಹೀಯಾಳಿಸಿ ಮಾತನಾಡುತ್ತಿದ್ದಾರೆ. ಅನಾರೋಗ್ಯವಿದೆ ಎಂದರೂ ಜನಗಣತಿ ಮೇಲ್ವಿಚಾರಣೆಯ ಹೆಚ್ಚುವರಿ ಕೆಲಸ ನೀಡಿದ್ದಾರೆ. ನೊಂದು 5 ಮಾತ್ರೆಗಳನ್ನು ಒಟ್ಟಿಗೇ ಸೇವಿಸಿದ್ದೆ’ ಎಂದು ಅವರು ತಿಳಿಸಿದರು.</p>.<p>‘ಬೇರೆ ಸಿಬ್ಬಂದಿಗೂ ಹೆಚ್ಚು ಕೆಲಸವಿದ್ದುದರಿಂದ ಜನಗಣತಿ ವಿಭಾಗದ ಹೊಣೆ ನೀಡಲಾಗಿತ್ತು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಹೋದರು. ನಾನು ಕಿರುಕುಳ ನೀಡಿಲ್ಲ’ ಎಂದು ತಹಶೀಲ್ದಾರ್ ಸ್ಪಷ್ಟಪಡಿಸಿದರು. ‘ಅಹಮ್ಮದ್ ಅವರು ಆರೋಗ್ಯದಿಂದ ಇದ್ದಾರೆ’ ಎಂದು ವೈದ್ಯರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು (ಹಾಸನ):</strong> ‘ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಇಲ್ಲಿನ ತಾಲ್ಲೂಕು ಕಚೇರಿಯ ಶಿರಸ್ತೇದಾರ ತನ್ವೀರ್ ಅಹಮ್ಮದ್ ಅವರು ಗುರುವಾರ ಮಧ್ಯಾಹ್ನ ಮಧುಮೇಹದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಸಹೋದ್ಯೋಗಿಗಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.</p>.<p>‘15 ದಿನಗಳಿಂದ ತಹಶೀಲ್ದಾರ್ ಹೀಯಾಳಿಸಿ ಮಾತನಾಡುತ್ತಿದ್ದಾರೆ. ಅನಾರೋಗ್ಯವಿದೆ ಎಂದರೂ ಜನಗಣತಿ ಮೇಲ್ವಿಚಾರಣೆಯ ಹೆಚ್ಚುವರಿ ಕೆಲಸ ನೀಡಿದ್ದಾರೆ. ನೊಂದು 5 ಮಾತ್ರೆಗಳನ್ನು ಒಟ್ಟಿಗೇ ಸೇವಿಸಿದ್ದೆ’ ಎಂದು ಅವರು ತಿಳಿಸಿದರು.</p>.<p>‘ಬೇರೆ ಸಿಬ್ಬಂದಿಗೂ ಹೆಚ್ಚು ಕೆಲಸವಿದ್ದುದರಿಂದ ಜನಗಣತಿ ವಿಭಾಗದ ಹೊಣೆ ನೀಡಲಾಗಿತ್ತು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಹೋದರು. ನಾನು ಕಿರುಕುಳ ನೀಡಿಲ್ಲ’ ಎಂದು ತಹಶೀಲ್ದಾರ್ ಸ್ಪಷ್ಟಪಡಿಸಿದರು. ‘ಅಹಮ್ಮದ್ ಅವರು ಆರೋಗ್ಯದಿಂದ ಇದ್ದಾರೆ’ ಎಂದು ವೈದ್ಯರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>