<p><strong>ಬೇಲೂರು:</strong> ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ತಾಲ್ಲೂಕು ಘಟಕದ ಪ್ರತಿಭಟನೆಗೆ ಮಣಿದು ತಾಲ್ಲೂಕು ಪಂಚಾಯಿತಿಗೆ ಸೇರಿದ 16 ಅಂಗಡಿ ಮಳಿಗೆಗಳನ್ನು ಕಾರ್ಯನಿರ್ವಾಹಕ ಅಧಿಕಾರಿ ಜಿ.ಎಸ್. ಸತೀಶ್ ಕುಮಾರ್ ನೇತೃತ್ವದಲ್ಲಿ ಗುರುವಾರ ವಶಕ್ಕೆ ಪಡೆಯಲಾಯಿತು.</p>.<p>ಮಳಿಗೆಗಳನ್ನು ಖಾಲಿ ಮಾಡಿಸಿ, ಮರು ಹರಾಜು ನಡೆಸುವಂತೆ ಹೈಕೋರ್ಟ್ ಆದೇಶಿಸಿದ್ದರೂ ಅಧಿಕಾರಿಗಳು ಮುಂದಾಗಿಲ್ಲ ಎಂದು ಆರೋಪಿಸಿ ಇಲ್ಲಿನ ಕಚೇರಿ ಎದುರು ವೇದಿಕೆ ತಾಲ್ಲೂಕು ಘಟಕದ ಮುಖಂಡರು ಪ್ರತಿಭಟಿಸಿ, ಮಳಿಗೆ ಖಾಲಿ ಮಾಡಿಸದಿದ್ದರೆ ಅನಿರ್ದಿಷ್ಟಾವದಿ ಧರಣಿ ನಡೆಸುವುದಾಗಿ ಎಚ್ಚರಿಸಿದ್ದರು. ಇದರಿಂದ ಸತೀಶ್ ಕುಮಾರ್ ಮಳಿಗೆಗಳನ್ನು ಖಾಲಿ ಮಾಡಿಸಿದ್ದರು.</p>.<p> ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ‘ಮಳಿಗೆಗಳನ್ನು ಮರು ಹರಾಜು ಮಾಡುವಂತೆ ನ್ಯಾಯಾಲಯ ತಿಳಿಸಿದ್ದರೂ , ಅಧಿಕಾರಿಗಳು ವ್ಯಾಪಾರಸ್ಥರ ಜೊತೆ ಶಾಮಿಲಾಗಿ ಮಳಿಗೆಗಳನ್ನು ವಶಕ್ಕೆ ಪಡೆಯದ್ದರಿಂದ ಸರ್ಕಾರಕ್ಕೆ ₹4ಕೋಟಿ ನಷ್ಟವಾಗಿದೆ’ ಎಂದು ದೂರಿದರು.</p>.<p> ವೇದಿಕೆ ಘಟಕದ ಪ್ರದಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಮಾತನಾಡಿ, ವ್ಯಾಪಾರಸ್ಥರು ಮತ್ತೆ ನ್ಯಾಯಾಲಯಕ್ಕೆ ಹೋಗಲು ಅಧಿಕಾರಿಗಳು ಅನುವುಮಾಡಿರುವರು ಎಂದು ಆರೋಪಿಸಿದರು.</p>.<p> ಬಾಳೆಹಣ್ಣು ವ್ಯಾಪಾರಿ ಪರಶುರಾಮ ಮಾತನಾಡಿ, ವ್ಯಾಜ್ಯ ಜಿಲ್ಲಾ ನ್ಯಾಯಲಯದಲ್ಲಿದ್ದರೂ ನೋಟಿಸ್ ನೀಡದೆ, ಏಕಾಏಕಿ ಖಾಲಿ ಮಾಡಿಸಿ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p> <strong>‘₹38 ಲಕ್ಷ ಬಾಡಿಗೆ ಹಣ ಬಾಕಿ’</strong> </p><p>ಕಾರ್ಯನಿರ್ವಾಹಕ ಅಧಿಕಾರಿ ಜಿ.ಎಸ್. ಸತೀಶ್ ಕುಮಾರ್ ಮಾತನಾಡಿ ಅಂಗಡಿ ಮಳಿಗೆಗಳ ಅವಧಿ ಮುಗಿದು 3ವರ್ಷಗಳು ಕಳೆದಿದೆ ಈಗ ಎಲ್ಲ ವ್ಯಾಜ್ಯಗಳು ಮುಗಿದಿರುವುದರಿಂದ ನೋಟಿಸ್ ನೀಡಿ ವಶಕ್ಕೆ ಪಡೆಯಲಾಗಿದ್ದು ಮರು ಹರಾಜು ನಡೆಸಲಾಗುವುದು ಎಂದರು. ಈ ಅಂಗಡಿ ಮಳಿಗೆಗಳಿಂದ ನಮಗೆ ₹38 ಲಕ್ಷ ಬಾಡಿಗೆ ಹಣ ಬರಬೇಕಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು:</strong> ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ತಾಲ್ಲೂಕು ಘಟಕದ ಪ್ರತಿಭಟನೆಗೆ ಮಣಿದು ತಾಲ್ಲೂಕು ಪಂಚಾಯಿತಿಗೆ ಸೇರಿದ 16 ಅಂಗಡಿ ಮಳಿಗೆಗಳನ್ನು ಕಾರ್ಯನಿರ್ವಾಹಕ ಅಧಿಕಾರಿ ಜಿ.ಎಸ್. ಸತೀಶ್ ಕುಮಾರ್ ನೇತೃತ್ವದಲ್ಲಿ ಗುರುವಾರ ವಶಕ್ಕೆ ಪಡೆಯಲಾಯಿತು.</p>.<p>ಮಳಿಗೆಗಳನ್ನು ಖಾಲಿ ಮಾಡಿಸಿ, ಮರು ಹರಾಜು ನಡೆಸುವಂತೆ ಹೈಕೋರ್ಟ್ ಆದೇಶಿಸಿದ್ದರೂ ಅಧಿಕಾರಿಗಳು ಮುಂದಾಗಿಲ್ಲ ಎಂದು ಆರೋಪಿಸಿ ಇಲ್ಲಿನ ಕಚೇರಿ ಎದುರು ವೇದಿಕೆ ತಾಲ್ಲೂಕು ಘಟಕದ ಮುಖಂಡರು ಪ್ರತಿಭಟಿಸಿ, ಮಳಿಗೆ ಖಾಲಿ ಮಾಡಿಸದಿದ್ದರೆ ಅನಿರ್ದಿಷ್ಟಾವದಿ ಧರಣಿ ನಡೆಸುವುದಾಗಿ ಎಚ್ಚರಿಸಿದ್ದರು. ಇದರಿಂದ ಸತೀಶ್ ಕುಮಾರ್ ಮಳಿಗೆಗಳನ್ನು ಖಾಲಿ ಮಾಡಿಸಿದ್ದರು.</p>.<p> ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ‘ಮಳಿಗೆಗಳನ್ನು ಮರು ಹರಾಜು ಮಾಡುವಂತೆ ನ್ಯಾಯಾಲಯ ತಿಳಿಸಿದ್ದರೂ , ಅಧಿಕಾರಿಗಳು ವ್ಯಾಪಾರಸ್ಥರ ಜೊತೆ ಶಾಮಿಲಾಗಿ ಮಳಿಗೆಗಳನ್ನು ವಶಕ್ಕೆ ಪಡೆಯದ್ದರಿಂದ ಸರ್ಕಾರಕ್ಕೆ ₹4ಕೋಟಿ ನಷ್ಟವಾಗಿದೆ’ ಎಂದು ದೂರಿದರು.</p>.<p> ವೇದಿಕೆ ಘಟಕದ ಪ್ರದಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಮಾತನಾಡಿ, ವ್ಯಾಪಾರಸ್ಥರು ಮತ್ತೆ ನ್ಯಾಯಾಲಯಕ್ಕೆ ಹೋಗಲು ಅಧಿಕಾರಿಗಳು ಅನುವುಮಾಡಿರುವರು ಎಂದು ಆರೋಪಿಸಿದರು.</p>.<p> ಬಾಳೆಹಣ್ಣು ವ್ಯಾಪಾರಿ ಪರಶುರಾಮ ಮಾತನಾಡಿ, ವ್ಯಾಜ್ಯ ಜಿಲ್ಲಾ ನ್ಯಾಯಲಯದಲ್ಲಿದ್ದರೂ ನೋಟಿಸ್ ನೀಡದೆ, ಏಕಾಏಕಿ ಖಾಲಿ ಮಾಡಿಸಿ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p> <strong>‘₹38 ಲಕ್ಷ ಬಾಡಿಗೆ ಹಣ ಬಾಕಿ’</strong> </p><p>ಕಾರ್ಯನಿರ್ವಾಹಕ ಅಧಿಕಾರಿ ಜಿ.ಎಸ್. ಸತೀಶ್ ಕುಮಾರ್ ಮಾತನಾಡಿ ಅಂಗಡಿ ಮಳಿಗೆಗಳ ಅವಧಿ ಮುಗಿದು 3ವರ್ಷಗಳು ಕಳೆದಿದೆ ಈಗ ಎಲ್ಲ ವ್ಯಾಜ್ಯಗಳು ಮುಗಿದಿರುವುದರಿಂದ ನೋಟಿಸ್ ನೀಡಿ ವಶಕ್ಕೆ ಪಡೆಯಲಾಗಿದ್ದು ಮರು ಹರಾಜು ನಡೆಸಲಾಗುವುದು ಎಂದರು. ಈ ಅಂಗಡಿ ಮಳಿಗೆಗಳಿಂದ ನಮಗೆ ₹38 ಲಕ್ಷ ಬಾಡಿಗೆ ಹಣ ಬರಬೇಕಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>