<p><strong>ಬೇಲೂರು (ಹಾಸನ):</strong> ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಮಾಡುವ ಕುರಿತು ದಾಖಲೆಗಳ ಪರಿಶೀಲನೆ ಸಲುವಾಗಿ ಧಾರ್ಮಿಕ ದತ್ತಿ ಇಲಾಖೆಯ ಆಗಮ ಪಂಡಿತ ವಿಜಯ್ಕುಮಾರ್ ಅವರು ಗುರುವಾರ ಇಲ್ಲಿನ ಚೆನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿದ್ದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇವಾಲಯದ ಕೈಪಿಡಿಯಲ್ಲಿ ಮುಜುರೆ (ಕುರಾನ್ ಪಠಣ) ಸಲ್ಲಿಸಬೇಕು ಎಂದಿದೆ. ಆದರೆ, ರಥದ ಮುಂದೆ ಅಥವಾ ದೇಗುಲದ ಮುಂದೆ ಸಲ್ಲಿಸಬೇಕೆಂದಿಲ್ಲ. ಕಡತದ ಜೆರಾಕ್ಸ್ ಪ್ರತಿ ಪಡೆದಿದ್ದು, ಹಿರಿಯ ಅಧಿಕಾರಿಗಳಿಗೆ 2–3 ದಿನದಲ್ಲಿ ವರದಿ ಸಲ್ಲಿಸಲಾಗುವುದು’ ಎಂದರು.</p>.<p>‘ರಥೋತ್ಸವದಲ್ಲಿ ಯಾರು, ಯಾವ ಕರ್ತವ್ಯಗಳನ್ನು ನಿರ್ವಹಿಸಬೇಕು? ಯಾವೆಲ್ಲಾ ವ್ಯತ್ಯಾಸಗಳಾಗಿವೆ? ಸಾರ್ವಜನಿಕರಲ್ಲಿ ಮೂಡಿರುವ ಗೊಂದಲಗಳೇನು? ಎಂಬ ಬಗ್ಗೆ ಪರಿಶೀಲಿಸಲಾಗಿದೆ. ಮೈಸೂರಿನ ಮಹಾರಾಜರ ಕಾಲದಲ್ಲಿ ರಚಿಸಿದ ದೇಗುಲದ ಕೈಪಿಡಿಯ ಪ್ರಕಾರ ಪೂಜಾ ವಿಧಿವಿಧಾನಗಳು ನಡೆಯುತ್ತಿದ್ದು, ಕೆಲವು ವ್ಯತ್ಯಾಸಗಳಾಗಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಮೂಡಿದೆ’ ಎಂದರು.</p>.<p>ರಥೋತ್ಸವದ ಸಂದರ್ಭದಲ್ಲಿ ಮೌಲ್ವಿಗಳು ಸಲ್ಲಿಸುವ ಮುಜುರೆಗೆ ಅವಕಾಶ ನೀಡಬಾರದು ಎಂದು ಇತ್ತೀಚೆಗೆ ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅದರ ಬೆನ್ನಿಗೇ ಇಲಾಖೆಯ ಆಯುಕ್ತರ ಕಚೇರಿಯಿಂದ ಆಗಮ ಪಂಡಿತರು ದೇಗುಲಕ್ಕೆ ಭೇಟಿ ನೀಡಿರುವುದು ವಿಶೇಷ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು (ಹಾಸನ):</strong> ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಮಾಡುವ ಕುರಿತು ದಾಖಲೆಗಳ ಪರಿಶೀಲನೆ ಸಲುವಾಗಿ ಧಾರ್ಮಿಕ ದತ್ತಿ ಇಲಾಖೆಯ ಆಗಮ ಪಂಡಿತ ವಿಜಯ್ಕುಮಾರ್ ಅವರು ಗುರುವಾರ ಇಲ್ಲಿನ ಚೆನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿದ್ದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇವಾಲಯದ ಕೈಪಿಡಿಯಲ್ಲಿ ಮುಜುರೆ (ಕುರಾನ್ ಪಠಣ) ಸಲ್ಲಿಸಬೇಕು ಎಂದಿದೆ. ಆದರೆ, ರಥದ ಮುಂದೆ ಅಥವಾ ದೇಗುಲದ ಮುಂದೆ ಸಲ್ಲಿಸಬೇಕೆಂದಿಲ್ಲ. ಕಡತದ ಜೆರಾಕ್ಸ್ ಪ್ರತಿ ಪಡೆದಿದ್ದು, ಹಿರಿಯ ಅಧಿಕಾರಿಗಳಿಗೆ 2–3 ದಿನದಲ್ಲಿ ವರದಿ ಸಲ್ಲಿಸಲಾಗುವುದು’ ಎಂದರು.</p>.<p>‘ರಥೋತ್ಸವದಲ್ಲಿ ಯಾರು, ಯಾವ ಕರ್ತವ್ಯಗಳನ್ನು ನಿರ್ವಹಿಸಬೇಕು? ಯಾವೆಲ್ಲಾ ವ್ಯತ್ಯಾಸಗಳಾಗಿವೆ? ಸಾರ್ವಜನಿಕರಲ್ಲಿ ಮೂಡಿರುವ ಗೊಂದಲಗಳೇನು? ಎಂಬ ಬಗ್ಗೆ ಪರಿಶೀಲಿಸಲಾಗಿದೆ. ಮೈಸೂರಿನ ಮಹಾರಾಜರ ಕಾಲದಲ್ಲಿ ರಚಿಸಿದ ದೇಗುಲದ ಕೈಪಿಡಿಯ ಪ್ರಕಾರ ಪೂಜಾ ವಿಧಿವಿಧಾನಗಳು ನಡೆಯುತ್ತಿದ್ದು, ಕೆಲವು ವ್ಯತ್ಯಾಸಗಳಾಗಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಮೂಡಿದೆ’ ಎಂದರು.</p>.<p>ರಥೋತ್ಸವದ ಸಂದರ್ಭದಲ್ಲಿ ಮೌಲ್ವಿಗಳು ಸಲ್ಲಿಸುವ ಮುಜುರೆಗೆ ಅವಕಾಶ ನೀಡಬಾರದು ಎಂದು ಇತ್ತೀಚೆಗೆ ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅದರ ಬೆನ್ನಿಗೇ ಇಲಾಖೆಯ ಆಯುಕ್ತರ ಕಚೇರಿಯಿಂದ ಆಗಮ ಪಂಡಿತರು ದೇಗುಲಕ್ಕೆ ಭೇಟಿ ನೀಡಿರುವುದು ವಿಶೇಷ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>