<p><strong>ಬೇಲೂರು</strong>: ಟಿ.ನರಸೀಪರ ಕ್ಷೇತ್ರದ ಶಾಸಕ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿ ದಲಿತ ಮುಖಂಡರು ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಸೋಮವಾರ ಮಾನವ ಸರಪಳಿ ನಿರ್ಮಿಸಿದರು</p>.<p>ಮಹದೇವಪ್ಪ ಅವರಿಗೆ ರಾಜ್ಯದ ಹಳ್ಳಿ ಹಳ್ಳಿಗಳಲ್ಲಿ ಅಭಿಮಾನಿ ವರ್ಗವಿದೆ. ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ಮುಖಂಡರು, ಅದರಲ್ಲೂ ಪ್ರಮುಖವಾಗಿ ಸಿದ್ದರಾಮಯ್ಯನವರು ಜವಾಬ್ದಾರಿ ವಹಿಸಿಕೊಂಡು ಮಹದೇವಪ್ಪ ಅವರನ್ನು ಡಿಸಿಎಂ ಮಾಡಿ ಉತ್ತಮ ಖಾತೆಯನ್ನು ಕೊಡಿಸಬೇಕು. ಮಹದೇವಪ್ಪನವರಿಗೆ ಅನ್ಯಾಯವಾದರೆ ಸಮುದಾಯದವರು ಮುಂದಿನ ದಿನಗಳಲ್ಲಿ ಪಾಠ ಕಲಿಸಲಿದ್ದಾರೆ ಎಂದು ಪರೋಕ್ಷವಾಗಿ ಎಚ್ಚರಿಸಿದರು.</p>.<p>ದಲಿತ ಮುಖಂಡ ರಾಮೇನಹಳ್ಳಿ ವೆಂಕಟೇಶ್ ಮಾತನಾಡಿ, ಮುಖ್ಯಮಂತ್ರಿ ಹುದ್ದೆ ದಲಿತರಿಗೆ ದಕ್ಕುವಂತ ಒಂದು ಅವಕಾಶ ತಪ್ಪಿ ಹೋಗಿದೆ. ಆದ್ದರಿಂದ ದಲಿತರಿಗೆ ಅನ್ಯಾಯ ಮಾಡದೆ ಮಹದೇವಪ್ಪನವರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದರು.</p>.<p>ಈ ಸಂದರ್ಭದಲ್ಲಿ ದಲಿತ ಮುಂಖಡರಾದ ಮುತ್ತುಗನ್ನೆ ದೇವರಾಜು, ರಾಯಪುರ ರವಿ, ಗೂರೂರು ಸತೀಶ್, ಸತೀಶ್ ನಾಯ್ಕ, ಕೌರಿ ಕುಮಾರ್, ಕಾಂಗ್ರೆಸ್ ತಾಲ್ಲೂಕು ಯುವಘಟಕದ ಅಧ್ಯಕ್ಷ ಆನಂದ್ ,ಉಮೇಶ್, ನವೀನ, ಚಂದ್ರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-36-1602729</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ಟಿ.ನರಸೀಪರ ಕ್ಷೇತ್ರದ ಶಾಸಕ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿ ದಲಿತ ಮುಖಂಡರು ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಸೋಮವಾರ ಮಾನವ ಸರಪಳಿ ನಿರ್ಮಿಸಿದರು</p>.<p>ಮಹದೇವಪ್ಪ ಅವರಿಗೆ ರಾಜ್ಯದ ಹಳ್ಳಿ ಹಳ್ಳಿಗಳಲ್ಲಿ ಅಭಿಮಾನಿ ವರ್ಗವಿದೆ. ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ಮುಖಂಡರು, ಅದರಲ್ಲೂ ಪ್ರಮುಖವಾಗಿ ಸಿದ್ದರಾಮಯ್ಯನವರು ಜವಾಬ್ದಾರಿ ವಹಿಸಿಕೊಂಡು ಮಹದೇವಪ್ಪ ಅವರನ್ನು ಡಿಸಿಎಂ ಮಾಡಿ ಉತ್ತಮ ಖಾತೆಯನ್ನು ಕೊಡಿಸಬೇಕು. ಮಹದೇವಪ್ಪನವರಿಗೆ ಅನ್ಯಾಯವಾದರೆ ಸಮುದಾಯದವರು ಮುಂದಿನ ದಿನಗಳಲ್ಲಿ ಪಾಠ ಕಲಿಸಲಿದ್ದಾರೆ ಎಂದು ಪರೋಕ್ಷವಾಗಿ ಎಚ್ಚರಿಸಿದರು.</p>.<p>ದಲಿತ ಮುಖಂಡ ರಾಮೇನಹಳ್ಳಿ ವೆಂಕಟೇಶ್ ಮಾತನಾಡಿ, ಮುಖ್ಯಮಂತ್ರಿ ಹುದ್ದೆ ದಲಿತರಿಗೆ ದಕ್ಕುವಂತ ಒಂದು ಅವಕಾಶ ತಪ್ಪಿ ಹೋಗಿದೆ. ಆದ್ದರಿಂದ ದಲಿತರಿಗೆ ಅನ್ಯಾಯ ಮಾಡದೆ ಮಹದೇವಪ್ಪನವರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದರು.</p>.<p>ಈ ಸಂದರ್ಭದಲ್ಲಿ ದಲಿತ ಮುಂಖಡರಾದ ಮುತ್ತುಗನ್ನೆ ದೇವರಾಜು, ರಾಯಪುರ ರವಿ, ಗೂರೂರು ಸತೀಶ್, ಸತೀಶ್ ನಾಯ್ಕ, ಕೌರಿ ಕುಮಾರ್, ಕಾಂಗ್ರೆಸ್ ತಾಲ್ಲೂಕು ಯುವಘಟಕದ ಅಧ್ಯಕ್ಷ ಆನಂದ್ ,ಉಮೇಶ್, ನವೀನ, ಚಂದ್ರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-36-1602729</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>