<p>ಬೇಲೂರು: ತಾಲ್ಲೂಕಿನ ಮಾದಿಹಳ್ಳಿಯ ಋಗ್ವೇದ ರೆಸಾರ್ಟ್ನಲ್ಲಿ ನಿರ್ಮಿಸಿರುವ ಗ್ರಂಥಾಲಯವನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಗುರುವಾರ ಉದ್ಘಾಟಿಸಿದರು.</p>.<p>ಋಗ್ವೇದ ರೆಸಾರ್ಟ್ ಮಾಲೀಕ ಡಿಶಾಂತ್ ಕುಮಾರ್, 15 ಬಡ ಕುಟುಂಬ ಗಳಿಗೆ ಉಚಿತವಾಗಿ ನೀಡುತ್ತಿರುವ ನಿವೇಶನ ದಾಖಲಾತಿ ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಿದರು.</p>.<p>ಈ ಸಂದರ್ಭದಲ್ಲಿ ಶಾಸಕ ಎಚ್.ಕೆ. ಸುರೇಶ್ ಮಾತನಾಡಿ, ಪುನೀತ್ ರಾಜ್ಕುಮಾರ್ ನಿಧನದ ದಿನವೇ ಕ್ಷೇತ್ರದಲ್ಲಿ ನಡೆಯಬೇಕಿದ್ದ ₹127 ಕೋಟಿ ರಣಘಟ್ಟ ಯೋಜ ನೆಯ ಕಾರ್ಯಕ್ರಮವನ್ನು ಮುಂದೂಡಲಾಗಯಿತು. ಅವರ ಅಗಲಿಕೆ ನಾಡನ್ನು ದುಃಖದಲ್ಲಿ ಮುಳು ಗಿಸಿತ್ತು. ಕ್ಷೇತ್ರದಲ್ಲೂ ಅಪಾರ ಅಭಿಮಾನಿಗಳಿದ್ದಾರೆ ಎಂದರು.</p>.<p>ಋಗ್ವೇದ ರೆಸಾರ್ಟ್ ಕೇವಲ ರೆಸಾರ್ಟ್ ಅಲ್ಲ. ಗ್ರಂಥಾಲಯ ಹಾಗೂ ಆರೋಗ್ಯ ಸೇವೆಗಳನ್ನು ಒಳಗೊಂಡ ಸಾಮಾಜಿಕ ಸೇವಾ ಕೇಂದ್ರವಾಗಲಿದೆ ಎಂದು ತಿಳಿಸಿದರು.</p>.<p>ಋಗ್ವೇದ ರೆಸಾರ್ಟ್ ಮಾಲೀಕ ಡಿಶಾಂತ್ ಕುಮಾರ್, ಸಾಹಿತಿ ಚಟ್ನಳ್ಳಿ ಮಹೇಶ್, ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜು, ಬ್ಯಾಂಕ್ ವ್ಯವಸ್ಥಾಪಕಿ ಮಮತಾ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-36-1573488611</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೇಲೂರು: ತಾಲ್ಲೂಕಿನ ಮಾದಿಹಳ್ಳಿಯ ಋಗ್ವೇದ ರೆಸಾರ್ಟ್ನಲ್ಲಿ ನಿರ್ಮಿಸಿರುವ ಗ್ರಂಥಾಲಯವನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಗುರುವಾರ ಉದ್ಘಾಟಿಸಿದರು.</p>.<p>ಋಗ್ವೇದ ರೆಸಾರ್ಟ್ ಮಾಲೀಕ ಡಿಶಾಂತ್ ಕುಮಾರ್, 15 ಬಡ ಕುಟುಂಬ ಗಳಿಗೆ ಉಚಿತವಾಗಿ ನೀಡುತ್ತಿರುವ ನಿವೇಶನ ದಾಖಲಾತಿ ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಿದರು.</p>.<p>ಈ ಸಂದರ್ಭದಲ್ಲಿ ಶಾಸಕ ಎಚ್.ಕೆ. ಸುರೇಶ್ ಮಾತನಾಡಿ, ಪುನೀತ್ ರಾಜ್ಕುಮಾರ್ ನಿಧನದ ದಿನವೇ ಕ್ಷೇತ್ರದಲ್ಲಿ ನಡೆಯಬೇಕಿದ್ದ ₹127 ಕೋಟಿ ರಣಘಟ್ಟ ಯೋಜ ನೆಯ ಕಾರ್ಯಕ್ರಮವನ್ನು ಮುಂದೂಡಲಾಗಯಿತು. ಅವರ ಅಗಲಿಕೆ ನಾಡನ್ನು ದುಃಖದಲ್ಲಿ ಮುಳು ಗಿಸಿತ್ತು. ಕ್ಷೇತ್ರದಲ್ಲೂ ಅಪಾರ ಅಭಿಮಾನಿಗಳಿದ್ದಾರೆ ಎಂದರು.</p>.<p>ಋಗ್ವೇದ ರೆಸಾರ್ಟ್ ಕೇವಲ ರೆಸಾರ್ಟ್ ಅಲ್ಲ. ಗ್ರಂಥಾಲಯ ಹಾಗೂ ಆರೋಗ್ಯ ಸೇವೆಗಳನ್ನು ಒಳಗೊಂಡ ಸಾಮಾಜಿಕ ಸೇವಾ ಕೇಂದ್ರವಾಗಲಿದೆ ಎಂದು ತಿಳಿಸಿದರು.</p>.<p>ಋಗ್ವೇದ ರೆಸಾರ್ಟ್ ಮಾಲೀಕ ಡಿಶಾಂತ್ ಕುಮಾರ್, ಸಾಹಿತಿ ಚಟ್ನಳ್ಳಿ ಮಹೇಶ್, ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜು, ಬ್ಯಾಂಕ್ ವ್ಯವಸ್ಥಾಪಕಿ ಮಮತಾ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-36-1573488611</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>