<p>ಪ್ರಜಾವಾಣಿ ವಾರ್ತೆ</p>.<p>ಬೇಲೂರು: ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುವಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ದೇಶಾಣಿ ಆನಂದ್ ತಾಕೀತು ಮಾಡಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಂಭಾಗಣದಲ್ಲಿ ಸೋಮವಾರ ಆಯೋಜಿಸಿದ್ದ, ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಗೃಹಲಕ್ಷ್ಮಿ ಯೋಜನೆಯಲ್ಲಿ ನಾವು ಶೇ 96ರಷ್ಟು ಪ್ರಗತಿ ಸಾಧಿಸಿದ್ದು, ಇದು ಶೇ100 ಆಗಬೇಕು. ಪಡಿತರ ವಿತರಣೆಗಾಗಿ ಇ–ಕೆವೈಸಿ ಮಾಡಿಸುವಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ತೋರುತ್ತಿದ್ದು, ತಕ್ಷಣ ಗಮನ ಹರಿಸಬೇಕು’ ಎಂದರು.</p>.<p>‘ಯುವನಿಧಿ ಫಲಾನುಭವಿಗಳನ್ನು ಗುರುತಿಸಲು ಕಾರ್ಯಾಗಾರ ಆಯೋಜಿಸಬೇಕು ಹಾಗೂ ಹೆಚ್ಚಿನ ಪ್ರಚಾರ ನೀಡಬೇಕು ಎಂದು ಕೌಶಲ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮಿ ಅವರಿಗೆ ಸೂಚಿಸಿದರು.</p>.<p>ನರೇಗಾ ಯೋಜನೆ ಸಹಾಯಕ ನಿರ್ದೇಶಕ ದಯಾನಂದ್, ಆಹಾರ ನಿರೀಕ್ಷಕಿ ವೀಣಾ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯೋಜಕಿ ರಮ್ಯ, ಗ್ಯಾರಂಟಿ ಯೋಜನೆಯ ಸದಸ್ಯರಾದ ಶರತ್, ವಿಶಾಲಕ್ಷಿ, ಸುರೇಶ್, ಮಹೇಶ್, ಪ್ರತಾಪ್, ನಿಶ್ಚಲ್, ಸತೀಶ್, ಮನ್ಸೂರ್ ಅಹಮ್ಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಬೇಲೂರು: ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುವಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ದೇಶಾಣಿ ಆನಂದ್ ತಾಕೀತು ಮಾಡಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಂಭಾಗಣದಲ್ಲಿ ಸೋಮವಾರ ಆಯೋಜಿಸಿದ್ದ, ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಗೃಹಲಕ್ಷ್ಮಿ ಯೋಜನೆಯಲ್ಲಿ ನಾವು ಶೇ 96ರಷ್ಟು ಪ್ರಗತಿ ಸಾಧಿಸಿದ್ದು, ಇದು ಶೇ100 ಆಗಬೇಕು. ಪಡಿತರ ವಿತರಣೆಗಾಗಿ ಇ–ಕೆವೈಸಿ ಮಾಡಿಸುವಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ತೋರುತ್ತಿದ್ದು, ತಕ್ಷಣ ಗಮನ ಹರಿಸಬೇಕು’ ಎಂದರು.</p>.<p>‘ಯುವನಿಧಿ ಫಲಾನುಭವಿಗಳನ್ನು ಗುರುತಿಸಲು ಕಾರ್ಯಾಗಾರ ಆಯೋಜಿಸಬೇಕು ಹಾಗೂ ಹೆಚ್ಚಿನ ಪ್ರಚಾರ ನೀಡಬೇಕು ಎಂದು ಕೌಶಲ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮಿ ಅವರಿಗೆ ಸೂಚಿಸಿದರು.</p>.<p>ನರೇಗಾ ಯೋಜನೆ ಸಹಾಯಕ ನಿರ್ದೇಶಕ ದಯಾನಂದ್, ಆಹಾರ ನಿರೀಕ್ಷಕಿ ವೀಣಾ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯೋಜಕಿ ರಮ್ಯ, ಗ್ಯಾರಂಟಿ ಯೋಜನೆಯ ಸದಸ್ಯರಾದ ಶರತ್, ವಿಶಾಲಕ್ಷಿ, ಸುರೇಶ್, ಮಹೇಶ್, ಪ್ರತಾಪ್, ನಿಶ್ಚಲ್, ಸತೀಶ್, ಮನ್ಸೂರ್ ಅಹಮ್ಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>