<p><strong>ಹಾಸನ</strong>: ‘ಮಹನೀಯರ ಜಯಂತಿಗಳು ಒಂದು ಸಮುದಾಯಕ್ಕೆ ಮಾತ್ರ ಸೀಮಿತಗೊಳಿಸಬಾರದು’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ಪುನೀತ್ಹೇಳಿದರು.</p>.<p>ನಗರದ ಕಲಾಭವನದಲ್ಲಿ ಭಾನುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಏರ್ಪಡಿಸಿದ್ದ ಭಗೀರಥ ಜಯಂತಿ ಅಧ್ಯಕ್ಷತೆವಹಿಸಿ ಮಾತನಾಡಿದರು.</p>.<p>‘ಭಗೀರಥರ ಸಂದೇಶಗಳು ಇಂದಿಗೂ ಪ್ರಸ್ತುತ. ಅವರ ವಿಚಾರಗಳನ್ನು ಎಲ್ಲಾ ವರ್ಗಗಳಸಮುದಾಯದವರು ಅರಿತು, ಬಾಳಬೇಕು. ನಮಗಾಗಿ ಬದುಕದೆ ಸಮಾಜಕ್ಕಾಗಿಬದುಕಬೇಕು ಎಂಬುದು ಭಗೀರಥರ ಮೂಲ ಉದ್ದೇಶವಾಗಿದ್ದು, ಅದಕ್ಕಾಗಿಯೇ ಅವರುಭೂಮಿಗೆ ಗಂಗೆ ತಂದಿದ್ದಾರೆ’ ಎಂದರು.</p>.<p>ವಿಶೇಷ ಉಪನ್ಯಾಸ ನೀಡಿದ ಡಾ.ಸೀ.ಚ. ಯತೀಶ್ವರ, ‘ಮಹಾನ್ ವ್ಯಕ್ತಿಗಳನ್ನು ಪೂಜೆಗೆ ಮಾತ್ರ ಸೀಮಿತಗೊಳಿಸದೆ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಜೀವನದ ಬಗ್ಗೆ ಸಂಪೂರ್ಣವಾಗಿ ತಿಳಿಯಬೇಕು. ಆಗ ಮಾತ್ರ ಇಂತಹ ಆಚರಣೆಗಳಿಗೆ ಅರ್ಥ ಸಿಗುತ್ತದೆ’ ಎಂದು ಸಲಹೆ ನೀಡಿದರು.</p>.<p>‘ಯಾವುದೇ ಸಾಧನೆಗೆ ಶ್ರಮ ಅಗತ್ಯ. ಭಗೀರಥರು ಗಂಗೆಯನ್ನು ದೇವಲೋಕದಿಂದಭೂಮಿಗೆ ಇಳಿಸಿದ ಸಾಧನೆ ಅಸಾಧ್ಯವಾದದ್ದು. ಅದನ್ನು ಮಾಡಿಯೇ ತೀರಿದ ಅವರುಮಹಾನ್ ಪುರುಷರು, ಆಧುನಿಕ ಜೀವನಕ್ಕೆ ಭಗೀರಥರ ಆದರ್ಶ ಮುಖ್ಯ. ಅವರಂತೆಮಾನಸಿಕ, ದೈಹಿಕವಾಗಿ ಯುವ ಪೀಳಿಗೆ ಸದೃಢವಾಗಬೇಕಿದೆ. ಸಮಾಜಕ್ಕಾಗಿಬದುಕಬೇಕು’ ಎಂದು ಕರೆ ನೀಡಿದರು.</p>.<p>ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈ.ಕೃಷ್ಣೇಗೌಡಮಾತನಾಡಿ, ‘ಇಂದಿನ ಪೀಳಿಗೆಯ ಮಕ್ಕಳು ಪುಸ್ತಕ ಓದುವ ಮೂಲಕ ಉತ್ತಮ ಜ್ಞಾನ ಪಡೆದುಕೊಳ್ಳಬಹುದಾಗಿದ್ದು, ಮಹನೀಯರ ಬಗ್ಗೆ ಓದಿ ಅರ್ಥೈಸಿಕೊಳ್ಳುವುದು ಬಹಳ ಮುಖ್ಯ’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಡಾ.ಎಂ.ಡಿ.ಸುದರ್ಶನ್, ಉಪ್ಪಾರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಜೆ. ನೀಲಪ್ಪ, ನಗರಸಭೆ ಸದಸ್ಯ ಎಂ.ಚಂದ್ರೇಗೌಡ, ಸ್ವಾತಂತ್ರ ಹೋರಾಟಗಾರ ಎಚ್.ಎಂ. ಶಿವಣ್ಣ, ಕೈಗಾರಿಕಾ ಸಂಘದ ಅಧ್ಯಕ್ಷ ಜೆ.ಒ.ಮಹಾಂತಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ಮಹನೀಯರ ಜಯಂತಿಗಳು ಒಂದು ಸಮುದಾಯಕ್ಕೆ ಮಾತ್ರ ಸೀಮಿತಗೊಳಿಸಬಾರದು’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ಪುನೀತ್ಹೇಳಿದರು.</p>.<p>ನಗರದ ಕಲಾಭವನದಲ್ಲಿ ಭಾನುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಏರ್ಪಡಿಸಿದ್ದ ಭಗೀರಥ ಜಯಂತಿ ಅಧ್ಯಕ್ಷತೆವಹಿಸಿ ಮಾತನಾಡಿದರು.</p>.<p>‘ಭಗೀರಥರ ಸಂದೇಶಗಳು ಇಂದಿಗೂ ಪ್ರಸ್ತುತ. ಅವರ ವಿಚಾರಗಳನ್ನು ಎಲ್ಲಾ ವರ್ಗಗಳಸಮುದಾಯದವರು ಅರಿತು, ಬಾಳಬೇಕು. ನಮಗಾಗಿ ಬದುಕದೆ ಸಮಾಜಕ್ಕಾಗಿಬದುಕಬೇಕು ಎಂಬುದು ಭಗೀರಥರ ಮೂಲ ಉದ್ದೇಶವಾಗಿದ್ದು, ಅದಕ್ಕಾಗಿಯೇ ಅವರುಭೂಮಿಗೆ ಗಂಗೆ ತಂದಿದ್ದಾರೆ’ ಎಂದರು.</p>.<p>ವಿಶೇಷ ಉಪನ್ಯಾಸ ನೀಡಿದ ಡಾ.ಸೀ.ಚ. ಯತೀಶ್ವರ, ‘ಮಹಾನ್ ವ್ಯಕ್ತಿಗಳನ್ನು ಪೂಜೆಗೆ ಮಾತ್ರ ಸೀಮಿತಗೊಳಿಸದೆ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಜೀವನದ ಬಗ್ಗೆ ಸಂಪೂರ್ಣವಾಗಿ ತಿಳಿಯಬೇಕು. ಆಗ ಮಾತ್ರ ಇಂತಹ ಆಚರಣೆಗಳಿಗೆ ಅರ್ಥ ಸಿಗುತ್ತದೆ’ ಎಂದು ಸಲಹೆ ನೀಡಿದರು.</p>.<p>‘ಯಾವುದೇ ಸಾಧನೆಗೆ ಶ್ರಮ ಅಗತ್ಯ. ಭಗೀರಥರು ಗಂಗೆಯನ್ನು ದೇವಲೋಕದಿಂದಭೂಮಿಗೆ ಇಳಿಸಿದ ಸಾಧನೆ ಅಸಾಧ್ಯವಾದದ್ದು. ಅದನ್ನು ಮಾಡಿಯೇ ತೀರಿದ ಅವರುಮಹಾನ್ ಪುರುಷರು, ಆಧುನಿಕ ಜೀವನಕ್ಕೆ ಭಗೀರಥರ ಆದರ್ಶ ಮುಖ್ಯ. ಅವರಂತೆಮಾನಸಿಕ, ದೈಹಿಕವಾಗಿ ಯುವ ಪೀಳಿಗೆ ಸದೃಢವಾಗಬೇಕಿದೆ. ಸಮಾಜಕ್ಕಾಗಿಬದುಕಬೇಕು’ ಎಂದು ಕರೆ ನೀಡಿದರು.</p>.<p>ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈ.ಕೃಷ್ಣೇಗೌಡಮಾತನಾಡಿ, ‘ಇಂದಿನ ಪೀಳಿಗೆಯ ಮಕ್ಕಳು ಪುಸ್ತಕ ಓದುವ ಮೂಲಕ ಉತ್ತಮ ಜ್ಞಾನ ಪಡೆದುಕೊಳ್ಳಬಹುದಾಗಿದ್ದು, ಮಹನೀಯರ ಬಗ್ಗೆ ಓದಿ ಅರ್ಥೈಸಿಕೊಳ್ಳುವುದು ಬಹಳ ಮುಖ್ಯ’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಡಾ.ಎಂ.ಡಿ.ಸುದರ್ಶನ್, ಉಪ್ಪಾರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಜೆ. ನೀಲಪ್ಪ, ನಗರಸಭೆ ಸದಸ್ಯ ಎಂ.ಚಂದ್ರೇಗೌಡ, ಸ್ವಾತಂತ್ರ ಹೋರಾಟಗಾರ ಎಚ್.ಎಂ. ಶಿವಣ್ಣ, ಕೈಗಾರಿಕಾ ಸಂಘದ ಅಧ್ಯಕ್ಷ ಜೆ.ಒ.ಮಹಾಂತಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>