<p><strong>ಹಾಸನ: </strong>‘ಹಾಸನ ವಿಧಾನಸಭಾ ಕ್ಷೇತ್ರದಿಂದ ಭವಾನಿ ರೇವಣ್ಣ ಸ್ಪರ್ಧೆ ಹಾಗೂ ಭವಾನಿ ಒಂದಲ್ಲ ಒಂದು ದಿನ ಎಂಎಲ್ಎ ಆಗ್ತಾರೆ ಎಂಬ ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ’ ಎಂದು ಭವಾನಿ ರೇವಣ್ಣ ಸೋಮವಾರ ಹೇಳಿದರು.</p>.<p>‘ನಾನು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನಮ್ಮ ಮನೆಯಲ್ಲಿ ಚರ್ಚೆಯಾಗಿಲ್ಲ. ನನ್ನ ಅನುಪಸ್ಥಿತಿಯಲ್ಲಿ ರೇವಣ್ಣ ಅವರು ಏನು ಹೇಳಿದ್ದಾರೆ ನನಗೆ ಗೊತ್ತಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p>ವರಿಷ್ಠರ ನಿರ್ಧಾರಕ್ಕೆ ಬದ್ಧ: ‘ಪಕ್ಷದ ವರಿಷ್ಠರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದಕ್ಕೆ ಎಲ್ಲರು ಬದ್ಧರಾಗಿರುತ್ತೇವೆ. ನಾನುನಾನು ಟಿಕೆಟ್ ಆಕಾಂಕ್ಷಿಯಾಗಿ ಹೊಸದಾಗಿ ಜನರನ್ನು ಭೇಟಿ ಮಾಡುತ್ತಿಲ್ಲ. ಕಾರ್ಯಕ್ರಮ ಆಯೋಜಿಸುತ್ತಿಲ್ಲ. ರೇವಣ್ಣ ಅವರು ಸಚಿವರಾದಾಗಿನಿಂದಲೂ ಅವರಿಗೆ ಸಾಥ್ ಕೊಡುವ ಮೂಲಕ ಜನರನ್ನ ಹತ್ತಿರದಿಂದ ನೋಡುತ್ತಿದ್ದೇನೆ’ ಎಂದರು.</p>.<p class="Subhead"><strong>ವೃದ್ಧಾಶ್ರಮದಲ್ಲಿ ಹೆಚ್ಡಿಡಿ ಹುಟ್ಟುಹಬ್ಬ: </strong>ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟು ಹಬ್ಬವನ್ನು ನಗರದ ಹೊರವಲಯದ ಕಾಮಧೇನು ಚೈತನ್ಯ ವೃದ್ಧಾಶ್ರಮದಲ್ಲಿ ಹಿರಿಯರೊಂದಿಗೆ ಸೋಮವಾರ ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಭವಾನಿ ರೇವಣ್ಣ ಕೇಕ್ ಕತ್ತರಿಸಿದರು. ವೃದ್ಧಾಶ್ರಮವಾಸಿಗಳಿಗೆ ಹಣ್ಣು ವಿತರಣೆ ಜೊತೆಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸ್ವರೂಪ್ ಪ್ರಕಾಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಎಚ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜ್, ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ, ಕಾಮಧೇನು ವೃದ್ದಾಶ್ರಮದ ಪದಾಧಿಕಾರಿಗಳಾಧ ಮಾಧವ ಶಣೈ , ರಾಜಣ್ಣ ಮುತ್ತತ್ತಿ, ವೆಂಕಟರಾಮ್, ರಾಜು ಗೊರೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>‘ಹಾಸನ ವಿಧಾನಸಭಾ ಕ್ಷೇತ್ರದಿಂದ ಭವಾನಿ ರೇವಣ್ಣ ಸ್ಪರ್ಧೆ ಹಾಗೂ ಭವಾನಿ ಒಂದಲ್ಲ ಒಂದು ದಿನ ಎಂಎಲ್ಎ ಆಗ್ತಾರೆ ಎಂಬ ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ’ ಎಂದು ಭವಾನಿ ರೇವಣ್ಣ ಸೋಮವಾರ ಹೇಳಿದರು.</p>.<p>‘ನಾನು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನಮ್ಮ ಮನೆಯಲ್ಲಿ ಚರ್ಚೆಯಾಗಿಲ್ಲ. ನನ್ನ ಅನುಪಸ್ಥಿತಿಯಲ್ಲಿ ರೇವಣ್ಣ ಅವರು ಏನು ಹೇಳಿದ್ದಾರೆ ನನಗೆ ಗೊತ್ತಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p>ವರಿಷ್ಠರ ನಿರ್ಧಾರಕ್ಕೆ ಬದ್ಧ: ‘ಪಕ್ಷದ ವರಿಷ್ಠರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದಕ್ಕೆ ಎಲ್ಲರು ಬದ್ಧರಾಗಿರುತ್ತೇವೆ. ನಾನುನಾನು ಟಿಕೆಟ್ ಆಕಾಂಕ್ಷಿಯಾಗಿ ಹೊಸದಾಗಿ ಜನರನ್ನು ಭೇಟಿ ಮಾಡುತ್ತಿಲ್ಲ. ಕಾರ್ಯಕ್ರಮ ಆಯೋಜಿಸುತ್ತಿಲ್ಲ. ರೇವಣ್ಣ ಅವರು ಸಚಿವರಾದಾಗಿನಿಂದಲೂ ಅವರಿಗೆ ಸಾಥ್ ಕೊಡುವ ಮೂಲಕ ಜನರನ್ನ ಹತ್ತಿರದಿಂದ ನೋಡುತ್ತಿದ್ದೇನೆ’ ಎಂದರು.</p>.<p class="Subhead"><strong>ವೃದ್ಧಾಶ್ರಮದಲ್ಲಿ ಹೆಚ್ಡಿಡಿ ಹುಟ್ಟುಹಬ್ಬ: </strong>ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟು ಹಬ್ಬವನ್ನು ನಗರದ ಹೊರವಲಯದ ಕಾಮಧೇನು ಚೈತನ್ಯ ವೃದ್ಧಾಶ್ರಮದಲ್ಲಿ ಹಿರಿಯರೊಂದಿಗೆ ಸೋಮವಾರ ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಭವಾನಿ ರೇವಣ್ಣ ಕೇಕ್ ಕತ್ತರಿಸಿದರು. ವೃದ್ಧಾಶ್ರಮವಾಸಿಗಳಿಗೆ ಹಣ್ಣು ವಿತರಣೆ ಜೊತೆಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸ್ವರೂಪ್ ಪ್ರಕಾಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಎಚ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜ್, ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ, ಕಾಮಧೇನು ವೃದ್ದಾಶ್ರಮದ ಪದಾಧಿಕಾರಿಗಳಾಧ ಮಾಧವ ಶಣೈ , ರಾಜಣ್ಣ ಮುತ್ತತ್ತಿ, ವೆಂಕಟರಾಮ್, ರಾಜು ಗೊರೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>