<p><strong>ಹಾಸನ:</strong> ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಗಾಥೆ ಸಾರುವ ‘ಮಹಾನಾಯಕ’ ಧಾರಾವಾಹಿ ನಿಲ್ಲಿಸುವಂತೆ ಜೀ<br />ಕನ್ನಡ ವಾಹಿನಿ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಅವರಿಗೆ ಬೆದರಿಕೆ ಕರೆ ಮಾಡಿರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ದ್ರಾವಿಡ ಭೀಮ್ ಆರ್ಮಿ ಅಧ್ಯಕ್ಷ ಸಂಪತ್ ಸುಬ್ಬಯ್ಯ ಒತ್ತಾಯಿಸಿದರು.</p>.<p>ರಾಜ್ಯದ ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಮಹಾನಾಯಕ ಧಾರಾವಾಹಿಯನ್ನು ಮೆಚ್ಚಿಕೊಂಡಿದ್ದಾರೆ. ಇದನ್ನು ಸಹಿಸದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಕಿಡಿಗೇಡಿ ಕೃತ್ಯ ಮಾಡುತ್ತಿರುವುದು ಖಂಡನೀಯ. ಸಮಾಜದಲ್ಲಿ ಸಾಮರಸ್ಯ ಕದಡುವ ಕೃತ್ಯಕ್ಕೆ ಕೈ ಹಾಕಿರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಯಾರ ಒತ್ತಡಕ್ಕೂ ಮಣಿಯದೆ ಧಾರಾವಾಹಿ ಪ್ರಸಾರವನ್ನು ಮುಂದುವರಿಸಬೇಕು. ರಾಜ್ಯ ಸರ್ಕಾರ ವಾಹಿನಿ ಕಚೇರಿ ಮತ್ತು ಅದರ ಮುಖ್ಯಸ್ಥರಿಗೆ ಸೂಕ್ತ ಭದ್ರತೆ ನೀಡಬೇಕು. ಅಂಬೇಡ್ಕರ್ ಅನುಯಾಯಿಗಳು ಹಾಗೂ ಅಭಿಮಾನಿಗಳು, ಎಲ್ಲಾ ಸಂಘಟನೆಗಳು ಮಹಾನಾಯಕ ಧಾರಾವಾಹಿ ಪರ ನಿಲ್ಲಬೇಕು ಎಂದು ಮನವಿ ಮಾಡಿದರು.</p>.<p>ಗೋಷ್ಟಿಯಲ್ಲಿ ದ್ರಾವಿಡ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಪ್ರಸಾದ್ ಎಚ್.ಆರ್., ಸದಸ್ಯರಾದ ಮಂಜು, ಶರತ್, ಅರಸೀಕೆರೆ ಟಿಪ್ಪು ಸುಲ್ತಾನ್ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಮೊಹಮದ್ ಫಯಾಜ್, ಶಶಿಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಗಾಥೆ ಸಾರುವ ‘ಮಹಾನಾಯಕ’ ಧಾರಾವಾಹಿ ನಿಲ್ಲಿಸುವಂತೆ ಜೀ<br />ಕನ್ನಡ ವಾಹಿನಿ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಅವರಿಗೆ ಬೆದರಿಕೆ ಕರೆ ಮಾಡಿರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ದ್ರಾವಿಡ ಭೀಮ್ ಆರ್ಮಿ ಅಧ್ಯಕ್ಷ ಸಂಪತ್ ಸುಬ್ಬಯ್ಯ ಒತ್ತಾಯಿಸಿದರು.</p>.<p>ರಾಜ್ಯದ ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಮಹಾನಾಯಕ ಧಾರಾವಾಹಿಯನ್ನು ಮೆಚ್ಚಿಕೊಂಡಿದ್ದಾರೆ. ಇದನ್ನು ಸಹಿಸದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಕಿಡಿಗೇಡಿ ಕೃತ್ಯ ಮಾಡುತ್ತಿರುವುದು ಖಂಡನೀಯ. ಸಮಾಜದಲ್ಲಿ ಸಾಮರಸ್ಯ ಕದಡುವ ಕೃತ್ಯಕ್ಕೆ ಕೈ ಹಾಕಿರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಯಾರ ಒತ್ತಡಕ್ಕೂ ಮಣಿಯದೆ ಧಾರಾವಾಹಿ ಪ್ರಸಾರವನ್ನು ಮುಂದುವರಿಸಬೇಕು. ರಾಜ್ಯ ಸರ್ಕಾರ ವಾಹಿನಿ ಕಚೇರಿ ಮತ್ತು ಅದರ ಮುಖ್ಯಸ್ಥರಿಗೆ ಸೂಕ್ತ ಭದ್ರತೆ ನೀಡಬೇಕು. ಅಂಬೇಡ್ಕರ್ ಅನುಯಾಯಿಗಳು ಹಾಗೂ ಅಭಿಮಾನಿಗಳು, ಎಲ್ಲಾ ಸಂಘಟನೆಗಳು ಮಹಾನಾಯಕ ಧಾರಾವಾಹಿ ಪರ ನಿಲ್ಲಬೇಕು ಎಂದು ಮನವಿ ಮಾಡಿದರು.</p>.<p>ಗೋಷ್ಟಿಯಲ್ಲಿ ದ್ರಾವಿಡ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಪ್ರಸಾದ್ ಎಚ್.ಆರ್., ಸದಸ್ಯರಾದ ಮಂಜು, ಶರತ್, ಅರಸೀಕೆರೆ ಟಿಪ್ಪು ಸುಲ್ತಾನ್ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಮೊಹಮದ್ ಫಯಾಜ್, ಶಶಿಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>