<p><strong>ಚನ್ನರಾಯಪಟ್ಟಣ</strong>: 2018ರಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಶ್ರವಣಬೆಳಗೊಳದಲ್ಲಿ ಜೈನ ಮಠದವತಿಯಿಂದ ಸಾಹಿತಿ ಎಸ್.ಎಲ್. ಭೈರಪ್ಪ ಅವರನ್ನು ಗೌರವಿಸಲಾಗಿತ್ತು.</p>.<p>ಶ್ರೀಕ್ಷೇತ್ರ ಶ್ರವಣಬೆಳಗೊಳಕ್ಕೆ ಆಗಮಿಸಿದ್ದ ಭೈರಪ್ಪ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಗಿತ್ತು. ಅಂದಿನ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಭೈರಪ್ಪ ಅವರಿಗೆ ‘ವಿದ್ಯಾವಾಚಸ್ಪತಿ’ ಬಿರುದು ನೀಡಿ ಸನ್ಮಾನಿಸಿ, ‘ಸರಸ್ವತಿ’ ಹಾಗೂ ‘ಬಾಹುಬಲಿ’ ಭಾವಚಿತ್ರ ಮತ್ತು ಗ್ರಂಥ ನೀಡಿ ಗೌರವಿಸಿದ್ದರು.</p>.<p>ಸನ್ಮಾನ ಸ್ವೀಕರಿಸಿದ್ದ ಭೈರಪ್ಪ, ‘ಇಂದ್ರಿಯವನ್ನು ನಿಗ್ರಹಿಸಿದ ಬಾಹುಬಲಿ ಶ್ರೇಷ್ಠ ಎನ್ನಿಸಿಕೊಂಡಿದ್ದಾರೆ. ಸಾಧನೆ ಮಾಡಲು ಜೀವನದಲ್ಲಿ ಸಿದ್ಧಾಂತ ಇರಬೇಕು. ಅಹಿಂಸಾ ತತ್ವವನ್ನು ನೈಜ ಅರ್ಥದಲ್ಲಿ ಅನುಷ್ಠಾನಕ್ಕೆ ತರುವ ಮೂಲಕ ಭಾರತೀಯ ದರ್ಶನಕ್ಕೆ ಜೈನಧರ್ಮ ಪ್ರಮುಖ ಕೊಡುಗೆ ನೀಡಿದೆ’ ಎಂದು ಹೇಳಿದ್ದರು.</p>.<p>'ನಾನು ಕಾದಂಬರಿ ರಚಿಸಲು ಜೈನಧರ್ಮ ಸಾಕಷ್ಟು ಸಹಕಾರಿಯಾಗಿದೆ’ ಎಂದು ಹೇಳಿದ್ದರು.</p>.<p>ಸಮಾಜಕ್ಕೆ ಉಪಯುಕ್ತ ಗ್ರಂಥ ರಚಿಸುವ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಸಾಹಿತಿ ಎಸ್.ಎಲ್. ಭೈರಪ್ಪ ಅನನ್ಯ ಕೊಡುಗೆ ನೀಡಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ನಿರಂತರ ಶ್ರಮದಿಂದ ಶ್ರೇಷ್ಠ ಸಾಧನೆ ಮಾಡಿದ್ದಾರೆ’ ಎಂದು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ</strong>: 2018ರಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಶ್ರವಣಬೆಳಗೊಳದಲ್ಲಿ ಜೈನ ಮಠದವತಿಯಿಂದ ಸಾಹಿತಿ ಎಸ್.ಎಲ್. ಭೈರಪ್ಪ ಅವರನ್ನು ಗೌರವಿಸಲಾಗಿತ್ತು.</p>.<p>ಶ್ರೀಕ್ಷೇತ್ರ ಶ್ರವಣಬೆಳಗೊಳಕ್ಕೆ ಆಗಮಿಸಿದ್ದ ಭೈರಪ್ಪ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಗಿತ್ತು. ಅಂದಿನ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಭೈರಪ್ಪ ಅವರಿಗೆ ‘ವಿದ್ಯಾವಾಚಸ್ಪತಿ’ ಬಿರುದು ನೀಡಿ ಸನ್ಮಾನಿಸಿ, ‘ಸರಸ್ವತಿ’ ಹಾಗೂ ‘ಬಾಹುಬಲಿ’ ಭಾವಚಿತ್ರ ಮತ್ತು ಗ್ರಂಥ ನೀಡಿ ಗೌರವಿಸಿದ್ದರು.</p>.<p>ಸನ್ಮಾನ ಸ್ವೀಕರಿಸಿದ್ದ ಭೈರಪ್ಪ, ‘ಇಂದ್ರಿಯವನ್ನು ನಿಗ್ರಹಿಸಿದ ಬಾಹುಬಲಿ ಶ್ರೇಷ್ಠ ಎನ್ನಿಸಿಕೊಂಡಿದ್ದಾರೆ. ಸಾಧನೆ ಮಾಡಲು ಜೀವನದಲ್ಲಿ ಸಿದ್ಧಾಂತ ಇರಬೇಕು. ಅಹಿಂಸಾ ತತ್ವವನ್ನು ನೈಜ ಅರ್ಥದಲ್ಲಿ ಅನುಷ್ಠಾನಕ್ಕೆ ತರುವ ಮೂಲಕ ಭಾರತೀಯ ದರ್ಶನಕ್ಕೆ ಜೈನಧರ್ಮ ಪ್ರಮುಖ ಕೊಡುಗೆ ನೀಡಿದೆ’ ಎಂದು ಹೇಳಿದ್ದರು.</p>.<p>'ನಾನು ಕಾದಂಬರಿ ರಚಿಸಲು ಜೈನಧರ್ಮ ಸಾಕಷ್ಟು ಸಹಕಾರಿಯಾಗಿದೆ’ ಎಂದು ಹೇಳಿದ್ದರು.</p>.<p>ಸಮಾಜಕ್ಕೆ ಉಪಯುಕ್ತ ಗ್ರಂಥ ರಚಿಸುವ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಸಾಹಿತಿ ಎಸ್.ಎಲ್. ಭೈರಪ್ಪ ಅನನ್ಯ ಕೊಡುಗೆ ನೀಡಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ನಿರಂತರ ಶ್ರಮದಿಂದ ಶ್ರೇಷ್ಠ ಸಾಧನೆ ಮಾಡಿದ್ದಾರೆ’ ಎಂದು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>