<p><strong>ಹಾಸನ: </strong>ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಸಿ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಹೋರಾಟಕ್ಕೆ ಶುಕ್ರವಾರ ತವರು ಜಿಲ್ಲೆಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.</p>.<p>ನಗರದ ಹೇಮಾವತಿ ಪ್ರತಿಮೆಯಿಂದ ಶಾಸಕರು, ಮುಖಂಡರು, ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ವರೆಗೆ ಶಾಂತಿಯುತ ಮೆರವಣಿಗೆ ನಡೆಸಿದರು.</p>.<p>ನಾಯಕರು ಭಾಷಣ ಆರಂಭಿಸುತ್ತಿದ್ದಂತೆ ಮಳೆ ಸುರಿಯತೊಡಗಿತು. ಮಳೆಯನ್ನು ಲೆಕ್ಕಿಸದೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಶಾಸಕರಾದ ಎ.ಟಿ.ರಾಮಸ್ವಾಮಿ, ಕೆ.ಎಸ್.ಲಿಂಗೇಶ್, ಎಚ್.ಡಿ.ರೇವಣ್ಣ, ಸಿ.ಎನ್.ಬಾಲಕೃಷ್ಣ, ಕೆ.ಎಂ.ಶಿವಲಿಂಗೌಡ, ಸಂಸದ ಪ್ರಜ್ವಲ್ ರೇವಣ್ಣ ಅವರ ಭಾಷಣ ಮಾಡಿದರು.</p>.<p>ರೈತ, ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿಗಳನ್ನು ಹಿಂತಗೆದುಕೊಳ್ಳಬೇಕೆಂದು ಆಗ್ರಹಿಸಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಆರ್.ಗಿರೀಶ್ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.</p>.<p>ಎಚ್.ಡಿ.ದೇವೇಗೌಡ ಮಾತನಾಡಿ, ‘ಈ ಮೂರು ಕಾಯಿದೆಗಳು ಜನ ವಿರೋಧಿಯಾಗಿವೆ. ಈ ಬಗ್ಗೆ ರಾಜ್ಯಸಭೆಯಲ್ಲಿ ನಾನು ಹಾಗೂ ಲೋಕಸಭೆಯಲ್ಲಿ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣ ಮಾತನಾಡುವರು. ಎರಡು ದಿನ ಮಾತನಾಡಿ<br />ಸುಮ್ಮನಾಗುವುದಲ್ಲ. ರಾಜ್ಯದ 30 ಜಿಲ್ಲೆಗಳಲ್ಲೂ ಪ್ರವಾಸ ಮಾಡಿ ಜನರಿಗೆ ಜಾಗೃತಿ ಮೂಡಿಸಲಾಗುವುದು. ಇದನ್ನು ಸೇಡಿನ ರಾಜಕಾರಣ ಅಂದುಕೊಳ್ಳಬಾರದು. ರೈತ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ’ಎಂದು ಹೇಳಿದರು.</p>.<p>‘ ರಾಜ್ಯಾದಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಹಾಸನದಿಂದ ಆರಂಭಿಸಲಾಗಿದೆ. ಇನ್ನುಂದೆ ಸುಮ್ಮನೆ<br />ಕುಳಿತುಕೊಳ್ಳುವುದಿಲ್ಲ. ಕೊರೊನಾ ಸೋಂಕು ಹರಡುತ್ತಿದೆ ಹೊರಗೆ ಓಡಾಡಬೇಡಿ ಅಂತ ಸಲಹೆ ನೀಡುತ್ತಾರೆ. ಸಾವು ಯಾವಾಗ ಬರೊತ್ತೊ ಯಾರಿಗೆ ಗೊತ್ತು. ರೈತರ ಭೂಮಿ ಲೂಟಿ ಮಾಡಲು ಅವಕಾಶ ನೀಡುವುದಿಲ್ಲ. ವಿಧಾನಸೌಧ ಎದುರೇ ಹೋರಾಟ ಮಾಡುತ್ತೇನೆ. ಬೇಕಾದರೆ ಬಂಧಿಸಲಿ’ ಎಂದು ಗುಡುಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಸಿ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಹೋರಾಟಕ್ಕೆ ಶುಕ್ರವಾರ ತವರು ಜಿಲ್ಲೆಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.</p>.<p>ನಗರದ ಹೇಮಾವತಿ ಪ್ರತಿಮೆಯಿಂದ ಶಾಸಕರು, ಮುಖಂಡರು, ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ವರೆಗೆ ಶಾಂತಿಯುತ ಮೆರವಣಿಗೆ ನಡೆಸಿದರು.</p>.<p>ನಾಯಕರು ಭಾಷಣ ಆರಂಭಿಸುತ್ತಿದ್ದಂತೆ ಮಳೆ ಸುರಿಯತೊಡಗಿತು. ಮಳೆಯನ್ನು ಲೆಕ್ಕಿಸದೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಶಾಸಕರಾದ ಎ.ಟಿ.ರಾಮಸ್ವಾಮಿ, ಕೆ.ಎಸ್.ಲಿಂಗೇಶ್, ಎಚ್.ಡಿ.ರೇವಣ್ಣ, ಸಿ.ಎನ್.ಬಾಲಕೃಷ್ಣ, ಕೆ.ಎಂ.ಶಿವಲಿಂಗೌಡ, ಸಂಸದ ಪ್ರಜ್ವಲ್ ರೇವಣ್ಣ ಅವರ ಭಾಷಣ ಮಾಡಿದರು.</p>.<p>ರೈತ, ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿಗಳನ್ನು ಹಿಂತಗೆದುಕೊಳ್ಳಬೇಕೆಂದು ಆಗ್ರಹಿಸಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಆರ್.ಗಿರೀಶ್ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.</p>.<p>ಎಚ್.ಡಿ.ದೇವೇಗೌಡ ಮಾತನಾಡಿ, ‘ಈ ಮೂರು ಕಾಯಿದೆಗಳು ಜನ ವಿರೋಧಿಯಾಗಿವೆ. ಈ ಬಗ್ಗೆ ರಾಜ್ಯಸಭೆಯಲ್ಲಿ ನಾನು ಹಾಗೂ ಲೋಕಸಭೆಯಲ್ಲಿ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣ ಮಾತನಾಡುವರು. ಎರಡು ದಿನ ಮಾತನಾಡಿ<br />ಸುಮ್ಮನಾಗುವುದಲ್ಲ. ರಾಜ್ಯದ 30 ಜಿಲ್ಲೆಗಳಲ್ಲೂ ಪ್ರವಾಸ ಮಾಡಿ ಜನರಿಗೆ ಜಾಗೃತಿ ಮೂಡಿಸಲಾಗುವುದು. ಇದನ್ನು ಸೇಡಿನ ರಾಜಕಾರಣ ಅಂದುಕೊಳ್ಳಬಾರದು. ರೈತ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ’ಎಂದು ಹೇಳಿದರು.</p>.<p>‘ ರಾಜ್ಯಾದಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಹಾಸನದಿಂದ ಆರಂಭಿಸಲಾಗಿದೆ. ಇನ್ನುಂದೆ ಸುಮ್ಮನೆ<br />ಕುಳಿತುಕೊಳ್ಳುವುದಿಲ್ಲ. ಕೊರೊನಾ ಸೋಂಕು ಹರಡುತ್ತಿದೆ ಹೊರಗೆ ಓಡಾಡಬೇಡಿ ಅಂತ ಸಲಹೆ ನೀಡುತ್ತಾರೆ. ಸಾವು ಯಾವಾಗ ಬರೊತ್ತೊ ಯಾರಿಗೆ ಗೊತ್ತು. ರೈತರ ಭೂಮಿ ಲೂಟಿ ಮಾಡಲು ಅವಕಾಶ ನೀಡುವುದಿಲ್ಲ. ವಿಧಾನಸೌಧ ಎದುರೇ ಹೋರಾಟ ಮಾಡುತ್ತೇನೆ. ಬೇಕಾದರೆ ಬಂಧಿಸಲಿ’ ಎಂದು ಗುಡುಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>