<p><strong>ಹಾಸನ: </strong>ಜಿಲ್ಲೆಯಲ್ಲಿ ಅಧಿಕ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಸಂದರ್ಭದಲ್ಲಿ ಸಂಭವಿಸಬಹುದಾದ ಅಪಾಯ ಎದುರಿಸಲು ಪ್ರತಿ ತಾಲ್ಲೂಕಿನಲ್ಲಿ ವಿಶೇಷ ತಂಡ ರಚನೆಯಾಗಬೇಕು, ತುರ್ತು ನಿರ್ವಹಣೆಗೆ ಸಹಾಯವಾಣಿಗಳಲ್ಲಿ ದಿನದ 24 ಗಂಟೆಯೂ ಜಾಗೃತರಾಗಿದ್ದು, ಸೇವೆ ಒದಗಿಸಬೇಕು ಎಂದು ತಿಳಿಸಿದರು.</p>.<p>ಸಕಲೇಶಪುರ, ಆಲೂರು, ಬೇಲೂರು ತಾಲ್ಲೂಕುಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಅಗ್ನಿಶಾಮಕದಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಗಳು ಹೆಚ್ಚಿನ ಗಮನಹರಿಸಬೇಕಿದ್ದು, ವಿಕೋಪ ಸಂಭವಿಸಬಹುದಾದ ಸ್ಥಳಗಳಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಬೇಕು ಎಂದರು.</p>.<p>ಪ್ರಕೃತಿ ವಿಕೋಪದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಜನ ಜೀವನ ವ್ಯವಸ್ಥೆ ಗಮನಿಸಲು ಸ್ಥಾಪಿತವಾಗಿರುವ ಸಹಾಯವಾಣಿ ಕೇಂದ್ರಗಳು ಚಾಲ್ತಿಯಲ್ಲಿರುವಂತೆ ಗಮನ ಹರಿಸಬೇಕು. ಸಾರ್ವಜನಿಕರು ಹಾಗೂ ಸಹಾಯವಾಣಿ ಕೇಂದ್ರಗಳಿಂದ ಮಾಹಿತಿ ಸಂಗ್ರಹಿಸಲು ನೆಟ್ವರ್ಕ್ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.</p>.<p>ಮಳೆಯ ಪ್ರಮಾಣ ಹೆಚ್ಚಾಗಿರುವ ಪ್ರದೇಶದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೂಕ್ತ ಮುಂಜಾಗ್ರತಾ ಕ್ರಮ ವಹಿಸಬೇಕು. ಸಕಲೇಶಪುರ, ಆಲೂರು, ಬೇಲೂರು ತಾಲ್ಲೂಕುಗಳಿಗೆ ರಬ್ಬರ್ ಬೋಟ್, ಲೈಟಿಂಗ್, ಪವರ್ ಗರಗಸ ಒದಗಿಸಿ ನಿರಾಶ್ರಿತ ಕೇಂದ್ರಗಳ ವ್ಯವಸ್ಥೆಗೆ ಸೂಕ್ತ ಪರ್ಯಾಯ ಆಯ್ಕೆ ಮಾಡಿಟ್ಟುಕೊಳ್ಳಬೇಕು ಎಂದರು.</p>.<p>ಬಿಸಿಲೆ ಮಾರ್ಗದಲ್ಲಿ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆವರೆಗೆ ವಾಹನ ನಿಷೇಧಿಸಬೇಕು. ಶಿರಾಡಿ ಘಾಟ್ಗಳಲ್ಲಿ ಹೆಚ್ಚಿನ ಭೂಕುಸಿತಗಳು ಸಂಭವಿಸದಂತೆ ಹೆಚ್ಚುವರಿ ತಂಡಗಳು ಸನ್ನದ್ಧವಾಗಿರಬೇಕು. ಅಲ್ಲದೇ, ಹೇಮಾವತಿ ಅಣೆಕಟ್ಟಿಗೆ ಆಗಮಿಸುವ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಅಗ್ನಿ ಶಾಮಕ ಇಲಾಖೆಗೆ ಅಗತ್ಯವಿರುವ ರಕ್ಷಣ ಸಾಧನ ಒದಗಿಸಲಾಗುವುದು. ಆರೋಗ್ಯ ಇಲಾಖೆ ಎಲ್ಲಾ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಔಷಧೋಪಚಾರಗಳೊಂದಿಗೆ ಸಿದ್ದರಾಗಿರಬೇಕು ಎಂದು ಅಕ್ರಂ ಪಾಷ ಹೇಳಿದರು.</p>.<p>ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಗಾಗಲೇ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ಒದಗಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಜಿಲ್ಲೆಯಲ್ಲಿ ಅಧಿಕ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಸಂದರ್ಭದಲ್ಲಿ ಸಂಭವಿಸಬಹುದಾದ ಅಪಾಯ ಎದುರಿಸಲು ಪ್ರತಿ ತಾಲ್ಲೂಕಿನಲ್ಲಿ ವಿಶೇಷ ತಂಡ ರಚನೆಯಾಗಬೇಕು, ತುರ್ತು ನಿರ್ವಹಣೆಗೆ ಸಹಾಯವಾಣಿಗಳಲ್ಲಿ ದಿನದ 24 ಗಂಟೆಯೂ ಜಾಗೃತರಾಗಿದ್ದು, ಸೇವೆ ಒದಗಿಸಬೇಕು ಎಂದು ತಿಳಿಸಿದರು.</p>.<p>ಸಕಲೇಶಪುರ, ಆಲೂರು, ಬೇಲೂರು ತಾಲ್ಲೂಕುಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಅಗ್ನಿಶಾಮಕದಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಗಳು ಹೆಚ್ಚಿನ ಗಮನಹರಿಸಬೇಕಿದ್ದು, ವಿಕೋಪ ಸಂಭವಿಸಬಹುದಾದ ಸ್ಥಳಗಳಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಬೇಕು ಎಂದರು.</p>.<p>ಪ್ರಕೃತಿ ವಿಕೋಪದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಜನ ಜೀವನ ವ್ಯವಸ್ಥೆ ಗಮನಿಸಲು ಸ್ಥಾಪಿತವಾಗಿರುವ ಸಹಾಯವಾಣಿ ಕೇಂದ್ರಗಳು ಚಾಲ್ತಿಯಲ್ಲಿರುವಂತೆ ಗಮನ ಹರಿಸಬೇಕು. ಸಾರ್ವಜನಿಕರು ಹಾಗೂ ಸಹಾಯವಾಣಿ ಕೇಂದ್ರಗಳಿಂದ ಮಾಹಿತಿ ಸಂಗ್ರಹಿಸಲು ನೆಟ್ವರ್ಕ್ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.</p>.<p>ಮಳೆಯ ಪ್ರಮಾಣ ಹೆಚ್ಚಾಗಿರುವ ಪ್ರದೇಶದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೂಕ್ತ ಮುಂಜಾಗ್ರತಾ ಕ್ರಮ ವಹಿಸಬೇಕು. ಸಕಲೇಶಪುರ, ಆಲೂರು, ಬೇಲೂರು ತಾಲ್ಲೂಕುಗಳಿಗೆ ರಬ್ಬರ್ ಬೋಟ್, ಲೈಟಿಂಗ್, ಪವರ್ ಗರಗಸ ಒದಗಿಸಿ ನಿರಾಶ್ರಿತ ಕೇಂದ್ರಗಳ ವ್ಯವಸ್ಥೆಗೆ ಸೂಕ್ತ ಪರ್ಯಾಯ ಆಯ್ಕೆ ಮಾಡಿಟ್ಟುಕೊಳ್ಳಬೇಕು ಎಂದರು.</p>.<p>ಬಿಸಿಲೆ ಮಾರ್ಗದಲ್ಲಿ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆವರೆಗೆ ವಾಹನ ನಿಷೇಧಿಸಬೇಕು. ಶಿರಾಡಿ ಘಾಟ್ಗಳಲ್ಲಿ ಹೆಚ್ಚಿನ ಭೂಕುಸಿತಗಳು ಸಂಭವಿಸದಂತೆ ಹೆಚ್ಚುವರಿ ತಂಡಗಳು ಸನ್ನದ್ಧವಾಗಿರಬೇಕು. ಅಲ್ಲದೇ, ಹೇಮಾವತಿ ಅಣೆಕಟ್ಟಿಗೆ ಆಗಮಿಸುವ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಅಗ್ನಿ ಶಾಮಕ ಇಲಾಖೆಗೆ ಅಗತ್ಯವಿರುವ ರಕ್ಷಣ ಸಾಧನ ಒದಗಿಸಲಾಗುವುದು. ಆರೋಗ್ಯ ಇಲಾಖೆ ಎಲ್ಲಾ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಔಷಧೋಪಚಾರಗಳೊಂದಿಗೆ ಸಿದ್ದರಾಗಿರಬೇಕು ಎಂದು ಅಕ್ರಂ ಪಾಷ ಹೇಳಿದರು.</p>.<p>ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಗಾಗಲೇ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ಒದಗಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>