ಹಾಸನ: ರಾಜರಾಜೇಶ್ವರಿ ನಗರ ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಮಂಗಳವಾರ ನಗರದ ಹೇಮಾವತಿ ಪ್ರತಿಮೆ ಎದುರು ಸಿಹಿ ಹಂಚಿ ಸಂಭ್ರಮಿಸಿದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಎಸ್.ಕೆ. ವೇಣುಗೋಪಾಲ್ ಮಾತನಾಡಿ, ‘ಕೋವಿಡ್, ಅತಿವೃಷ್ಟಿ ನಡುವೆಯೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗೆ ಎರಡೂ ಕ್ಷೇತ್ರದ ಮತದಾರರು ಮನ್ನಣೆ ನೀಡಿದ್ದಾರೆ. ಕೆ.ಆರ್ ಪೇಟೆಯಂತೆ ಶಿರಾದಲ್ಲಿಯೂ ಬಿ.ವೈ. ವಿಜಯೇಂದ್ರ ಮತ್ತು ಶಾಸಕ ಪ್ರೀತಂ ಜೆ. ಗೌಡರ ತಂತ್ರಗಾರಿಕೆ ಫಲ ನೀಡಿದೆ’ ಎಂದು ಹರ್ಷ ವ್ಯಕ್ತಪಡಿಸಿರು.
ಬಿಹಾರ ವಿಧಾನಸಭೆ ಚುನಾವಣೆಯಲ್ಲೂ ಎನ್ಡಿಎ ಬಹುಮತ ಗಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಬಲ ಹೆಚ್ಚಿದೆ. ಇದೇ ರೀತಿ ಮುಂದಿನ ಎಲ್ಲ ಚುನಾವಣೆಯಲ್ಲಿ ಕೇಸರಿ ಕಲರವ ಮುಂದುವರಿಯಲಿದೆ ಎಂದರು.
ಬಿಜೆಪಿ ಕಾರ್ಯಕರ್ತರಾದ ವಿಕ್ರಂ, ಚಂದ್ರಶೇಖರ್, ರಾಹುಲ್ ಕಿಣಿ, ಸ್ವಾಮಿ, ಅರುಣ್, ರಮೇಶ್ ಹಾಗೂ ಇತರರು ಇದ್ದರು.