<p><strong>ಹಾಸನ:</strong> ‘ದೇಶದಲ್ಲಿ ಬಿಜೆಪಿ ಪಕ್ಷ ಪ್ರಬಲವಾಗಿ ಬೆಳೆದಿದೆ. ನರೇಂದ್ರ ಮೋದಿ ಕಾಲದಲ್ಲಿ 23 ರಾಜ್ಯದಲ್ಲಿ<br />ಬಿಜೆಪಿ ಆಡಳಿತದಲ್ಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರದ್ದು ಯೋಗ್ಯವಾದಂತಹ<br />ಹೇಳಿಕೆ ಅಲ್ಲ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿರುಗೇಟು ನೀಡಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ. ಎಂಬ ಕುಮಾರಸ್ವಾಮಿ ಹೇಳಿಕೆ ಹಾಸ್ಯಸ್ಪದವಾಗಿದೆ. ನರೇಂದ್ರ ಮೋದಿ ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ<br />ಎಂದು ಹೇಳಿದಾಗ ಎಲ್ಲರೂ ಹಾಸ್ಯ ಮಾಡುತ್ತಿದ್ದರು. ಇವತ್ತು ಕಾಂಗ್ರೆಸ್ ಮುಕ್ತ ರಾಜ್ಯವಾಗಿದೆ. ಒಂದು ರಾಜ್ಯ<br />ಬಿಟ್ಟರೆ ಕಾಂಗ್ರೆಸ್ ಎಲ್ಲಿದೆ ಎಂದು ಪ್ರಶ್ನಿಸಿದರು.</p>.<p>ಸಚಿವ ಸುಧಾಕರ್ ವಿರುದ್ಧ ಶಾಸಕ ರೇಣುಕಾಚಾರ್ಯ ಅಸಮಾಧಾನಗೊಂಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ<br />ಅವರು, ಬಿಜೆಪಿಯಲ್ಲಾಗಲಿ, ಸರ್ಕಾರದಲ್ಲಾಗಲಿ ಯಾವುದೇ ಗೊಂದಲವಿಲ್ಲ. ಅಸಮಾಧಾನ ಇದ್ದರೆ,<br />ಕೆಲಸಗಳಲ್ಲಿ ತೊಂದರೆಯಿದ್ದರೆ ಮುಖ್ಯಮಂತ್ರಿ ಜೊತೆ ಮಾತನಾಡಿ ಬಗೆಹರಿಸಿಕೊಳ್ಳಬೇಕು ಎಂದು ಶಾಸಕರಿಗೆ<br />ಮನವಿ ಮಾಡಿದರು.</p>.<p>ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಂಕಷ್ಟಗಳ ಸರಮಾಲೆ ಎದುರಿಸಿದೆ.<br />ಅಧಿಕಾರ ವಹಿಸಿಕೊಂಡ ಕೂಡಲೇ ಪ್ರವಾಹದಿಂದ ₹35 ಸಾವಿರ ಕೋಟಿ ಹಾನಿಯಾಯಿತು. ರಸ್ತೆ, ಮನೆ,<br />ಸಾರ್ವಜನಿಕ ಆಸ್ತಿ ಪಾಸ್ತಿಗಳು ನಷ್ಟವಾಯಿತು. 2020-21 ಸಾಲಿನಲ್ಲಿ ಮತ್ತೆ ಮಳೆಯಿಂದ ₹25 ಸಾವಿರ<br />ಕೋಟಿ ನಷ್ಟವಾಯಿತು. ಕೇಂದ್ರ ಸರ್ಕಾರ ಮೊದಲ ಕಂತಿನಲ್ಲಿ ₹517 ಕೋಟಿ ಪರಿಹಾರ ಬಿಡುಗಡೆ<br />ಮಾಡಿದೆ. ಎರಡನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದರು.</p>.<p>ಕಳೆದ ವರ್ಷ ಕೊರೊನಾ ಸಂಕಷ್ಟ ಎದುರಾಯಿತು. ರಾಜ್ಯ ಸರ್ಕಾರ ಜನರಿಗೆ ಹೆಚ್ಚು ತೊಂದರೆ ಆಗದಂತೆ<br />ನಿರ್ವಹಣೆ ಮಾಡಿದೆ. ಕಳೆದ ವರ್ಷ ನಿರೀಕ್ಷೆ ಮಾಡಿದಷ್ಟು ಆದಾಯ ಬರಲಿಲ್ಲ. ಕೋವಿಡ್ನಿಂದಾಗಿ ವ್ಯಾಪಾರಿಗಳುಸಂಕಷ್ಟಕ್ಕೆ ಒಳಗಾದರು. ಹಲವು ಸಂಕಷ್ಟಗಳ ನಡುವೆಯೂ ಸರ್ಕಾರ ಉತ್ತಮ ಆಡಳಿತ ನೀಡಿದೆ ಎಂದರು.</p>.<p>ಗೋಷ್ಠಿಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ವೇಣುಗೋಪಾಲ್, ಮುಖಂಡ ಚಂದ್ರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ‘ದೇಶದಲ್ಲಿ ಬಿಜೆಪಿ ಪಕ್ಷ ಪ್ರಬಲವಾಗಿ ಬೆಳೆದಿದೆ. ನರೇಂದ್ರ ಮೋದಿ ಕಾಲದಲ್ಲಿ 23 ರಾಜ್ಯದಲ್ಲಿ<br />ಬಿಜೆಪಿ ಆಡಳಿತದಲ್ಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರದ್ದು ಯೋಗ್ಯವಾದಂತಹ<br />ಹೇಳಿಕೆ ಅಲ್ಲ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿರುಗೇಟು ನೀಡಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ. ಎಂಬ ಕುಮಾರಸ್ವಾಮಿ ಹೇಳಿಕೆ ಹಾಸ್ಯಸ್ಪದವಾಗಿದೆ. ನರೇಂದ್ರ ಮೋದಿ ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ<br />ಎಂದು ಹೇಳಿದಾಗ ಎಲ್ಲರೂ ಹಾಸ್ಯ ಮಾಡುತ್ತಿದ್ದರು. ಇವತ್ತು ಕಾಂಗ್ರೆಸ್ ಮುಕ್ತ ರಾಜ್ಯವಾಗಿದೆ. ಒಂದು ರಾಜ್ಯ<br />ಬಿಟ್ಟರೆ ಕಾಂಗ್ರೆಸ್ ಎಲ್ಲಿದೆ ಎಂದು ಪ್ರಶ್ನಿಸಿದರು.</p>.<p>ಸಚಿವ ಸುಧಾಕರ್ ವಿರುದ್ಧ ಶಾಸಕ ರೇಣುಕಾಚಾರ್ಯ ಅಸಮಾಧಾನಗೊಂಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ<br />ಅವರು, ಬಿಜೆಪಿಯಲ್ಲಾಗಲಿ, ಸರ್ಕಾರದಲ್ಲಾಗಲಿ ಯಾವುದೇ ಗೊಂದಲವಿಲ್ಲ. ಅಸಮಾಧಾನ ಇದ್ದರೆ,<br />ಕೆಲಸಗಳಲ್ಲಿ ತೊಂದರೆಯಿದ್ದರೆ ಮುಖ್ಯಮಂತ್ರಿ ಜೊತೆ ಮಾತನಾಡಿ ಬಗೆಹರಿಸಿಕೊಳ್ಳಬೇಕು ಎಂದು ಶಾಸಕರಿಗೆ<br />ಮನವಿ ಮಾಡಿದರು.</p>.<p>ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಂಕಷ್ಟಗಳ ಸರಮಾಲೆ ಎದುರಿಸಿದೆ.<br />ಅಧಿಕಾರ ವಹಿಸಿಕೊಂಡ ಕೂಡಲೇ ಪ್ರವಾಹದಿಂದ ₹35 ಸಾವಿರ ಕೋಟಿ ಹಾನಿಯಾಯಿತು. ರಸ್ತೆ, ಮನೆ,<br />ಸಾರ್ವಜನಿಕ ಆಸ್ತಿ ಪಾಸ್ತಿಗಳು ನಷ್ಟವಾಯಿತು. 2020-21 ಸಾಲಿನಲ್ಲಿ ಮತ್ತೆ ಮಳೆಯಿಂದ ₹25 ಸಾವಿರ<br />ಕೋಟಿ ನಷ್ಟವಾಯಿತು. ಕೇಂದ್ರ ಸರ್ಕಾರ ಮೊದಲ ಕಂತಿನಲ್ಲಿ ₹517 ಕೋಟಿ ಪರಿಹಾರ ಬಿಡುಗಡೆ<br />ಮಾಡಿದೆ. ಎರಡನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದರು.</p>.<p>ಕಳೆದ ವರ್ಷ ಕೊರೊನಾ ಸಂಕಷ್ಟ ಎದುರಾಯಿತು. ರಾಜ್ಯ ಸರ್ಕಾರ ಜನರಿಗೆ ಹೆಚ್ಚು ತೊಂದರೆ ಆಗದಂತೆ<br />ನಿರ್ವಹಣೆ ಮಾಡಿದೆ. ಕಳೆದ ವರ್ಷ ನಿರೀಕ್ಷೆ ಮಾಡಿದಷ್ಟು ಆದಾಯ ಬರಲಿಲ್ಲ. ಕೋವಿಡ್ನಿಂದಾಗಿ ವ್ಯಾಪಾರಿಗಳುಸಂಕಷ್ಟಕ್ಕೆ ಒಳಗಾದರು. ಹಲವು ಸಂಕಷ್ಟಗಳ ನಡುವೆಯೂ ಸರ್ಕಾರ ಉತ್ತಮ ಆಡಳಿತ ನೀಡಿದೆ ಎಂದರು.</p>.<p>ಗೋಷ್ಠಿಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ವೇಣುಗೋಪಾಲ್, ಮುಖಂಡ ಚಂದ್ರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>