<p><strong>ಹಾಸನ: </strong>‘ಜೆಡಿಎಸ್ ತ್ಯಜಿಸಿ ಬಿಜೆಪಿ ಸೇರಿದ ನಂತರ ಕೊಟ್ಟ ಮಾತಿನಂತೆ ರಾಜ್ಯ ಮತ್ತು ಕೇಂದ್ರ ನಾಯಕರು ನನಗೆ ಸಚಿವ ಸ್ಥಾನ ನೀಡಿದ್ದಾರೆ’ ಎಂದು ನೂತನ ಸಚಿವ ಕೆ.ಗೋಪಾಲಯ್ಯ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ದೊರಕಿದೆ. ಯಾವುದೇಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ. ಹಾಸನ ಜಿಲ್ಲೆ ಅಥವಾ ಇತರೆ ಯಾವುದೇ ಜಿಲ್ಲೆ ಉಸ್ತುವಾರಿ ನೀಡಿದರೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ. ಖಾತೆ ಹಂಚಿಕೆ ವಿಷಯವಾಗಿ ಮಾತುಕತೆ ನಡೆಯುತ್ತಿದ್ದು, ನಿರ್ದಿಷ್ಟ ಖಾತೆಗೆ ಪಟ್ಟು ಹಿಡಿದಿಲ್ಲ ಎಂದು ಸ್ಪಷ್ಟಪಡಿಸಿದರು.<br /><br />ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದಲ್ಲಿ ಸ್ಥಾನ ಮಾನ ನೀಡುವ ವಿಚಾರವಾಗಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಇದು ಪಕ್ಷದ ಆಂತರಿಕ ವಿಚಾರ ಆಗಿರುವುದರಿಂದ ಹಿರಿಯರು ತೀರ್ಮಾನ ಕೈಗೊಳ್ಳಲಿದ್ದಾರೆ.ಯಡಿಯೂರಪ್ಪ ಅವರು ಪಕ್ಷದ ಕಚೇರಿಗೆ ಭೇಟಿ ನೀಡಿ, ಎರಡು ತಾಸು ಕುಳಿತು ಚರ್ಚೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುತ್ತೇವೆ ಎಂದರು.</p>.<p>ಜಮೀರ್ ಅಹ್ಮದ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ವಿಚಾರ ಕುರಿತ ಪ್ರಶ್ನೆಗೆಉತ್ತರಿಸಿದ ಅವರು, ‘ನಮಗೂ ದಾಳಿಗೂ ಸಂಬಂಧವಿಲ್ಲ, ಈ ಬಗ್ಗೆ ಯಾವುದೇಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.</p>.<p>ಹಾಸನದಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡವಿಚಾರ ಗೊತ್ತಾಗಿದೆ. ಆರೋಗ್ಯ ಇಲಾಖೆಗೆ ಅಗತ್ಯ ಕ್ರಮ ವಹಿಸಲು ಸೂಚನೆನೀಡಲಾಗಿದೆ. ಹಾಸನದಲ್ಲಿ ಸದ್ಯಕ್ಕೆ ವಾರಾಂತ್ಯ ಲಾಕ್ಡೌನ್ ಮಾಡುವ ಚಿಂತನೆ ಇಲ್ಲಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>‘ಜೆಡಿಎಸ್ ತ್ಯಜಿಸಿ ಬಿಜೆಪಿ ಸೇರಿದ ನಂತರ ಕೊಟ್ಟ ಮಾತಿನಂತೆ ರಾಜ್ಯ ಮತ್ತು ಕೇಂದ್ರ ನಾಯಕರು ನನಗೆ ಸಚಿವ ಸ್ಥಾನ ನೀಡಿದ್ದಾರೆ’ ಎಂದು ನೂತನ ಸಚಿವ ಕೆ.ಗೋಪಾಲಯ್ಯ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ದೊರಕಿದೆ. ಯಾವುದೇಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ. ಹಾಸನ ಜಿಲ್ಲೆ ಅಥವಾ ಇತರೆ ಯಾವುದೇ ಜಿಲ್ಲೆ ಉಸ್ತುವಾರಿ ನೀಡಿದರೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ. ಖಾತೆ ಹಂಚಿಕೆ ವಿಷಯವಾಗಿ ಮಾತುಕತೆ ನಡೆಯುತ್ತಿದ್ದು, ನಿರ್ದಿಷ್ಟ ಖಾತೆಗೆ ಪಟ್ಟು ಹಿಡಿದಿಲ್ಲ ಎಂದು ಸ್ಪಷ್ಟಪಡಿಸಿದರು.<br /><br />ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದಲ್ಲಿ ಸ್ಥಾನ ಮಾನ ನೀಡುವ ವಿಚಾರವಾಗಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಇದು ಪಕ್ಷದ ಆಂತರಿಕ ವಿಚಾರ ಆಗಿರುವುದರಿಂದ ಹಿರಿಯರು ತೀರ್ಮಾನ ಕೈಗೊಳ್ಳಲಿದ್ದಾರೆ.ಯಡಿಯೂರಪ್ಪ ಅವರು ಪಕ್ಷದ ಕಚೇರಿಗೆ ಭೇಟಿ ನೀಡಿ, ಎರಡು ತಾಸು ಕುಳಿತು ಚರ್ಚೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುತ್ತೇವೆ ಎಂದರು.</p>.<p>ಜಮೀರ್ ಅಹ್ಮದ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ವಿಚಾರ ಕುರಿತ ಪ್ರಶ್ನೆಗೆಉತ್ತರಿಸಿದ ಅವರು, ‘ನಮಗೂ ದಾಳಿಗೂ ಸಂಬಂಧವಿಲ್ಲ, ಈ ಬಗ್ಗೆ ಯಾವುದೇಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.</p>.<p>ಹಾಸನದಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡವಿಚಾರ ಗೊತ್ತಾಗಿದೆ. ಆರೋಗ್ಯ ಇಲಾಖೆಗೆ ಅಗತ್ಯ ಕ್ರಮ ವಹಿಸಲು ಸೂಚನೆನೀಡಲಾಗಿದೆ. ಹಾಸನದಲ್ಲಿ ಸದ್ಯಕ್ಕೆ ವಾರಾಂತ್ಯ ಲಾಕ್ಡೌನ್ ಮಾಡುವ ಚಿಂತನೆ ಇಲ್ಲಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>