ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೇಲೂರು ತಾಲ್ಲೂಕಿನ ದ್ವಾರಸಮುದ್ರ
ಮತ್ತು ಇತರ 6 ಕೆರೆಗಳಿಗೆ ಕುಡಿಯುವ ನೀರು ಪೂರೈಸುವ ₹ 125 ಕೋಟಿ ವೆಚ್ಚದ ರಣಘಟ್ಟ ನೀರಾವರಿ
ಯೋಜನೆ ಭೂಮಿಪೂಜೆಗೆ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಲಾಗಿದೆ. ಶೀಘ್ರದಲ್ಲಿಯೇ ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಪಡಿಸಲಾಗುವುದು. ಎಚ್.ಡಿ.ಕುಮಾರಸ್ವಾಮಿ ಬಜೆಟ್ನಲ್ಲಿ ನೂರು ಕೋಟಿ ಅನುದಾನ ಘೋಷಣೆ ಮಾಡಿದ್ದರು. ಆದರೆ, ಯಡಿಯೂರಪ್ಪ ಅವರು ಈ ಯೋಜನೆಗೆ ₹ 125 ಕೋಟಿ ಅನುದಾನದ ಜತೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರು’ ಎಂದು ಸ್ಪಷ್ಟಪಡಿಸಿದರು.