<p><strong>ಹಾಸನ</strong>: ಮಂಗಳವಾರ ನಾಪತ್ತೆಯಾಗಿದ್ದ ಬಾಲಕನ ಶವ, ಬುಧವಾರ ನಗರದ ಹೊರವಲಯದ ಎಚ್ಪಿಸಿಎಲ್ ಹಿಂಭಾಗದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.</p>.<p>ಚಿಕ್ಕಹೊನ್ನೇನಹಳ್ಳಿ ಗ್ರಾಮದ ವೆಂಕಟೇಶ್ ಹಾಗೂ ರೂಪಾ ದಂಪತಿ ಪುತ್ರ ಕುಶಾಲ್ಗೌಡ (11) ಮೃತ ಬಾಲಕ. ಬಾಲಕನನ್ನು ಕೊಲೆ ಮಾಡಿ ನಂತರ ರೈಲ್ವೆ ಹಳಿಯ ಬಳಿ ಬಿಸಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.</p>.<p>ಗ್ರಾಮದಲ್ಲಿ ಶಾಲೆ ಮುಗಿಸಿ ಬಂದ ಬಳಿಕ, ಕಣ್ಣ ಮುಚ್ಚಾಲೆ ಆಡುತ್ತಿದ್ದ ವೇಳೆ ಬಚ್ಚಿಟ್ಟುಕೊಳ್ಳಲು ಹೋದ ಕುಶಾಲ್ಗೌಡ ಇದ್ದಕ್ಕಿದ್ದಂತೆ ನಾಪತ್ತೆ ಆಗಿದ್ದ. ಚಿರತೆ ಎಳೆದೊಯ್ದಿರಬಹುದು ಎಂದು ಗ್ರಾಮಸ್ಥರು ಶಂಕಿಸಿದ್ದರು. ಗ್ರಾಮಸ್ಥರು, ಪೋಷಕರು, ಸಂಬಂಧಿಕರು ರಾತ್ರಿ ಹುಡುಕಾಟ ನಡೆಸಿದರೂ ಬಾಲಕನ ಸುಳಿವು ಸಿಕ್ಕಿರಲಿಲ್ಲ.</p>.<p>ಬಾಲಕನನ್ನು ಮೊದಲು ಕೊಲೆ ಮಾಡಿ, ನಂತರ ರೈಲ್ವೆ ಹಳಿಯ ಮೇಲೆ ಎಸೆದಿದ್ದು, ಅಪಘಾತ ಅಥವಾ ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.</p>.<p>ವಿಷಯ ತಿಳಿದ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ತಮ್ಮ ಮಗ ಶವವಾಗಿರುವುದನ್ನು ಕಂಡ ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<p>ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಮಂಗಳವಾರ ನಾಪತ್ತೆಯಾಗಿದ್ದ ಬಾಲಕನ ಶವ, ಬುಧವಾರ ನಗರದ ಹೊರವಲಯದ ಎಚ್ಪಿಸಿಎಲ್ ಹಿಂಭಾಗದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.</p>.<p>ಚಿಕ್ಕಹೊನ್ನೇನಹಳ್ಳಿ ಗ್ರಾಮದ ವೆಂಕಟೇಶ್ ಹಾಗೂ ರೂಪಾ ದಂಪತಿ ಪುತ್ರ ಕುಶಾಲ್ಗೌಡ (11) ಮೃತ ಬಾಲಕ. ಬಾಲಕನನ್ನು ಕೊಲೆ ಮಾಡಿ ನಂತರ ರೈಲ್ವೆ ಹಳಿಯ ಬಳಿ ಬಿಸಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.</p>.<p>ಗ್ರಾಮದಲ್ಲಿ ಶಾಲೆ ಮುಗಿಸಿ ಬಂದ ಬಳಿಕ, ಕಣ್ಣ ಮುಚ್ಚಾಲೆ ಆಡುತ್ತಿದ್ದ ವೇಳೆ ಬಚ್ಚಿಟ್ಟುಕೊಳ್ಳಲು ಹೋದ ಕುಶಾಲ್ಗೌಡ ಇದ್ದಕ್ಕಿದ್ದಂತೆ ನಾಪತ್ತೆ ಆಗಿದ್ದ. ಚಿರತೆ ಎಳೆದೊಯ್ದಿರಬಹುದು ಎಂದು ಗ್ರಾಮಸ್ಥರು ಶಂಕಿಸಿದ್ದರು. ಗ್ರಾಮಸ್ಥರು, ಪೋಷಕರು, ಸಂಬಂಧಿಕರು ರಾತ್ರಿ ಹುಡುಕಾಟ ನಡೆಸಿದರೂ ಬಾಲಕನ ಸುಳಿವು ಸಿಕ್ಕಿರಲಿಲ್ಲ.</p>.<p>ಬಾಲಕನನ್ನು ಮೊದಲು ಕೊಲೆ ಮಾಡಿ, ನಂತರ ರೈಲ್ವೆ ಹಳಿಯ ಮೇಲೆ ಎಸೆದಿದ್ದು, ಅಪಘಾತ ಅಥವಾ ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.</p>.<p>ವಿಷಯ ತಿಳಿದ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ತಮ್ಮ ಮಗ ಶವವಾಗಿರುವುದನ್ನು ಕಂಡ ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<p>ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>