ಅರಕಲಗೂಡು: ಸಕಲೇಶಪುರದಲ್ಲಿ ಮಾ. 12 ರಂದು ನಡೆಯುವ ಬಿಎಸ್ಪಿ ಮೈಸೂರು ವಿಭಾಗ ಮಟ್ಟದ ಸಮಾವೇಶದಲ್ಲಿ 8 ಜಿಲ್ಲೆಗಳ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಜಿಲ್ಲಾ ಘಟಕದ ಅಧ್ಯಕ್ಷ ಅತ್ನಿ ಹರೀಶ್ ತಿಳಿಸಿದರು.
ಪಟ್ಟಣದಲ್ಲಿ ಮಂಗಳವಾರ ನಡೆದ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಮೊದಲಬಾರಿಗೆ ನಡೆಯುತ್ತಿರುವ ಸಮಾವೇಶವು ಜಿಲ್ಲೆಯಲ್ಲಿ ಪಕ್ಷಕ್ಕೆ ಬಲತುಂಬಲು ನೆರವಾಗಲಿದೆ. ತಾಲ್ಲೂಕಿನಿಂದ ಅತ್ಯಂತ ಹೆಚ್ಚಿನ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ತಾಲ್ಲೂಕು ಘಟಕದ ಪದಾಧಿಕಾರಿಗಳು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.