<p><strong>ಹಾಸನ: </strong>ಶಾಲಾ, ಕಾಲೇಜು ಆರಂಭಗೊಂಡಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಬಸ್ ಸೌಲಭ್ಯ ಸರಿಯಾಗಿ<br />ಲಭ್ಯವಾಗದೇ ಇರುವುದರಿಂದ ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ಸಮಯಕ್ಕೆ ಸರಿಯಾಗಿ ತೆರಳಲು<br />ಆಗುತ್ತಿಲ್ಲ.</p>.<p>ಅರಕಲಗೂಡು, ಅರಸೀಕೆರೆ, ಸಕಲೇಶಪುರ, ಬೇಲೂರು ತಾಲ್ಲೂಕುಗಳಲ್ಲಿ ಈ ಸಮಸ್ಯೆ ಹೆಚ್ಚಿದೆ. ಗ್ರಾಮೀಣ<br />ಭಾಗಗಳಿಗೆ ಸೂಕ್ತ ಸಮಯಕ್ಕೆ ಬಸ್ ಸಂಚಾರವಿಲ್ಲದೇ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು<br />ಪರದಾಡುತ್ತಿದ್ದಾರೆ. ಬಸ್ಫುಟ್ ಬೋರ್ಡ್ ಮೇಲೆ ನಿಂತು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಕೋವಿಡ್ ನಂತರ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳ ಸೇವೆಯಲ್ಲಿ ವ್ಯತ್ಯಯವಾಗಿತ್ತು. ಆದರೆ ಈಗ ಸಹಜ ಸ್ಥಿತಿಗೆ ಮರಳುತ್ತಿದೆ. ಹಲವು ಕಡೆ ಬೆಳಿಗ್ಗೆ ಶಾಲಾ, ಕಾಲೇಜುಗಳಿಗೆ ತೆರಳುವ ಸಮಯ ಹಾಗೂ ಸಂಜೆ<br />ತರಗತಿಗಳು ಬಿಡುವ ಸಮಯಕ್ಕೆ ಸರಿಯಾಗಿ ಸಾಕಷ್ಟು ಬಸ್ಗಳು ಇಲ್ಲ. ಇರುವ ಒಂದೆರಡು ಬಸ್ಗಳಲ್ಲೇ<br />ಸಂಚರಿಸಬೇಕಾಗಿದೆ.</p>.<p>ಅರಕಲಗೂಡು ತಾಲ್ಲೂಕಿನ ಸಂತೆ ಮರೂರು, ಉಚ್ಚಂಗಿ ಮತ್ತು ಸುತ್ತಮುತ್ತಲ ಗ್ರಾಮ, ಕೂಡು ರಸ್ತೆಗೆ<br />ಬೆರಳಣಿಕೆ ಬಸ್ಗಳು ಮಾತ್ರ ಸಂಚರಿಸುತ್ತವೆ. ಆ ಬಸ್ಗಳು ಸರಿಯಾದ ಸಮಯಕ್ಕೆ ಬರುವುದಿಲ್ಲ.ಕೆಲ ದಿನಗಳ ಹಿಂದೆ ಸಂತೆಮರೂರು ಗ್ರಾಮದಲ್ಲಿ ವಿದ್ಯಾರ್ಥಿಗಳು ಸಾರಿಗೆ ಬಸ್ ತಡೆದರು. ಚಾಲಕ, ನಿರ್ವಾಹಕಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>‘ಸಾರಿಗೆ ಬಸ್ ಇಲ್ಲದ ಕಾರಣ ನಿತ್ಯ ₹40 ನೀಡಿ ಆಟೊದಲ್ಲಿ ಶಾಲಾ, ಕಾಲೇಜಿಗೆ ಹೋಗಿ ಬರುವ ಸಂಕಷ್ಟ ಪರಿಸ್ಥಿತಿಎದುರಾಗಿದೆ’ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಾರ್ವಜನಿಕ ಕೆಲಸಗಳಿಗೆ, ಶಾಲಾ ಕಾಲೇಜುಗಳಿಗೆ ಹಾಗೂ ಇನ್ನಿತರ ಕೆಲಸಗಳಿಗೆ ಪಟ್ಟಣಕ್ಕೆ ಬರಲು<br />ಗ್ರಾಮಕ್ಕೆ ಬರುವ ಬೆರಳಣಿಕೆಯಷ್ಟು ಬಸ್ಗಳನ್ನೇ ಅವಲಂಬಿಸಬೇಕಿದೆ. ಇಲ್ಲದಿದ್ದರೆ ಆಟೊ, ಲಾರಿ, ಹಿಡಿದು<br />ಪಟ್ಟಣಕ್ಕೆ ಬರಬೇಕಾದ ಅನಿವಾರ್ಯತೆ ಎದುರಾಗಿದೆ.</p>.<p>ಅರಸೀಕೆರೆ ತಾಲ್ಲೂಕಿನಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ನಿತ್ಯ ಬಸ್ಗಾಗಿ ಕಾದು<br />ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅರಸೀಕೆರೆಯಿಂದ ಬಾಣಾವರ ಮತ್ತು ಕಣಕಟ್ಟೆ<br />ಪಂಚನಹಳ್ಳಿ ಮಾರ್ಗವಾಗಿ ಸಂಚರಿಸುವ ಬಸ್ಗಳ ಸಂಖ್ಯೆ ಬೆರಳಣಿಕೆಯಷ್ಟಿದೆ. ಈ ಮಾರ್ಗದಲ್ಲಿ<br />ಸಂಚರಿಸುವ ವೇಗಧೂತ ಬಸ್ಗಳು ಹಳ್ಳಿಗಳಲ್ಲಿ ನಿಲುಗಡೆ ಮಾಡುವುದಿಲ್ಲ. ಕಲ್ಲುಸಾದರಹಳ್ಳಿ, ಕಣಕಟ್ಟೆ,<br />ಸೋಮಶೆಟ್ಟಿಹಳ್ಳಿ ಮಕ್ಕಳು ಬಾಣಾವಾರ ತಲುಪಲು ನಿತ್ಯ ಪರದಾಡುವ ಪರಿಸ್ಥಿತಿ ಇದೆ.</p>.<p>‘ಕೆಎಸ್ಆರ್ಟಿಸಿಯು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಆರಂಭಿಸಿದೆ. ಕಡಿಮೆ ಬಸ್ಗಳು<br />ಇರುವುದರಿಂದ ಬಹುತೇಕ ಬಸ್ಗಳು ಭರ್ತಿಯಾಗಿರುತ್ತವೆ. ಹಾಗಾಗಿ ನಿಲ್ಲುವುದಕ್ಕೂ<br />ಜಾಗ ಇರುವುದಿಲ್ಲ. ಕಷ್ಟ ಪಟ್ಟು ಬಾಗಿಲ ಬಳಿಯೇ ನಿಲ್ಲಬೇಕಾಗುತ್ತದೆ. ಪಾಸ್ ಹೊಂದಿರುವ ವಿದ್ಯಾರ್ಥಿಗಳು ಹೆಚ್ಚು ಮಂದಿ ಇದ್ದರೆ, ಚಾಲಕರು ಬಸ್ಗಳನ್ನು ನಿಲ್ಲಿಸುವುದಿಲ್ಲ’ ಎಂದು ವಿದ್ಯಾರ್ಥಿಗಳು ದೂರುತ್ತಾರೆ.</p>.<p>ಬೇಲೂರು, ಸಕಲೇಶಪು ತಾಲ್ಲೂಕಿನಲ್ಲಿಯೂ ಸಮಸ್ಯೆ ತಪ್ಪಿದಲ್ಲ. ವಿದ್ಯಾರ್ಥಿಗಳು ಬಸ್ ನಿಲ್ದಾಣದ ಅಧಿಕಾರಿಯನ್ನು<br />ಪ್ರಶ್ನಿಸಿದರೆ, ‘ಚಿಕ್ಕಮಗಳೂರು ಡಿಪೋ ಅಧಿಕಾರಿಗಳನ್ನು ಕೇಳಿ’ ಎಂದು ಹೇಳಿ ಕಳುಹಿಸುತ್ತಾರೆ.</p>.<p>‘ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕೆಲವೇ ದಿನಗಳಲ್ಲಿ ಈ ಮಾರ್ಗದಲ್ಲಿ ಬಸ್ಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದುಅರಸೀಕೆರೆಕೆಎಸ್ಆರ್ಟಿಸಿ ಡಿಪೋ ವ್ಯವಸ್ಥಾಪಕಕುಮಾರ್ ತಿಳಿಸಿದರು.</p>.<p>‘ಬಸ್ ಸೌಲಭ್ಯ ಇಲ್ಲದ ಕಾರಣ ಸಾರ್ವಜನಿಕರು ಸೇರಿದಂತೆ ವಿದ್ಯಾರ್ಥಿಗಳಿಗೆ ತೊಂದರೆ ಯಾಗಿದೆ.<br />ಈಗಾಗಲೇ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರಲಿದೆ’ ಎಂದು<br />ಪ್ರಯಾಣಿಕಮಧು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಶಾಲಾ, ಕಾಲೇಜು ಆರಂಭಗೊಂಡಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಬಸ್ ಸೌಲಭ್ಯ ಸರಿಯಾಗಿ<br />ಲಭ್ಯವಾಗದೇ ಇರುವುದರಿಂದ ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ಸಮಯಕ್ಕೆ ಸರಿಯಾಗಿ ತೆರಳಲು<br />ಆಗುತ್ತಿಲ್ಲ.</p>.<p>ಅರಕಲಗೂಡು, ಅರಸೀಕೆರೆ, ಸಕಲೇಶಪುರ, ಬೇಲೂರು ತಾಲ್ಲೂಕುಗಳಲ್ಲಿ ಈ ಸಮಸ್ಯೆ ಹೆಚ್ಚಿದೆ. ಗ್ರಾಮೀಣ<br />ಭಾಗಗಳಿಗೆ ಸೂಕ್ತ ಸಮಯಕ್ಕೆ ಬಸ್ ಸಂಚಾರವಿಲ್ಲದೇ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು<br />ಪರದಾಡುತ್ತಿದ್ದಾರೆ. ಬಸ್ಫುಟ್ ಬೋರ್ಡ್ ಮೇಲೆ ನಿಂತು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಕೋವಿಡ್ ನಂತರ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳ ಸೇವೆಯಲ್ಲಿ ವ್ಯತ್ಯಯವಾಗಿತ್ತು. ಆದರೆ ಈಗ ಸಹಜ ಸ್ಥಿತಿಗೆ ಮರಳುತ್ತಿದೆ. ಹಲವು ಕಡೆ ಬೆಳಿಗ್ಗೆ ಶಾಲಾ, ಕಾಲೇಜುಗಳಿಗೆ ತೆರಳುವ ಸಮಯ ಹಾಗೂ ಸಂಜೆ<br />ತರಗತಿಗಳು ಬಿಡುವ ಸಮಯಕ್ಕೆ ಸರಿಯಾಗಿ ಸಾಕಷ್ಟು ಬಸ್ಗಳು ಇಲ್ಲ. ಇರುವ ಒಂದೆರಡು ಬಸ್ಗಳಲ್ಲೇ<br />ಸಂಚರಿಸಬೇಕಾಗಿದೆ.</p>.<p>ಅರಕಲಗೂಡು ತಾಲ್ಲೂಕಿನ ಸಂತೆ ಮರೂರು, ಉಚ್ಚಂಗಿ ಮತ್ತು ಸುತ್ತಮುತ್ತಲ ಗ್ರಾಮ, ಕೂಡು ರಸ್ತೆಗೆ<br />ಬೆರಳಣಿಕೆ ಬಸ್ಗಳು ಮಾತ್ರ ಸಂಚರಿಸುತ್ತವೆ. ಆ ಬಸ್ಗಳು ಸರಿಯಾದ ಸಮಯಕ್ಕೆ ಬರುವುದಿಲ್ಲ.ಕೆಲ ದಿನಗಳ ಹಿಂದೆ ಸಂತೆಮರೂರು ಗ್ರಾಮದಲ್ಲಿ ವಿದ್ಯಾರ್ಥಿಗಳು ಸಾರಿಗೆ ಬಸ್ ತಡೆದರು. ಚಾಲಕ, ನಿರ್ವಾಹಕಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>‘ಸಾರಿಗೆ ಬಸ್ ಇಲ್ಲದ ಕಾರಣ ನಿತ್ಯ ₹40 ನೀಡಿ ಆಟೊದಲ್ಲಿ ಶಾಲಾ, ಕಾಲೇಜಿಗೆ ಹೋಗಿ ಬರುವ ಸಂಕಷ್ಟ ಪರಿಸ್ಥಿತಿಎದುರಾಗಿದೆ’ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಾರ್ವಜನಿಕ ಕೆಲಸಗಳಿಗೆ, ಶಾಲಾ ಕಾಲೇಜುಗಳಿಗೆ ಹಾಗೂ ಇನ್ನಿತರ ಕೆಲಸಗಳಿಗೆ ಪಟ್ಟಣಕ್ಕೆ ಬರಲು<br />ಗ್ರಾಮಕ್ಕೆ ಬರುವ ಬೆರಳಣಿಕೆಯಷ್ಟು ಬಸ್ಗಳನ್ನೇ ಅವಲಂಬಿಸಬೇಕಿದೆ. ಇಲ್ಲದಿದ್ದರೆ ಆಟೊ, ಲಾರಿ, ಹಿಡಿದು<br />ಪಟ್ಟಣಕ್ಕೆ ಬರಬೇಕಾದ ಅನಿವಾರ್ಯತೆ ಎದುರಾಗಿದೆ.</p>.<p>ಅರಸೀಕೆರೆ ತಾಲ್ಲೂಕಿನಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ನಿತ್ಯ ಬಸ್ಗಾಗಿ ಕಾದು<br />ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅರಸೀಕೆರೆಯಿಂದ ಬಾಣಾವರ ಮತ್ತು ಕಣಕಟ್ಟೆ<br />ಪಂಚನಹಳ್ಳಿ ಮಾರ್ಗವಾಗಿ ಸಂಚರಿಸುವ ಬಸ್ಗಳ ಸಂಖ್ಯೆ ಬೆರಳಣಿಕೆಯಷ್ಟಿದೆ. ಈ ಮಾರ್ಗದಲ್ಲಿ<br />ಸಂಚರಿಸುವ ವೇಗಧೂತ ಬಸ್ಗಳು ಹಳ್ಳಿಗಳಲ್ಲಿ ನಿಲುಗಡೆ ಮಾಡುವುದಿಲ್ಲ. ಕಲ್ಲುಸಾದರಹಳ್ಳಿ, ಕಣಕಟ್ಟೆ,<br />ಸೋಮಶೆಟ್ಟಿಹಳ್ಳಿ ಮಕ್ಕಳು ಬಾಣಾವಾರ ತಲುಪಲು ನಿತ್ಯ ಪರದಾಡುವ ಪರಿಸ್ಥಿತಿ ಇದೆ.</p>.<p>‘ಕೆಎಸ್ಆರ್ಟಿಸಿಯು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಆರಂಭಿಸಿದೆ. ಕಡಿಮೆ ಬಸ್ಗಳು<br />ಇರುವುದರಿಂದ ಬಹುತೇಕ ಬಸ್ಗಳು ಭರ್ತಿಯಾಗಿರುತ್ತವೆ. ಹಾಗಾಗಿ ನಿಲ್ಲುವುದಕ್ಕೂ<br />ಜಾಗ ಇರುವುದಿಲ್ಲ. ಕಷ್ಟ ಪಟ್ಟು ಬಾಗಿಲ ಬಳಿಯೇ ನಿಲ್ಲಬೇಕಾಗುತ್ತದೆ. ಪಾಸ್ ಹೊಂದಿರುವ ವಿದ್ಯಾರ್ಥಿಗಳು ಹೆಚ್ಚು ಮಂದಿ ಇದ್ದರೆ, ಚಾಲಕರು ಬಸ್ಗಳನ್ನು ನಿಲ್ಲಿಸುವುದಿಲ್ಲ’ ಎಂದು ವಿದ್ಯಾರ್ಥಿಗಳು ದೂರುತ್ತಾರೆ.</p>.<p>ಬೇಲೂರು, ಸಕಲೇಶಪು ತಾಲ್ಲೂಕಿನಲ್ಲಿಯೂ ಸಮಸ್ಯೆ ತಪ್ಪಿದಲ್ಲ. ವಿದ್ಯಾರ್ಥಿಗಳು ಬಸ್ ನಿಲ್ದಾಣದ ಅಧಿಕಾರಿಯನ್ನು<br />ಪ್ರಶ್ನಿಸಿದರೆ, ‘ಚಿಕ್ಕಮಗಳೂರು ಡಿಪೋ ಅಧಿಕಾರಿಗಳನ್ನು ಕೇಳಿ’ ಎಂದು ಹೇಳಿ ಕಳುಹಿಸುತ್ತಾರೆ.</p>.<p>‘ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕೆಲವೇ ದಿನಗಳಲ್ಲಿ ಈ ಮಾರ್ಗದಲ್ಲಿ ಬಸ್ಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದುಅರಸೀಕೆರೆಕೆಎಸ್ಆರ್ಟಿಸಿ ಡಿಪೋ ವ್ಯವಸ್ಥಾಪಕಕುಮಾರ್ ತಿಳಿಸಿದರು.</p>.<p>‘ಬಸ್ ಸೌಲಭ್ಯ ಇಲ್ಲದ ಕಾರಣ ಸಾರ್ವಜನಿಕರು ಸೇರಿದಂತೆ ವಿದ್ಯಾರ್ಥಿಗಳಿಗೆ ತೊಂದರೆ ಯಾಗಿದೆ.<br />ಈಗಾಗಲೇ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರಲಿದೆ’ ಎಂದು<br />ಪ್ರಯಾಣಿಕಮಧು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>