ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗೋಪಾಲಪ್ಪ ಮಾತನಾಡಿ, ‘ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬರುವವರ ಎಲ್ಲರ ಮಾಹಿತಿ ಕಲೆ ಹಾಕುತ್ತಿದ್ದೇವೆ. ಲಾಕ್ಡೌನ್ ಜಾರಿಯಾದ ದಿನದಿಂದ ಎಲ್ಲಾ ನಿರಾಶ್ರಿತರಿಗೆ ನಿರಾಶ್ರಿತರ ಕೇಂದ್ರದಲ್ಲಿ ಊಟ ವಸತಿ ಸೇರಿದಂತೆ ಎಲ್ಲಾ ರೀತಿಯ ಮೂಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈಗ ಬಸ್ ಪುನರ್ ಆರಂಭವಾಗಿರುವ ಹಿನ್ನೆಲೆಯಲ್ಲಿ ಇಲ್ಲಿಯ ಬಸ್ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರ ವಿವರ ಮತ್ತು ವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇದಕ್ಕೆಂದೇ ನಮ್ಮ ಇಲಾಖೆ ಸಿಬ್ಬಂದಿಯನ್ನು ಬಸ್ ನಿಲ್ದಾಣಕ್ಕೆ ನಿಯೋಜಿಸಲಾಗಿದೆ. ಮಂಗಳವಾರ ಹಾವೇರಿ, ಗದಗ ಹಾಗೂ ಹುಬ್ಬಳ್ಳಿ ಜಿಲ್ಲೆಗಳಿಗೆ ತೆರಳುತ್ತಿರುವ ವಲಸೆ ಕಾರ್ಮಿಕರಿಗೆ ಮಾರ್ಗ ಮಧ್ಯೆ ಊಟದ ಸಮಸ್ಯೆ ಎದುರಾಗಬಾರದೆಂಬ ಉದ್ದೇಶದಿಂದ ಆಹಾರದ ಪೊಟ್ಟಣ ಕೂಡಾ ನೀಡಲಾಗಿದೆ’ ಎಂದರು.