ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ 97,961 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯುತ್ತಾರೆ. ಅದರಲ್ಲಿ 31,33,381 ಕ್ವಿಂಟಲ್ ತೆಂಗು ಇಳುವರಿ ಇದ್ದು, 3.62 ಲಕ್ಷ ಕ್ವಿಂಟಲ್ ಕೊಬ್ಬರಿ ಬರುತ್ತದೆ. ಇದರಲ್ಲಿ 2.20 ಲಕ್ಷ ಕ್ವಿಂಟಲ್ ಕೊಬ್ಬರಿ ಖರೀದಿ ಮಾಡಲಾಗಿದ್ದು, 1.42 ಲಕ್ಷ ಕ್ವಿಂಟಲ್ ಕೊಬ್ಬರಿ ಖರೀದಿಯಾಗದೇ ಉಳಿದಿದೆ. ಕೇಂದ್ರ ಸರ್ಕಾರ ಇಷ್ಟಕ್ಕೆ ಖರೀದಿ ನಿಲ್ಲಿಸಿ ರೈತರಿಗೆ ಅನ್ಯಾಯ ಮಾಡಿದಂತಾಗಿದೆ ಎಂದು ದೂರಿದರು.