ಹಾಸನಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಆಡಳಿತವನ್ನು ರಾಜ್ಯದ ಜನತೆ ಒಪ್ಪಿದ್ದಾರೆ ಎಂಬುದಕ್ಕೆ ಉಪ ಚುನಾವಣೆಯ ಫಲಿತಾಂಶವೇ ಸಾಕ್ಷಿ. ಆರ್.ಆರ್. ನಗರದಲ್ಲಿ ನಾನೂ ಒಬ್ಬ ಅಭ್ಯರ್ಥಿ ಎಂಬ ರೀತಿಯಲ್ಲಿ ಕೆಲಸ ಮಾಡಿದ್ದೇನೆ. 2018ರ ಚುನಾವಣೆಯಲ್ಲೇ ಬಿಜೆಪಿ 80 ಸಾವಿರ ಮತ ಗಳಿಸಿತ್ತು. ಮುನಿರತ್ನ ಅವರ ಮಾನವೀಯತೆಗೆ ಮತದಾರರು ಬೆಂಬಲ ನೀಡಿದ್ದಾರೆ ಎಂದು ತಿಳಿಸಿದರು.