ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ವಿಸ್ತರಣೆ: ಯಾವುದೇ ಗೊಂದಲ ಇಲ್ಲ

Last Updated 12 ಜನವರಿ 2021, 14:13 IST
ಅಕ್ಷರ ಗಾತ್ರ

ಹಾಸನ: ರಾಜ್ಯ ಸಚಿವ ಸಂಪುಟವಿಸ್ತರಣೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಪುಟದಲ್ಲಿ ಹೊಸಬರು ಇರ್ತಾರೋ ಅಥವಾ ಇಲ್ಲವೋ ಎನ್ನುವುದು ಬುಧವಾರ ಗೊತ್ತಾಗಲಿದೆ. ವಿಸ್ತರಣೆಯಿಂದ ಅಸಮಾಧಾನ ಭುಗಿಲೆದ್ದಿಲ್ಲ, ಬೆಂಕಿಯೂ ಬಿದ್ದಿಲ್ಲ. ಎಲ್ಲರ ಸಹಮತದಿಂದಲೇ ವಿಸ್ತರಣೆಯಾಗುತ್ತಿದೆ ಎಂದರು.

ಮುಖ್ಯಮಂತ್ರಿ ಬದಲಾವಣೆ ಕೇವಲ ಮಾಧ್ಯಮಗಳ ಸೃಷ್ಟಿ. ನಾಯಕತ್ವ ನಿಶ್ಚಯ ಮಾಡುವುದು ಸಿದ್ದರಾಮಯ್ಯನಾಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಮೊದಲು ತಮ್ಮ ಸ್ಥಾನ, ಮಾನ ಉಳಿಸಿಕೊಳ್ಳಲು ಯೋಚಿಸಲಿ ಎಂದು ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT