ಹಾಸನ: ರಾಜ್ಯ ಸಚಿವ ಸಂಪುಟವಿಸ್ತರಣೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಪುಟದಲ್ಲಿ ಹೊಸಬರು ಇರ್ತಾರೋ ಅಥವಾ ಇಲ್ಲವೋ ಎನ್ನುವುದು ಬುಧವಾರ ಗೊತ್ತಾಗಲಿದೆ. ವಿಸ್ತರಣೆಯಿಂದ ಅಸಮಾಧಾನ ಭುಗಿಲೆದ್ದಿಲ್ಲ, ಬೆಂಕಿಯೂ ಬಿದ್ದಿಲ್ಲ. ಎಲ್ಲರ ಸಹಮತದಿಂದಲೇ ವಿಸ್ತರಣೆಯಾಗುತ್ತಿದೆ ಎಂದರು.
ಮುಖ್ಯಮಂತ್ರಿ ಬದಲಾವಣೆ ಕೇವಲ ಮಾಧ್ಯಮಗಳ ಸೃಷ್ಟಿ. ನಾಯಕತ್ವ ನಿಶ್ಚಯ ಮಾಡುವುದು ಸಿದ್ದರಾಮಯ್ಯನಾಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಮೊದಲು ತಮ್ಮ ಸ್ಥಾನ, ಮಾನ ಉಳಿಸಿಕೊಳ್ಳಲು ಯೋಚಿಸಲಿ ಎಂದು ತಿರುಗೇಟು ನೀಡಿದರು.