<p><strong>ಹಾಸನ</strong>: ಕೆನಡಾ ವಾಟರ್ ಶೃಂಗಸಭೆಯು ಕೊಡ ಮಾಡುವ ವಾಟರ್ ನೆಕ್ಸ್ಟ್ 2020 ವಾರ್ಷಿಕ ಪ್ರಶಸ್ತಿಗೆ ಕನ್ನಡತಿ ಚಿತ್ರ ಗೌಡ ಆಯ್ಕೆಯಾಗಿದ್ದಾರೆ.</p>.<p>ನೀರಿನ ಕಾರ್ಯ ಕ್ಷೇತ್ರದಲ್ಲಿ ತಂತ್ರಜ್ಞಾನ ಮತ್ತು ಯೋಜನೆಗಳ ಮೂಲಕ ಮಹತ್ವದ ಕೊಡುಗೆ ನೀಡಿದ ಸಾಧಕರನ್ನು ಗುರುತಿಸಿ ನೀಡುವ ಈ ಪ್ರಶಸ್ತಿಗೆ ಮೊಟ್ಟ ಮೊದಲ ಬಾರಿಗೆ ಕನ್ನಡತಿ ಆಯ್ಕೆಯಾಗಿರುವುದು ವಿಶೇಷ.</p>.<p>ಚಿತ್ರ ಗೌಡ , ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ತಗಡೂರು ಗ್ರಾಮದ (ಪುರುದೇಗೌಡರ ಮನೆ) ಡಾ.ಹಾಲಪ್ಪಗೌಡ ಮತ್ತು ರತ್ನಮ್ಮ ಅವರ ಸುಪುತ್ರಿ.</p>.<p>ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿ ಪರಿಸರ ಎಂಜಿನಿಯರಿಂಗ್ ಮುಗಿಸಿದ ಚಿತ್ರ, ಉದ್ಯೋಗ ನಿಮಿತ್ತ ಕೆನಡಾದಲ್ಲಿ<br />ನೆಲೆಸಿದ್ದಾರೆ. ನೀರು ಸಂರಕ್ಷಣೆ, ಜಲಾನಯನ ಮೇಲ್ವಿಚಾರಣೆ ಮತ್ತು ಯೋಜನೆ, ಹವಾಮಾನ ಬದಲಾವಣೆಯ ಮೌಲ್ಯಮಾಪನ, ನೀರಿನ ನೀತಿಗೆ ಸಂಬಂಧಿಸಿದ ಕಾರ್ಯಕ್ರಮಗಳ ಸಂಬಂಧಿಸಿದಂತೆ ಕೆನಡಾದಲ್ಲಿ ಪ್ರಾಂತೀಯ ಸರ್ಕಾರ, ಪುರಸಭೆ ಮತ್ತು ಸಂಘ ಸಂಸ್ಥೆಗಳ ಜೊತೆಯಲ್ಲಿ ಸುಮಾರು 20 ವರ್ಷಗಳಿಂದ ಚಿತ್ರ ಕೆಲಸ ಮಾಡುತ್ತಿದ್ದಾರೆ.</p>.<p>ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಚಿತ್ರ, ‘ಈ ಸಾಧನೆ ಗೌರವವನ್ನು ತಂದೆ ಹಾಲಪ್ಪಗೌಡ ಅವರಿಗೆ ಸಮರ್ಪಣೆ ಮಾಡುವುದಾಗಿ’ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಕೆನಡಾ ವಾಟರ್ ಶೃಂಗಸಭೆಯು ಕೊಡ ಮಾಡುವ ವಾಟರ್ ನೆಕ್ಸ್ಟ್ 2020 ವಾರ್ಷಿಕ ಪ್ರಶಸ್ತಿಗೆ ಕನ್ನಡತಿ ಚಿತ್ರ ಗೌಡ ಆಯ್ಕೆಯಾಗಿದ್ದಾರೆ.</p>.<p>ನೀರಿನ ಕಾರ್ಯ ಕ್ಷೇತ್ರದಲ್ಲಿ ತಂತ್ರಜ್ಞಾನ ಮತ್ತು ಯೋಜನೆಗಳ ಮೂಲಕ ಮಹತ್ವದ ಕೊಡುಗೆ ನೀಡಿದ ಸಾಧಕರನ್ನು ಗುರುತಿಸಿ ನೀಡುವ ಈ ಪ್ರಶಸ್ತಿಗೆ ಮೊಟ್ಟ ಮೊದಲ ಬಾರಿಗೆ ಕನ್ನಡತಿ ಆಯ್ಕೆಯಾಗಿರುವುದು ವಿಶೇಷ.</p>.<p>ಚಿತ್ರ ಗೌಡ , ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ತಗಡೂರು ಗ್ರಾಮದ (ಪುರುದೇಗೌಡರ ಮನೆ) ಡಾ.ಹಾಲಪ್ಪಗೌಡ ಮತ್ತು ರತ್ನಮ್ಮ ಅವರ ಸುಪುತ್ರಿ.</p>.<p>ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿ ಪರಿಸರ ಎಂಜಿನಿಯರಿಂಗ್ ಮುಗಿಸಿದ ಚಿತ್ರ, ಉದ್ಯೋಗ ನಿಮಿತ್ತ ಕೆನಡಾದಲ್ಲಿ<br />ನೆಲೆಸಿದ್ದಾರೆ. ನೀರು ಸಂರಕ್ಷಣೆ, ಜಲಾನಯನ ಮೇಲ್ವಿಚಾರಣೆ ಮತ್ತು ಯೋಜನೆ, ಹವಾಮಾನ ಬದಲಾವಣೆಯ ಮೌಲ್ಯಮಾಪನ, ನೀರಿನ ನೀತಿಗೆ ಸಂಬಂಧಿಸಿದ ಕಾರ್ಯಕ್ರಮಗಳ ಸಂಬಂಧಿಸಿದಂತೆ ಕೆನಡಾದಲ್ಲಿ ಪ್ರಾಂತೀಯ ಸರ್ಕಾರ, ಪುರಸಭೆ ಮತ್ತು ಸಂಘ ಸಂಸ್ಥೆಗಳ ಜೊತೆಯಲ್ಲಿ ಸುಮಾರು 20 ವರ್ಷಗಳಿಂದ ಚಿತ್ರ ಕೆಲಸ ಮಾಡುತ್ತಿದ್ದಾರೆ.</p>.<p>ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಚಿತ್ರ, ‘ಈ ಸಾಧನೆ ಗೌರವವನ್ನು ತಂದೆ ಹಾಲಪ್ಪಗೌಡ ಅವರಿಗೆ ಸಮರ್ಪಣೆ ಮಾಡುವುದಾಗಿ’ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>