ಕೆ.ಆರ್. ನಗರದಿಂದ ಹಾಸನಕ್ಕೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ತೆಂಗಿನ ಮರಕ್ಕೆ ಗುದ್ದಿ ಸ್ವಾಮಿಗೌಡ ಅವರ ಮನೆಯ ಮೇಲೆ ಉರುಳಿ ಬಿದ್ದಿದೆ. ಇದರಿಂದ ಹೆಂಚುಗಳು ಮನೆಯಲ್ಲಿ ಮಲಗಿದ್ದ ಲಕ್ಷ್ಮಮ್ಮ ಅವರ ಮೇಲೆ ಬಿದ್ದು ಸಣ್ಣ ಪುಟ್ಟಗಾಯಗಳಾಗಿವೆ. ನಂತರ ಕಾರುವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಕಂಬವೂ ಮುರಿದು ಬಿದ್ದಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗದಲ್ಲಿ ಕುಳಿತಿದ್ದ ಇಬ್ಬರಿಗೆ ಸಣ್ಣ ಪುಟ್ಟಗಾಯಗಳಾಗಿದ್ದು ಚಿಕಿತ್ಸೆಗಾಗಿ ಹಾಸನಕ್ಕೆ ಕರೆದೊಯ್ಯಲಾಗಿದೆ.