ಕ್ರಮಕ್ಕೆ ಆಗ್ರಹ: ಒಂದು ತಿಂಗಳ ಹಿಂದಷ್ಟೇ ಯಸಳೂರು ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆಯಾಗಿತ್ತು. ಅದು ಗುಂಡೇಟಿನಿಂದಲೇ ಮೃತಪಟ್ಟಿದ್ದರೂ ಅರಣ್ಯ ಇಲಾಖೆ ಸರಿಯಾಗಿ ತನಿಖೆ ನಡೆಸಲಿಲ್ಲ. ಅತ್ತಿಹಳ್ಳಿಯಲ್ಲಿ ಪತ್ತೆಯಾಗಿರುವ ಕಾಡಾನೆ ಸಹ ಗುಂಡೇಟಿನಿಂದಲೇ ಮೃತಪಟ್ಟಿರುವ ಸಾಧ್ಯತೆ ಹೆಚ್ಚಿದೆ’ ಎಂದು ಮಲೆನಾಡು ಹೋರಾಟ ಸಮಿತಿ ಅಧ್ಯಕ್ಷ ಎಚ್.ಎಂ. ಕಿಶೋರ್ ಅನುಮಾನ ವ್ಯಕ್ತಪಡಿಸಿದರು.