<p><strong>ಕೊಣನೂರು</strong>: ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಗಾಳಿ, ಮಳೆಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳು ಉರುಳಿವೆ. ಕಾವೇರಿ ನದಿಯ ಉಕ್ಕಿ ಹರಿಯುತ್ತಿದ್ದು, ಕೆಲವೆಡೆ ನೀರು ಹೊಲಗಳಿಗೆ ನುಗ್ಗಿದೆ.</p>.<p>ನದಿಯಂಚಿನ ತಗ್ಗು ಪ್ರದೇಶಗಳಗೆ ನೀರು ನುಗ್ಗತ್ತಿದೆ. ಶನಿವಾರ ರಾತ್ರಿ ಬೀಸಿದ ಬಿರುಗಾಳಿಗೆ ಕೆಸವತ್ತೂರಿನಲ್ಲಿ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದಿದ್ದು, 10 ವಿದ್ಯುತ್ ಕಂಬಗಳು ಮುರಿದಿವೆ.</p>.<p>ಕೊಡಗಿನ ಹಾರಂಗಿ ಅಣೆಕಟ್ಟೆಯಿಂದ ಹೆಚ್ಚಿನ ನೀರನ್ನು ಕಾವೇರಿ ನದಿಗೆ ಹರಿಸುತ್ತಿರುವುದರಿಂದ ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿದೆ. ಇದರಿಂದ ಕೊಣನೂರು ಮತ್ತು ರಾಮನಾಥಪುರ ಹೋಬಳಿಗಳ ವ್ಯಾಪ್ತಿಯ ಅನೇಕ ಗ್ರಾಮಗಳ ನದಿಯಂಚಿನ ತಗ್ಗು ಪ್ರದೇಶಗಳು ಜಲಾವೃತವಾಗಿವೆ.</p>.<p>ಕಡವಿನಹೊಸಹಳ್ಳಿ, ಬಾನಗುಂದಿ, ವಡ್ವಾಣಹೊಸಳ್ಳಿ, ಕಟ್ಟೇಪುರ, ಗೊಬ್ಬಳಿ, ಮಾದಾಪುರ ಸೇರಿದಂತೆ ವಿವಿಧ ಗ್ರಾಮಗಳ ಹತ್ತಾರು ಎಕರೆಯಲ್ಲಿನ ಅಡಿಕೆ, ತೆಂಗು, ಶುಂಠಿ, ಜೋಳದ ಮತ್ತು ತಂಬಾಕು ಬೆಳೆಗಳು ಜಲಾವೃತವಾಗಿವೆ.</p>.<p>ಕಟ್ಟೇಪುರದ ಕೃಷ್ಣರಾಜ ಅಣೆಕಟ್ಟೆ ಹಿನ್ನೀರಿನಿಂದ ಬಂಡಿಪಾಳ್ಯ ಗ್ರಾಮಕ್ಕೆ ಹೋಗುವ ಸಂಪರ್ಕ ರಸ್ತೆ ಜಲಾವೃತವಾಗಿದೆ. ಪಕ್ಕದ ಅಡಿಕೆ ತೋಟ ಹಾಗೂ ಶುಂಠಿ ಹೊಲದಲ್ಲಿ ನೀರು ನಿಂತಿದೆ.</p>.<p>ಪುಣ್ಯಕ್ಷೇತ್ರ ರಾಮನಾಥಪುರದ ಕಾವೇರಿ ಸ್ನಾನಘಟ್ಟ ನೀರಿನಲ್ಲಿ ಮುಳುಗಿದ್ದು, ಘಟ್ಟಕ್ಕೆ ಇಳಿಯುವ ಮೆಟ್ಟಿಲುಗಳು ಬಹುತೇಕ ಜಲಾವೃತವಾಗಿವೆ.</p>.<p>ಕಟ್ಟೆಪುರದ ಕೃಷ್ಣರಾಜ ಅಣೆಕಟ್ಟೆಯ ಮೇಲಿನಿಂದ ರಭಸವಾಗಿ ನೀರು ಹರಿಯುತ್ತಿದ್ದು, ನೋಡುಗರನ್ನು ಸೆಳೆಯುತ್ತಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸುತ್ತಲಿನ ಗ್ರಾಮಗಳ ಜನರು ಬರುತ್ತಿದ್ದು, ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಣನೂರು</strong>: ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಗಾಳಿ, ಮಳೆಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳು ಉರುಳಿವೆ. ಕಾವೇರಿ ನದಿಯ ಉಕ್ಕಿ ಹರಿಯುತ್ತಿದ್ದು, ಕೆಲವೆಡೆ ನೀರು ಹೊಲಗಳಿಗೆ ನುಗ್ಗಿದೆ.</p>.<p>ನದಿಯಂಚಿನ ತಗ್ಗು ಪ್ರದೇಶಗಳಗೆ ನೀರು ನುಗ್ಗತ್ತಿದೆ. ಶನಿವಾರ ರಾತ್ರಿ ಬೀಸಿದ ಬಿರುಗಾಳಿಗೆ ಕೆಸವತ್ತೂರಿನಲ್ಲಿ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದಿದ್ದು, 10 ವಿದ್ಯುತ್ ಕಂಬಗಳು ಮುರಿದಿವೆ.</p>.<p>ಕೊಡಗಿನ ಹಾರಂಗಿ ಅಣೆಕಟ್ಟೆಯಿಂದ ಹೆಚ್ಚಿನ ನೀರನ್ನು ಕಾವೇರಿ ನದಿಗೆ ಹರಿಸುತ್ತಿರುವುದರಿಂದ ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿದೆ. ಇದರಿಂದ ಕೊಣನೂರು ಮತ್ತು ರಾಮನಾಥಪುರ ಹೋಬಳಿಗಳ ವ್ಯಾಪ್ತಿಯ ಅನೇಕ ಗ್ರಾಮಗಳ ನದಿಯಂಚಿನ ತಗ್ಗು ಪ್ರದೇಶಗಳು ಜಲಾವೃತವಾಗಿವೆ.</p>.<p>ಕಡವಿನಹೊಸಹಳ್ಳಿ, ಬಾನಗುಂದಿ, ವಡ್ವಾಣಹೊಸಳ್ಳಿ, ಕಟ್ಟೇಪುರ, ಗೊಬ್ಬಳಿ, ಮಾದಾಪುರ ಸೇರಿದಂತೆ ವಿವಿಧ ಗ್ರಾಮಗಳ ಹತ್ತಾರು ಎಕರೆಯಲ್ಲಿನ ಅಡಿಕೆ, ತೆಂಗು, ಶುಂಠಿ, ಜೋಳದ ಮತ್ತು ತಂಬಾಕು ಬೆಳೆಗಳು ಜಲಾವೃತವಾಗಿವೆ.</p>.<p>ಕಟ್ಟೇಪುರದ ಕೃಷ್ಣರಾಜ ಅಣೆಕಟ್ಟೆ ಹಿನ್ನೀರಿನಿಂದ ಬಂಡಿಪಾಳ್ಯ ಗ್ರಾಮಕ್ಕೆ ಹೋಗುವ ಸಂಪರ್ಕ ರಸ್ತೆ ಜಲಾವೃತವಾಗಿದೆ. ಪಕ್ಕದ ಅಡಿಕೆ ತೋಟ ಹಾಗೂ ಶುಂಠಿ ಹೊಲದಲ್ಲಿ ನೀರು ನಿಂತಿದೆ.</p>.<p>ಪುಣ್ಯಕ್ಷೇತ್ರ ರಾಮನಾಥಪುರದ ಕಾವೇರಿ ಸ್ನಾನಘಟ್ಟ ನೀರಿನಲ್ಲಿ ಮುಳುಗಿದ್ದು, ಘಟ್ಟಕ್ಕೆ ಇಳಿಯುವ ಮೆಟ್ಟಿಲುಗಳು ಬಹುತೇಕ ಜಲಾವೃತವಾಗಿವೆ.</p>.<p>ಕಟ್ಟೆಪುರದ ಕೃಷ್ಣರಾಜ ಅಣೆಕಟ್ಟೆಯ ಮೇಲಿನಿಂದ ರಭಸವಾಗಿ ನೀರು ಹರಿಯುತ್ತಿದ್ದು, ನೋಡುಗರನ್ನು ಸೆಳೆಯುತ್ತಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸುತ್ತಲಿನ ಗ್ರಾಮಗಳ ಜನರು ಬರುತ್ತಿದ್ದು, ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>