ಇದೇ ತಿಂಗಳ 11 ರಂದು ಹೊರ ಬೀಳುವ ಪಂಚರಾಜ್ಯಗಳ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ ದೇವೇಗೌಡರು, ‘ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯ ವಾತಾವರಣ ಇದೆ. ರಾಜಾಸ್ಥಾನದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸುವ ಸಾಧ್ಯತೆ ಹೆಚ್ಚಿದೆ. ಆದರೆ ಉಳಿದ ಕಡೆಗಳಲ್ಲಿ ಅತಂತ್ರ ಪರಿಸ್ಥಿತಿ ಇದೆ. ಒಂದು ವೇಳೆ ಐದೂ ರಾಜ್ಯಗಳಲ್ಲಿ ಜನರು ಒಂದೇ ಪಕ್ಷದ ಕಡೆ ತೀರ್ಪು ನೀಡಿದರೆ, ಅದರ ಪರಿಣಾಮ ಮುಂದಿನ ಲೋಕಸಭೆ ಚುಬಾವಣೆ ಮೇಲೆ ಬೀರಲಿದೆ’ ಎಂದು ಪ್ರಶ್ನೆಗೆ ಉತ್ತರಿಸಿದರು.