ಇದಾದ ಬಳಿಕ ಪೊಲೀಸ್ ವರಿಷ್ಠಾಧಿಕಾರಿಗೂ ದೂರು ನೀಡಿರುವ ರಾಜು ಮತ್ತು ಮಾಯಣ್ಣ, ‘ಕೆಲವರಿಗೆ ಹೊಳೆನರಸೀಪುರ ಪುರಸಭೆ ವ್ಯಾಪ್ತಿಯಲ್ಲಿ ಓಟರ್ ಐಡಿ ಇದ್ದರೂ, ಪಡುವಲಹಿಪ್ಪೆಗೆ ಬಂದು ಅಕ್ರಮ ಮತದಾನ ಮಾಡಿದ್ದಾರೆ. ಹೀಗಿದ್ದರೂ, ಅಲ್ಲಿದ್ದ ಅಧಿಕಾರಿ ಯಾವುದೇ ಕ್ರಮ ಜರುಗಿಸಿಲ್ಲ. ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿಯನ್ನು ಡಿಸಿ ಅವರು ಪರಿಶೀಲಿಸಿದ್ದಾರೆ. ಅಕ್ರಮ ಮತದಾನ ಮಾಡಿದ ಹಾಗೂ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಚುನಾವಣಾ ಅಧಿಕಾರಿಗಳ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.