<p><strong>ಹಳೇಬೀಡು</strong>: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ.ಸುರೇಶ್ ಅವರು ಕೋವಿಡ್ ನಿಯಮ ಉಲ್ಲಂಘಿಸಿ ಶುಕ್ರವಾರ ರಾತ್ರಿ ಹುಟ್ಟುಹಬ್ಬವನ್ನು ಬೇಲೂರು ಹಾಗೂ ಹಗರೆಯಲ್ಲಿ ಅದ್ದೂರಿಯಾಗಿ ಆಚರಿಸಿಕೊಂಡಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.</p>.<p>ಬೇಲೂರಿನಲ್ಲಿ ಬಸವೇಶ್ವರ ವೃತ್ತದಿಂದ ತೆರೆದ ವಾಹನದಲ್ಲಿ ಚನ್ನಕೇಶವ ದೇವಾಲಯದವರೆಗೆ ಮೆರವಣಿಗೆ ನಡೆಸಿದ್ದಾರೆ. ನೂರಾರು ಮಂದಿ ಭಾಗವಹಿಸಿದ್ದು, ಬಹುತೇಕರು ಮಾಸ್ಕ್ ಧರಿಸಿರಲಿಲ್ಲ. ಕನಿಷ್ಠ ಅಂತರ ಕಾಪಾಡಿರಲಿಲ್ಲ. ಮೆರವಣಿಗೆ ವೇಳೆ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿ ಸವಾರರು ತೊಂದರೆ ಅನುಭವಿಸಿದರು.</p>.<p>ಹಗರೆ ಗ್ರಾಮದಲ್ಲಿಯೂಡಿಜೆ ಅಬ್ಬರದೊಂದಿಗೆ ವೈಭವದಿಂದ ಆಚರಣೆ ನಡೆದಿದೆ. ಸಮುದಾಯ ಭವನದಲ್ಲಿ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಜಿಲ್ಲಾಧಿಕಾರಿ ಆರ್.ಗಿರೀಶ್ ಪ್ರತಿಕ್ರಿಯಿಸಿ, ‘ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿರುವುದು ಗಮನಕ್ಕೆ ಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳೇಬೀಡು</strong>: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ.ಸುರೇಶ್ ಅವರು ಕೋವಿಡ್ ನಿಯಮ ಉಲ್ಲಂಘಿಸಿ ಶುಕ್ರವಾರ ರಾತ್ರಿ ಹುಟ್ಟುಹಬ್ಬವನ್ನು ಬೇಲೂರು ಹಾಗೂ ಹಗರೆಯಲ್ಲಿ ಅದ್ದೂರಿಯಾಗಿ ಆಚರಿಸಿಕೊಂಡಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.</p>.<p>ಬೇಲೂರಿನಲ್ಲಿ ಬಸವೇಶ್ವರ ವೃತ್ತದಿಂದ ತೆರೆದ ವಾಹನದಲ್ಲಿ ಚನ್ನಕೇಶವ ದೇವಾಲಯದವರೆಗೆ ಮೆರವಣಿಗೆ ನಡೆಸಿದ್ದಾರೆ. ನೂರಾರು ಮಂದಿ ಭಾಗವಹಿಸಿದ್ದು, ಬಹುತೇಕರು ಮಾಸ್ಕ್ ಧರಿಸಿರಲಿಲ್ಲ. ಕನಿಷ್ಠ ಅಂತರ ಕಾಪಾಡಿರಲಿಲ್ಲ. ಮೆರವಣಿಗೆ ವೇಳೆ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿ ಸವಾರರು ತೊಂದರೆ ಅನುಭವಿಸಿದರು.</p>.<p>ಹಗರೆ ಗ್ರಾಮದಲ್ಲಿಯೂಡಿಜೆ ಅಬ್ಬರದೊಂದಿಗೆ ವೈಭವದಿಂದ ಆಚರಣೆ ನಡೆದಿದೆ. ಸಮುದಾಯ ಭವನದಲ್ಲಿ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಜಿಲ್ಲಾಧಿಕಾರಿ ಆರ್.ಗಿರೀಶ್ ಪ್ರತಿಕ್ರಿಯಿಸಿ, ‘ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿರುವುದು ಗಮನಕ್ಕೆ ಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>