<p><strong>ಹಾಸನ:</strong> ತಾಲ್ಲೂಕಿನ ಹೂವಿನಹಳ್ಳಿ ಕಾವಲು ಬಳಿ ಶುಕ್ರವಾರ ರಾತ್ರಿ ಸೆಸ್ಕ್ ನೌಕರನನ್ನು ಗುಂಡಿಕ್ಕಿ ಹತ್ಯೆ<br />ಮಾಡಲಾಗಿದೆ.<br /><br />ಕಿರಿಯ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ (35) ಕೊಲೆಯಾದ ವ್ಯಕ್ತಿ. ಘಟನಾ ಸ್ಥಳದಲ್ಲಿ<br />ಆಹಾರದ ಪೊಟ್ಟಣ, ಮದ್ಯದ ಬಾಟಲ್ಗಳು ಪತ್ತೆಯಾಗಿದ್ದು, ಮದ್ಯದ ಪಾರ್ಟಿ ನಂತರ ಶೂಟೌಟ್ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆರೋಪಿಗಳ ಪತ್ತೆಗೆ ಶೋಧ ಆರಂಭಿಸಿದ್ದಾರೆ.</p>.<p>ಮೃತನ ತಂದೆ ರಂಗೇಗೌಡ ಅವರು ಕರ್ತವ್ಯದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಅನುಕಂಪದ<br />ಆಧಾರದ ಮೇಲೆ ಸಂತೋಷ್ಗೆ ಸರ್ಕಾರಿ ನೌಕರಿ ದೊರಕಿತ್ತು.</p>.<p>13 ವರ್ಷಗಳ ಹಿಂದೆ ಜಯಶ್ರೀ ಎಂಬಾಕೆಯನ್ನು ಮದುವೆಯಾಗಿದ್ದ ಸಂತೋಷ್ಗೆ ಇಬ್ಬರು ಹೆಣ್ಣು<br />ಮಕ್ಕಳಿದ್ದಾರೆ. ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಪತ್ನಿ ಮತ್ತು ಮಕ್ಕಳೊಂದಿಗೆ ವಾಸವಾಗಿದ್ದರು. ಆಗಾಗ್ಗೆ ಸ್ವಗ್ರಾಮ ಅರೇಕಲ್ಲು ಹೊಸಳ್ಳಿಗೆ ಬಂದು ತಾಯಿ ಹಾಗೂ ಸಂಬಂಧಿಕರನ್ನು ಮಾತನಾಡಿಸಿಕೊಂಡು ಹೋಗುತ್ತಿದ್ದರು.<br /><br />ಪಾರ್ಟಿ ಇದೆ ಎಂದು ಹೇಳಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮನೆಯಿಂದ ಹೊರ ಹೋದ<br />ಸಂತೋಷ್ ತಡರಾತ್ರಿಯಾದರೂ ಬಾರದೇ ಇದ್ದಾಗ ಗಾಬರಿಗೊಂಡ ಪತ್ನಿ ಅವರ ಮೊಬೈಲ್ಗೆ ಕರೆ<br />ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸಲಿಲ್ಲ. ಶನಿವಾರ ಸಂತೋಷ್ ಶವ ಹೊಲದಲ್ಲಿ ಪತ್ತೆಯಾಗಿದೆ.</p>.<p>ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ, ಗ್ರಾಮಾಂತರ ಸಿಪಿಐ ಪಿ.ಸುರೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ<br />ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>‘ಸಂತೋಷ್ಗೆ ಪರಿಚಯ ಇದ್ದವರೇ ಪಾರ್ಟಿ ನೆಪದಲ್ಲಿ ಹೊರಗಡೆ ಕರೆದುಕೊಂಡು ಹೋಗಿ ಶೂಟೌಟ್ ಮಾಡಿರಬಹುದು. ಪ್ರಾಥಮಿಕ ಮಾಹಿತಿ ಪ್ರಕಾರ ಮೂವರು ಭಾಗಿಯಾಗಿರುವ ಶಂಕೆ ಇದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ಎಸ್ಪಿ ಶ್ರೀನಿವಾಸ್ಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ತಾಲ್ಲೂಕಿನ ಹೂವಿನಹಳ್ಳಿ ಕಾವಲು ಬಳಿ ಶುಕ್ರವಾರ ರಾತ್ರಿ ಸೆಸ್ಕ್ ನೌಕರನನ್ನು ಗುಂಡಿಕ್ಕಿ ಹತ್ಯೆ<br />ಮಾಡಲಾಗಿದೆ.<br /><br />ಕಿರಿಯ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ (35) ಕೊಲೆಯಾದ ವ್ಯಕ್ತಿ. ಘಟನಾ ಸ್ಥಳದಲ್ಲಿ<br />ಆಹಾರದ ಪೊಟ್ಟಣ, ಮದ್ಯದ ಬಾಟಲ್ಗಳು ಪತ್ತೆಯಾಗಿದ್ದು, ಮದ್ಯದ ಪಾರ್ಟಿ ನಂತರ ಶೂಟೌಟ್ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆರೋಪಿಗಳ ಪತ್ತೆಗೆ ಶೋಧ ಆರಂಭಿಸಿದ್ದಾರೆ.</p>.<p>ಮೃತನ ತಂದೆ ರಂಗೇಗೌಡ ಅವರು ಕರ್ತವ್ಯದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಅನುಕಂಪದ<br />ಆಧಾರದ ಮೇಲೆ ಸಂತೋಷ್ಗೆ ಸರ್ಕಾರಿ ನೌಕರಿ ದೊರಕಿತ್ತು.</p>.<p>13 ವರ್ಷಗಳ ಹಿಂದೆ ಜಯಶ್ರೀ ಎಂಬಾಕೆಯನ್ನು ಮದುವೆಯಾಗಿದ್ದ ಸಂತೋಷ್ಗೆ ಇಬ್ಬರು ಹೆಣ್ಣು<br />ಮಕ್ಕಳಿದ್ದಾರೆ. ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಪತ್ನಿ ಮತ್ತು ಮಕ್ಕಳೊಂದಿಗೆ ವಾಸವಾಗಿದ್ದರು. ಆಗಾಗ್ಗೆ ಸ್ವಗ್ರಾಮ ಅರೇಕಲ್ಲು ಹೊಸಳ್ಳಿಗೆ ಬಂದು ತಾಯಿ ಹಾಗೂ ಸಂಬಂಧಿಕರನ್ನು ಮಾತನಾಡಿಸಿಕೊಂಡು ಹೋಗುತ್ತಿದ್ದರು.<br /><br />ಪಾರ್ಟಿ ಇದೆ ಎಂದು ಹೇಳಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮನೆಯಿಂದ ಹೊರ ಹೋದ<br />ಸಂತೋಷ್ ತಡರಾತ್ರಿಯಾದರೂ ಬಾರದೇ ಇದ್ದಾಗ ಗಾಬರಿಗೊಂಡ ಪತ್ನಿ ಅವರ ಮೊಬೈಲ್ಗೆ ಕರೆ<br />ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸಲಿಲ್ಲ. ಶನಿವಾರ ಸಂತೋಷ್ ಶವ ಹೊಲದಲ್ಲಿ ಪತ್ತೆಯಾಗಿದೆ.</p>.<p>ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ, ಗ್ರಾಮಾಂತರ ಸಿಪಿಐ ಪಿ.ಸುರೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ<br />ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>‘ಸಂತೋಷ್ಗೆ ಪರಿಚಯ ಇದ್ದವರೇ ಪಾರ್ಟಿ ನೆಪದಲ್ಲಿ ಹೊರಗಡೆ ಕರೆದುಕೊಂಡು ಹೋಗಿ ಶೂಟೌಟ್ ಮಾಡಿರಬಹುದು. ಪ್ರಾಥಮಿಕ ಮಾಹಿತಿ ಪ್ರಕಾರ ಮೂವರು ಭಾಗಿಯಾಗಿರುವ ಶಂಕೆ ಇದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ಎಸ್ಪಿ ಶ್ರೀನಿವಾಸ್ಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>