ಹಾಸನ: ತಾಲ್ಲೂಕಿನ ಹೂವಿನಹಳ್ಳಿ ಕಾವಲು ಬಳಿ ಶುಕ್ರವಾರ ರಾತ್ರಿ ಸೆಸ್ಕ್ ನೌಕರನನ್ನು ಗುಂಡಿಕ್ಕಿ ಹತ್ಯೆ
ಮಾಡಲಾಗಿದೆ.
ಕಿರಿಯ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ (35) ಕೊಲೆಯಾದ ವ್ಯಕ್ತಿ. ಘಟನಾ ಸ್ಥಳದಲ್ಲಿ
ಆಹಾರದ ಪೊಟ್ಟಣ, ಮದ್ಯದ ಬಾಟಲ್ಗಳು ಪತ್ತೆಯಾಗಿದ್ದು, ಮದ್ಯದ ಪಾರ್ಟಿ ನಂತರ ಶೂಟೌಟ್ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆರೋಪಿಗಳ ಪತ್ತೆಗೆ ಶೋಧ ಆರಂಭಿಸಿದ್ದಾರೆ.