<p><strong>ಸಕಲೇಶಪುರ: </strong>ಒಂದು ವಾರದಿಂದ ಭಾರಿ ಗಾಳಿ ಹಾಗೂ ಮಳೆಯಿಂದಾಗಿ ಸಕಲೇಶಪುರ, ಆಲೂರು, ಬೇಲೂರು ತಾಲ್ಲೂಕುಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸೋಮವಾರ ಮಧ್ಯಾಹ್ನದೊಳಗೆ ಸಂಪರ್ಕ ಕಲ್ಪಿ ಸಲು ಸೆಸ್ಕ್ ಅಧಿಕಾರಿಗಳು, ಸಿಬ್ಬಂದಿ ಶ್ರಮಿಸುತ್ತಿದ್ದಾರೆ ಎಂದು ಉಪವಿಭಾ ಗಾಧಿಕಾರಿ ಎಂ.ಗಿರೀಶ್ ನಂದನ್ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಮೂರು ತಾಲ್ಲೂಕುಗಳಲ್ಲಿ 725ಕ್ಕೂ ಹೆಚ್ಚು ವಿದ್ಯುತ್ ಕಂಬಗಳು, 10ಕ್ಕೂ ಹೆಚ್ಚು ಟ್ರಾನ್ಸ್ಫಾರ್ಮರ್ಗಳು ನೆಲಕ್ಕುರುಳಿವೆ. ಇದರಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ 8 ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುಡಿಯುವ ನೀರು ಸರಬರಾಜು ಸ್ಥಗಿತಗೊಂಡಿದೆ ಎಂದರು.</p>.<p>ಸೆಸ್ಕ್ ಸೂಪರ್ಇಂಟೆಂಡಿಂಗ್ ಎಂಜಿನಿ ಯರ್ ಸುಚೇತನ್, ಕಾರ್ಯ ಪಾಲಕ ಎಂಜಿನಿಯರ್ ಜಗದೀಶ್, ಇತರ ಅಧಿಕಾರಿಗಳು, ಸಿಬ್ಬಂದಿ ಶ್ರಮಿಸುತ್ತಿದ್ದಾರೆ ಎಂದರು.</p>.<p class="Subhead">ಹೆಚ್ಚುವರಿಯಾಗಿ 50 ಸಿಬ್ಬಂದಿ ನಿಯೋಜನೆ: ಮೂರು ತಾಲ್ಲೂಕುಗಳಲ್ಲಿ ವಿದ್ಯುತ್ ಸಂಪರ್ಕ ದುರಸ್ತಿ ಕಾಮಗಾರಿಗೆ ಮಂಡ್ಯ ಜಿಲ್ಲೆ, ಹೊಳೆನರಸೀಪುರ ಉಪ ವಿಭಾಗದಿಂದ 50 ಮಂದಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದೆ. ಸಕಲೇಶಪುರ ತಾಲ್ಲೂಕಿನಲ್ಲಿ ಪ್ರತ್ಯೇಕ 8 ತಂಡಗಳು (ಒಂದು ತಂಡದಲ್ಲಿ 8 ಮಂದಿ) ಕೆಲಸ ಮಾಡುತ್ತಿವೆ. ಪ್ರತಿ ತಂಡದಲ್ಲಿ ವಿದ್ಯುತ್ ಕಂಬವನ್ನು ನೆಡುವುದಕ್ಕಾಗಿ ಡ್ರಿಲ್ಲಿಂಗ್ ಯಂತ್ರ ಅಳವಡಿಸಿರುವ ಟ್ರಾಕ್ಟರ್ಗಳನ್ನು ಬಳಸಲಾಗುತ್ತಿದೆ. ಇಲಾಖೆ ಸಿಬ್ಬಂದಿ ರಾತ್ರಿ 12 ಗಂಟೆವರೆಗೂ ಕೆಲಸ ನಿರ್ವಹಿ ಸುತ್ತಿದ್ದಾರೆ ಎಂದು ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಜಗದೀಶ್ ಹೇಳಿದರು.</p>.<p class="Subhead">₹ 10 ಸಾವಿರ ಪರಿಹಾರ: ಅತಿವೃಷ್ಟಿ ಯಿಂದ ಕುಸಿತಕ್ಕೆ ಒಳಗಾದ ಮನೆಗಳಲ್ಲಿ ಪಾತ್ರೆ, ಬಟ್ಟೆಗಳು ಹಾಳಾ ಗಿದ್ದರೆ ಅಂಥ ಕುಟುಂಬಗಳಿಗೆ ತಕ್ಷಣವೇ ₹ 10 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ಉಪವಿಭಾಗಾಧಿಕಾರಿ ಹೇಳಿದರು.</p>.<p>ತಹಶೀಲ್ದಾರ್ ಮಂಜುನಾಥ್ ಈಗಾಗಲೇ ಅಂತಹ ಸುಮಾರು 18 ಕುಟುಂಬಗಳನ್ನು ದಾಖಲಿಸಿಕೊಂಡಿ ದ್ದಾರೆ. ಅವರಿಗೆ ಚೆಕ್ ಮೂಲಕ ಪರಿಹಾರದ ಹಣ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಮನೆ ಚಾವಣಿ ಹಾನಿ, ಗೋಡೆ ಕುಸಿತ, ಮನೆ ಕುಸಿತ ಪ್ರಕರಣಗಳಿಗೆ ಪ್ರತ್ಯೇಕವಾಗಿ ಪರಿಹಾರ ವಿತರಣೆ ಮಾಡಲಾಗುವುದು ಎಂದರು.</p>.<p>ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಿಂದ ಭತ್ತ, ಕಾಳುಮೆಣಸು ಹಾಗೂ ಇತರ ಬೆಳೆಗಳ ಹಾನಿ, ಕಾಫಿ ಮಂಡಳಿಯಿಂದ ಕಾಫಿ ಬೆಳೆ ಹಾನಿ ಬಗ್ಗೆ ವರದಿ ಸಂಗ್ರಹಿಸಲಾಗುವುದು ಎಂದರು.</p>.<p class="Subhead">ಅರ್ಜಿ ಸಲ್ಲಿಸಿ: ಅತಿವೃಷ್ಟಿಯಿಂದ ಮನೆ, ಬೆಳೆ, ಆಸ್ತಿಪಾಸ್ತಿಗೆ ಹಾನಿಯಾಗಿದ್ದರೆ ಪರಿಹಾರಕ್ಕೆ ದಾಖಲೆ ಸಮೇತ ಅರ್ಜಿ ತಾಲ್ಲೂಕು ಕಚೇರಿಗೆ ಅಥವಾ ನಾಡ ಕಚೇರಿಗಳಿಗೆ ಸಲ್ಲಿಸುವಂತೆ ತಹಶೀಲ್ದಾರ್ ಮಂಜುನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ: </strong>ಒಂದು ವಾರದಿಂದ ಭಾರಿ ಗಾಳಿ ಹಾಗೂ ಮಳೆಯಿಂದಾಗಿ ಸಕಲೇಶಪುರ, ಆಲೂರು, ಬೇಲೂರು ತಾಲ್ಲೂಕುಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸೋಮವಾರ ಮಧ್ಯಾಹ್ನದೊಳಗೆ ಸಂಪರ್ಕ ಕಲ್ಪಿ ಸಲು ಸೆಸ್ಕ್ ಅಧಿಕಾರಿಗಳು, ಸಿಬ್ಬಂದಿ ಶ್ರಮಿಸುತ್ತಿದ್ದಾರೆ ಎಂದು ಉಪವಿಭಾ ಗಾಧಿಕಾರಿ ಎಂ.ಗಿರೀಶ್ ನಂದನ್ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಮೂರು ತಾಲ್ಲೂಕುಗಳಲ್ಲಿ 725ಕ್ಕೂ ಹೆಚ್ಚು ವಿದ್ಯುತ್ ಕಂಬಗಳು, 10ಕ್ಕೂ ಹೆಚ್ಚು ಟ್ರಾನ್ಸ್ಫಾರ್ಮರ್ಗಳು ನೆಲಕ್ಕುರುಳಿವೆ. ಇದರಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ 8 ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುಡಿಯುವ ನೀರು ಸರಬರಾಜು ಸ್ಥಗಿತಗೊಂಡಿದೆ ಎಂದರು.</p>.<p>ಸೆಸ್ಕ್ ಸೂಪರ್ಇಂಟೆಂಡಿಂಗ್ ಎಂಜಿನಿ ಯರ್ ಸುಚೇತನ್, ಕಾರ್ಯ ಪಾಲಕ ಎಂಜಿನಿಯರ್ ಜಗದೀಶ್, ಇತರ ಅಧಿಕಾರಿಗಳು, ಸಿಬ್ಬಂದಿ ಶ್ರಮಿಸುತ್ತಿದ್ದಾರೆ ಎಂದರು.</p>.<p class="Subhead">ಹೆಚ್ಚುವರಿಯಾಗಿ 50 ಸಿಬ್ಬಂದಿ ನಿಯೋಜನೆ: ಮೂರು ತಾಲ್ಲೂಕುಗಳಲ್ಲಿ ವಿದ್ಯುತ್ ಸಂಪರ್ಕ ದುರಸ್ತಿ ಕಾಮಗಾರಿಗೆ ಮಂಡ್ಯ ಜಿಲ್ಲೆ, ಹೊಳೆನರಸೀಪುರ ಉಪ ವಿಭಾಗದಿಂದ 50 ಮಂದಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದೆ. ಸಕಲೇಶಪುರ ತಾಲ್ಲೂಕಿನಲ್ಲಿ ಪ್ರತ್ಯೇಕ 8 ತಂಡಗಳು (ಒಂದು ತಂಡದಲ್ಲಿ 8 ಮಂದಿ) ಕೆಲಸ ಮಾಡುತ್ತಿವೆ. ಪ್ರತಿ ತಂಡದಲ್ಲಿ ವಿದ್ಯುತ್ ಕಂಬವನ್ನು ನೆಡುವುದಕ್ಕಾಗಿ ಡ್ರಿಲ್ಲಿಂಗ್ ಯಂತ್ರ ಅಳವಡಿಸಿರುವ ಟ್ರಾಕ್ಟರ್ಗಳನ್ನು ಬಳಸಲಾಗುತ್ತಿದೆ. ಇಲಾಖೆ ಸಿಬ್ಬಂದಿ ರಾತ್ರಿ 12 ಗಂಟೆವರೆಗೂ ಕೆಲಸ ನಿರ್ವಹಿ ಸುತ್ತಿದ್ದಾರೆ ಎಂದು ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಜಗದೀಶ್ ಹೇಳಿದರು.</p>.<p class="Subhead">₹ 10 ಸಾವಿರ ಪರಿಹಾರ: ಅತಿವೃಷ್ಟಿ ಯಿಂದ ಕುಸಿತಕ್ಕೆ ಒಳಗಾದ ಮನೆಗಳಲ್ಲಿ ಪಾತ್ರೆ, ಬಟ್ಟೆಗಳು ಹಾಳಾ ಗಿದ್ದರೆ ಅಂಥ ಕುಟುಂಬಗಳಿಗೆ ತಕ್ಷಣವೇ ₹ 10 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ಉಪವಿಭಾಗಾಧಿಕಾರಿ ಹೇಳಿದರು.</p>.<p>ತಹಶೀಲ್ದಾರ್ ಮಂಜುನಾಥ್ ಈಗಾಗಲೇ ಅಂತಹ ಸುಮಾರು 18 ಕುಟುಂಬಗಳನ್ನು ದಾಖಲಿಸಿಕೊಂಡಿ ದ್ದಾರೆ. ಅವರಿಗೆ ಚೆಕ್ ಮೂಲಕ ಪರಿಹಾರದ ಹಣ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಮನೆ ಚಾವಣಿ ಹಾನಿ, ಗೋಡೆ ಕುಸಿತ, ಮನೆ ಕುಸಿತ ಪ್ರಕರಣಗಳಿಗೆ ಪ್ರತ್ಯೇಕವಾಗಿ ಪರಿಹಾರ ವಿತರಣೆ ಮಾಡಲಾಗುವುದು ಎಂದರು.</p>.<p>ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಿಂದ ಭತ್ತ, ಕಾಳುಮೆಣಸು ಹಾಗೂ ಇತರ ಬೆಳೆಗಳ ಹಾನಿ, ಕಾಫಿ ಮಂಡಳಿಯಿಂದ ಕಾಫಿ ಬೆಳೆ ಹಾನಿ ಬಗ್ಗೆ ವರದಿ ಸಂಗ್ರಹಿಸಲಾಗುವುದು ಎಂದರು.</p>.<p class="Subhead">ಅರ್ಜಿ ಸಲ್ಲಿಸಿ: ಅತಿವೃಷ್ಟಿಯಿಂದ ಮನೆ, ಬೆಳೆ, ಆಸ್ತಿಪಾಸ್ತಿಗೆ ಹಾನಿಯಾಗಿದ್ದರೆ ಪರಿಹಾರಕ್ಕೆ ದಾಖಲೆ ಸಮೇತ ಅರ್ಜಿ ತಾಲ್ಲೂಕು ಕಚೇರಿಗೆ ಅಥವಾ ನಾಡ ಕಚೇರಿಗಳಿಗೆ ಸಲ್ಲಿಸುವಂತೆ ತಹಶೀಲ್ದಾರ್ ಮಂಜುನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>