ನಗರದ ಹೇಮಾವತಿ ಪ್ರತಿಮೆ, ಸಹ್ಯಾದ್ರಿ ಚಿತ್ರಮಂದಿರದ ಬಳಿ ಅಳವಡಿಸಿದ್ದ ಎಲ್ಇಡಿ ಪರದೆಯಲ್ಲಿ ಸಂಜೆ 7 ಗಂಟೆಗೆ ಗೋಧೂಳಿ ಲಗ್ನದಲ್ಲಿ ಮೋದಿ ಪ್ರಮಾಣ ವಚನ ಸ್ವೀಕರಿಸಿದ ದೃಶ್ಯ ಪ್ರಸಾರವಾಗುತ್ತಿದ್ದಂತೆ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಕರ್ನಾಟಕದ ಸಂಸದರಾದ ಸದಾನಂದಗೌಡ, ಪ್ರಹ್ಲಾದ ಜೋಷಿ, ಸುರೇಶ್ ಅಂಗಡಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಚಪ್ಪಾಳೆ ತಟ್ಟಿ ಸಂತಸ ಪಟ್ಟರು.