ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿದ್ದಾರೆ. ಇದು ಮಿನಿ ಕಾದಂಬರಿ ರೀತಿಯಲ್ಲಿದೆ. ಕೃತಿಕಾರ ಎಚ್.ಎಸ್. ಶ್ರೀಕಂಠಯ್ಯ ಮಾತನಾಡಿ, ಎಚ್.ಡಿ. ದೇವೇಗೌಡ, ಸಿ.ಎಸ್. ಪುಟ್ಟೇಗೌಡ, ಗಂಗಣ್ಣ ಜತೆಗಿನ ರಾಜಕೀಯ ಒಡನಾಟ. ರಾಜಕೀಯ,ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿರುವುದನ್ನು ಈ ಕೃತಿಯಲ್ಲಿ ದಾಖಲು ಮಾಡಿದ್ದೇನೆ. ಒಂದು ಸಾವಿರ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದರು. ಪ್ರಮುಖರಾದ ಆರ್.ಕೆ. ನಲ್ಲೂರು ಪ್ರಸಾದ್, ಸಿ.ಎಸ್. ಪುಟ್ಟೇಗೌಡ, ಎ.ಈ. ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ತು ಸಲಹಾ ಸಮಿತಿ ಸದಸ್ಯ ಮುದ್ದೇಗೌಡ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಹೇಳಿದರು. ಮುಖಂಡ ಎ.ಸಿ. ಆನಂದ್ ಕುಮಾರ್ ಭಾಗವಹಿಸಿದ್ದರು.