<p><strong>ಚನ್ನರಾಯಪಟ್ಟಣ:</strong> ಉತ್ತಮ ಜೀವನ ಕ್ರಮದಿಂದ ಕ್ಯಾನ್ಸರ್ ತಡೆಗಟ್ಟಬಹುದು ಎಂದು ಹಾಸನದ ಡಾ.ಸಿ.ಎನ್. ಜಗದೀಶ್ ಹೇಳಿದರು.</p>.<p>ಪಟ್ಟಣದ ಆದಿಚುಂಚನಗಿರಿ ಕಾಲೇಜಿನ ಯುವ ರೆಡ್ಕ್ರಾಸ್ ಘಟಕ ಮತ್ತು ರೆಡ್ ರಿಬ್ಬನ್ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಕ್ಯಾನ್ಸರ್ ದಿನದ ಜಾಗೃತಿಯಲ್ಲಿ ಅವರು ಮಾತನಾಡಿದರು. ಮದ್ಯಪಾನ ಮತ್ತು ಧೂಮಪಾನ , ಅನಾರೋಗ್ಯಕರ ಆಹಾರದ ಪದ್ಧತಿ ಮತ್ತು ದೈಹಿಕ ಚಟುವಟಿಕೆಯ ಕೊರತೆಯಿಂದ ಕ್ಯಾನ್ಸರ್ ಬರುತ್ತದೆ. ಇತ್ತೀಚೆಗೆ ಸಂಖ್ಯೆ ಹೆಚ್ಚಾಗುತ್ತಿದೆ ಎಂದರು.</p>.<p>ನಿಯಮಿತ ವ್ಯಾಯಾಮ, ಯೋಗಾಸನ, ಧ್ಯಾನ, ಆಹಾರದಲ್ಲಿ ತರಕಾರಿ ಹೆಚ್ಚು ಬಳಕೆ ಸೇರಿದಂತೆ ಸಮತೋಲನ ಆಹಾರ ಸೇವಿಸಬೇಕು. ಮದ್ಯಪಾನ ಮತ್ತು ಧೂಮಪಾನ ತ್ಯಜಿಸಬೇಕು ಎಂದು ತಿಳಿಸಿದರು.</p>.<p>ಪಟ್ಟಣದ ಪುಣ್ಯ ಆಸ್ಪತ್ರೆಯ ಮುಖ್ಯಸ್ಥ ಡಾ. ವಿ. ಮಹೇಶ್ ಮಾತನಾಡಿ, ಜೀವನ ಶೈಲಿಯಿಂದ ಕ್ಯಾನ್ಸರ್ ಬರುತ್ತದೆ. ಕ್ಯಾನ್ಸರ್ ಬಂದಾಗ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಗುಣಮುಖರಾಗಬಹುದು. ಕ್ಯಾನ್ಸರ್ ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.<br /> ಕಾಲೇಜು ಪ್ರಾಂಶುಪಾಲ ಎಂ.ಕೆ. ಮಂಜುನಾಥ್ ಮಾತನಾಡಿ, ಉತ್ತಮ ಜೀವನ ಕ್ರಮ ಅನುಸರಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಚಾಲಕಿ ಎಂ. ನಿರುಪಮಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ:</strong> ಉತ್ತಮ ಜೀವನ ಕ್ರಮದಿಂದ ಕ್ಯಾನ್ಸರ್ ತಡೆಗಟ್ಟಬಹುದು ಎಂದು ಹಾಸನದ ಡಾ.ಸಿ.ಎನ್. ಜಗದೀಶ್ ಹೇಳಿದರು.</p>.<p>ಪಟ್ಟಣದ ಆದಿಚುಂಚನಗಿರಿ ಕಾಲೇಜಿನ ಯುವ ರೆಡ್ಕ್ರಾಸ್ ಘಟಕ ಮತ್ತು ರೆಡ್ ರಿಬ್ಬನ್ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಕ್ಯಾನ್ಸರ್ ದಿನದ ಜಾಗೃತಿಯಲ್ಲಿ ಅವರು ಮಾತನಾಡಿದರು. ಮದ್ಯಪಾನ ಮತ್ತು ಧೂಮಪಾನ , ಅನಾರೋಗ್ಯಕರ ಆಹಾರದ ಪದ್ಧತಿ ಮತ್ತು ದೈಹಿಕ ಚಟುವಟಿಕೆಯ ಕೊರತೆಯಿಂದ ಕ್ಯಾನ್ಸರ್ ಬರುತ್ತದೆ. ಇತ್ತೀಚೆಗೆ ಸಂಖ್ಯೆ ಹೆಚ್ಚಾಗುತ್ತಿದೆ ಎಂದರು.</p>.<p>ನಿಯಮಿತ ವ್ಯಾಯಾಮ, ಯೋಗಾಸನ, ಧ್ಯಾನ, ಆಹಾರದಲ್ಲಿ ತರಕಾರಿ ಹೆಚ್ಚು ಬಳಕೆ ಸೇರಿದಂತೆ ಸಮತೋಲನ ಆಹಾರ ಸೇವಿಸಬೇಕು. ಮದ್ಯಪಾನ ಮತ್ತು ಧೂಮಪಾನ ತ್ಯಜಿಸಬೇಕು ಎಂದು ತಿಳಿಸಿದರು.</p>.<p>ಪಟ್ಟಣದ ಪುಣ್ಯ ಆಸ್ಪತ್ರೆಯ ಮುಖ್ಯಸ್ಥ ಡಾ. ವಿ. ಮಹೇಶ್ ಮಾತನಾಡಿ, ಜೀವನ ಶೈಲಿಯಿಂದ ಕ್ಯಾನ್ಸರ್ ಬರುತ್ತದೆ. ಕ್ಯಾನ್ಸರ್ ಬಂದಾಗ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಗುಣಮುಖರಾಗಬಹುದು. ಕ್ಯಾನ್ಸರ್ ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.<br /> ಕಾಲೇಜು ಪ್ರಾಂಶುಪಾಲ ಎಂ.ಕೆ. ಮಂಜುನಾಥ್ ಮಾತನಾಡಿ, ಉತ್ತಮ ಜೀವನ ಕ್ರಮ ಅನುಸರಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಚಾಲಕಿ ಎಂ. ನಿರುಪಮಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>