<p><strong>ಹಾಸನ:</strong> ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲವಘಟ್ಟ ಗ್ರಾಮದ ಹೊಸಕೆರೆಯಲ್ಲಿ ಅಂತನಹಳ್ಳಿ ಗ್ರಾಮದ ಜಗದೀಶ್ (42) ಅವರ ಶವ ದೊರೆತಿದ್ದು, ಅವರನ್ನು ಕೊಲೆ ಮಾಡಿ ಕೆರೆಗೆ ಹಾಕಲಾಗಿದೆ ಎಂದು ಆರೋಪಿಸಿ ವ್ಯಕ್ತಿಯ ಪತ್ನಿ ಚನ್ನರಾಯಪಟ್ಟಣ ನಗರ ಠಾಣೆಗೆ ದೂರು ನೀಡಿದ್ದಾರೆ.</p>.<p>ಆರೋಪಿಗಳಾದ ಬಸವರಾಜ್ ಹಾಗೂ ಮಂಜುನಾಥ್ ಅವರು, ಜಗದೀಶ್ ಅವರಿಗೆ ಬಡ್ಡಿಗೆ ₹10 ಸಾವಿರ ಸಾಲ ನೀಡಿದ್ದರು. ಬಡ್ಡಿ ಸೇರಿಸಿ ₹50 ಸಾವಿರ ನೀಡುವಂತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.</p>.<p>ಮಂಗಳವಾರ ಮಧ್ಯಾಹ್ನ ಜಗದೀಶ್ ಅವರಿಗೆ ಕಂಠಪೂರ್ತಿ ಮದ್ಯಪಾನ ಮಾಡಿಸಿರುವ ಅಂತನಹಳ್ಳಿ ಗ್ರಾಮದ ಬಸವರಾಜು, ಮಂಜೇಗೌಡ, ಮಲ್ಲವಘಟ್ಟ ಗ್ರಾಮದ ದಿಲೀಪ, ಸೋಮಶೇಖರ ಎಂಬುವವರು, ಕೆರೆಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾರೆ ಎಂದು ಮೃತರ ಪತ್ನಿ ಸವಿತಾ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಶೋಧ ನಡೆಸಿ, ಮೃತದೇಹವನ್ನು ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p><strong>ಆಸ್ತಿ ವಿವಾದ: ಚಿಕ್ಕಮ್ಮನ ಮೇಲೆ ಹಲ್ಲೆ</strong></p>.<p>ಹಾಸನ: ತಾಲ್ಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮ್ಮನ ಮೇಲೆ ಹಲ್ಲೆ ಮಾಡಿ, ಮನೆ ಧ್ವಂಸಗೊಳಿಸಲಾಗಿದೆ.</p>.<p>ಮರಿಗೌಡ ಅವರು ಎರಡು ವರ್ಷಗಳ ಹಿಂದೆ ನಿಧನರಾಗಿದ್ದು, ಅವರ ಎರಡನೇ ಪತ್ನಿ ಅಶ್ವಿನಿ ಅವರು ಸಂಕೇನಹಳ್ಳಿಯ ಮನೆಯಲ್ಲಿ ವಾಸವಾಗಿದ್ದರು. ತಂದೆಯ ಆಸ್ತಿಯನ್ನು ಬಿಟ್ಟು ಕೊಡುವಂತೆ ಮೊದಲ ಹೆಂಡತಿಯ ಮಕ್ಕಳಾದ ಚಂದನ್ ಮತ್ತು ಚೇತನ್ ನಿತ್ಯ ಗಲಾಟೆ ನಡೆಸುತ್ತಿದ್ದರು.</p>.<p>ಗುರುವಾರ ರಾತ್ರಿ ಚಂದನ್ ಹಾಗೂ ಚೇತನ್, ಅಶ್ವಿನಿ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿ ಮನೆಯಿಂದ ಹೊರದಬ್ಬಿದ್ದಾರೆ. ಈ ವೇಳೆ ಮನೆಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದಾರೆ.</p>.<p>ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಗ್ರಾಮಾಂತರ ಠಾಣೆ ಪ್ರಕರಣ ದಾಖಲಾಗಿದೆ.</p>.<p><strong>₹8.10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು</strong></p>.<p>ಹಾಸನ: ಇಲ್ಲಿನ ವಲ್ಲಭಭಾಯಿ ರಸ್ತೆಯ ಇರ್ಫಾನ್ ಪಾಷ ಅವರ ಮನೆಗೆ ಹಿಂಬಾಗಿಲಿನಿಂದ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ₹8.10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ.</p>.<p>ಫೆ.25 ರಂದು ರಾತ್ರಿ 11.30ರ ಸಮಯದಲ್ಲಿ ಮನೆಯ ಮುಂಬಾಗಿಲು ಮತ್ತು ಹಿಂಬಾಗಿಲನ್ನು ತೆಗೆಯಲಾಗಿತ್ತು. ಹಿಂಬಾಗಿಲಿನಿಂದ ಮನೆಯ ಒಳಗೆ ಬಂದ ಅಪರಿಚಿತ ವ್ಯಕ್ತಿ, ಡ್ರೆಸ್ಸಿಂಗ್ ಟೇಬಲ್ ಮೇಲೆ ಇಟ್ಟಿದ್ದ 81 ಗ್ರಾಂ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿದ್ದಾನೆ. ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲವಘಟ್ಟ ಗ್ರಾಮದ ಹೊಸಕೆರೆಯಲ್ಲಿ ಅಂತನಹಳ್ಳಿ ಗ್ರಾಮದ ಜಗದೀಶ್ (42) ಅವರ ಶವ ದೊರೆತಿದ್ದು, ಅವರನ್ನು ಕೊಲೆ ಮಾಡಿ ಕೆರೆಗೆ ಹಾಕಲಾಗಿದೆ ಎಂದು ಆರೋಪಿಸಿ ವ್ಯಕ್ತಿಯ ಪತ್ನಿ ಚನ್ನರಾಯಪಟ್ಟಣ ನಗರ ಠಾಣೆಗೆ ದೂರು ನೀಡಿದ್ದಾರೆ.</p>.<p>ಆರೋಪಿಗಳಾದ ಬಸವರಾಜ್ ಹಾಗೂ ಮಂಜುನಾಥ್ ಅವರು, ಜಗದೀಶ್ ಅವರಿಗೆ ಬಡ್ಡಿಗೆ ₹10 ಸಾವಿರ ಸಾಲ ನೀಡಿದ್ದರು. ಬಡ್ಡಿ ಸೇರಿಸಿ ₹50 ಸಾವಿರ ನೀಡುವಂತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.</p>.<p>ಮಂಗಳವಾರ ಮಧ್ಯಾಹ್ನ ಜಗದೀಶ್ ಅವರಿಗೆ ಕಂಠಪೂರ್ತಿ ಮದ್ಯಪಾನ ಮಾಡಿಸಿರುವ ಅಂತನಹಳ್ಳಿ ಗ್ರಾಮದ ಬಸವರಾಜು, ಮಂಜೇಗೌಡ, ಮಲ್ಲವಘಟ್ಟ ಗ್ರಾಮದ ದಿಲೀಪ, ಸೋಮಶೇಖರ ಎಂಬುವವರು, ಕೆರೆಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾರೆ ಎಂದು ಮೃತರ ಪತ್ನಿ ಸವಿತಾ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಶೋಧ ನಡೆಸಿ, ಮೃತದೇಹವನ್ನು ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p><strong>ಆಸ್ತಿ ವಿವಾದ: ಚಿಕ್ಕಮ್ಮನ ಮೇಲೆ ಹಲ್ಲೆ</strong></p>.<p>ಹಾಸನ: ತಾಲ್ಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮ್ಮನ ಮೇಲೆ ಹಲ್ಲೆ ಮಾಡಿ, ಮನೆ ಧ್ವಂಸಗೊಳಿಸಲಾಗಿದೆ.</p>.<p>ಮರಿಗೌಡ ಅವರು ಎರಡು ವರ್ಷಗಳ ಹಿಂದೆ ನಿಧನರಾಗಿದ್ದು, ಅವರ ಎರಡನೇ ಪತ್ನಿ ಅಶ್ವಿನಿ ಅವರು ಸಂಕೇನಹಳ್ಳಿಯ ಮನೆಯಲ್ಲಿ ವಾಸವಾಗಿದ್ದರು. ತಂದೆಯ ಆಸ್ತಿಯನ್ನು ಬಿಟ್ಟು ಕೊಡುವಂತೆ ಮೊದಲ ಹೆಂಡತಿಯ ಮಕ್ಕಳಾದ ಚಂದನ್ ಮತ್ತು ಚೇತನ್ ನಿತ್ಯ ಗಲಾಟೆ ನಡೆಸುತ್ತಿದ್ದರು.</p>.<p>ಗುರುವಾರ ರಾತ್ರಿ ಚಂದನ್ ಹಾಗೂ ಚೇತನ್, ಅಶ್ವಿನಿ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿ ಮನೆಯಿಂದ ಹೊರದಬ್ಬಿದ್ದಾರೆ. ಈ ವೇಳೆ ಮನೆಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದಾರೆ.</p>.<p>ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಗ್ರಾಮಾಂತರ ಠಾಣೆ ಪ್ರಕರಣ ದಾಖಲಾಗಿದೆ.</p>.<p><strong>₹8.10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು</strong></p>.<p>ಹಾಸನ: ಇಲ್ಲಿನ ವಲ್ಲಭಭಾಯಿ ರಸ್ತೆಯ ಇರ್ಫಾನ್ ಪಾಷ ಅವರ ಮನೆಗೆ ಹಿಂಬಾಗಿಲಿನಿಂದ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ₹8.10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ.</p>.<p>ಫೆ.25 ರಂದು ರಾತ್ರಿ 11.30ರ ಸಮಯದಲ್ಲಿ ಮನೆಯ ಮುಂಬಾಗಿಲು ಮತ್ತು ಹಿಂಬಾಗಿಲನ್ನು ತೆಗೆಯಲಾಗಿತ್ತು. ಹಿಂಬಾಗಿಲಿನಿಂದ ಮನೆಯ ಒಳಗೆ ಬಂದ ಅಪರಿಚಿತ ವ್ಯಕ್ತಿ, ಡ್ರೆಸ್ಸಿಂಗ್ ಟೇಬಲ್ ಮೇಲೆ ಇಟ್ಟಿದ್ದ 81 ಗ್ರಾಂ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿದ್ದಾನೆ. ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>